ಮಡಿಕೇರಿಯಲ್ಲಿ ಜನ ಮಲಗಿದ್ದಾಗ ಚಿನ್ನ, ನಗದು ದೋಚಿದ ಕಳ್ಳರು
ಮಡಿಕೇರಿ ಏಪ್ರಿಲ್ 27: ಮನೆ ಮಂದಿ ಮಲಗಿದ್ದ ಸಂದರ್ಭ ಮನೆಯಿಂದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ದೋಚಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ವೀರಾಜಪೇಟೆಯ ಮುಖ್ಯ ರಸ್ತೆಯಲ್ಲಿರುವ ವರ್ತಕ ಎನ್.ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿರಾಜಪೇಟೆ ಮುಖ್ಯ ರಸ್ತೆಯ ಗಾಂಧಿನಗರಕ್ಕೆ ಹೋಗುವ ತಿರುವಿನಲ್ಲಿರುವ ಮನೆಯ ಹೆಂಚನ್ನು ತೆಗೆದು ಒಳ ನುಗ್ಗಿದ ಕಳ್ಳರು ಮನೆಯ ಮಾಲೀಕರು ಮತ್ತು ಅವರ ಕುಟುಂಬದವರು ಮಲಗಿದ್ದ ಪಕ್ಕದ ಕೊಠಡಿಯಲ್ಲಿದ್ದ ಅಲ್ಮೇರಾದ ಬಾಗಿಲನ್ನು ತೆಗೆದು ಚಿನ್ನದ ಬಳೆಗಳು, ಸರಗಳು, ಓಲೆಗಳು, ಉಂಗುರಗಳು ಸೇರಿದಂತೆ ಸುಮಾರು 160 ಗ್ರಾಂ ಗಳ ಚಿನ್ನಾಭರಣ, ಇದರ ಜೊತೆಯಲ್ಲಿ ಇಟ್ಟಿದ್ದ 5000 ರೂ. ನಗದು ಕಳವು ಮಾಡಿದ್ದಾರೆ.

ಶ್ರೀನಿವಾಸ್ ಅವರು ಬೆಳಿಗ್ಗೆ ಎದ್ದು ನೋಡಿದಾಗ ಅಲ್ಮೇರಾದ ಒಳಗಡೆ ಇದ್ದ ಎಲ್ಲಾ ಚಿನ್ನಾಭರಣ ನಗದನ್ನು ದೋಚಲಾಗಿತ್ತು. ಅವರ ಮನೆಯ ಮುಂದೆ ಹಾರ್ಡ್ ವೇರ್ ಮಳಿಗೆ ಇದ್ದು, ಅದರ ಹಿಂದೆ ಮನೆ ಇದೆ.
ರಾತ್ರಿ 11 ಗಂಟೆಯಿಂದ ಬೆಳಗಿನ 5 ಗಂಟೆ ಅವಧಿಯೊಳಗೆ ಈ ಕಳವು ನಡೆದಿರುವುದಾಗಿ ಹೇಳಲಾಗಿದೆ. ಯಾರೋ ಪರಿಚಯ ಇರುವ ದುಷ್ಕರ್ಮಿಗಳು ಈ ಕಳವು ನಡೆಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ನಗರ ಪೊಲೀಸರು ಮಡಿಕೇರಿಯಿಂದ ಶ್ವಾನ ದಳ ಕರೆಸಿದ್ದರೂ, ಮನೆಯ ಸುತ್ತ ಸಂಚರಿಸಿದ ಶ್ವಾನ ಅಲ್ಲಿಯೇ ನಿಂತಿದೆ. ಘಟನೆ ನಡೆದ ಸ್ಥಳದ ಕೊಠಡಿಯನ್ನು ಬೆರಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications