ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಬಾರಿ ಮಡಿಕೇರಿಯಲ್ಲಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ

|
Google Oneindia Kannada News

ಮಡಿಕೇರಿ, ಅಕ್ಟೋಬರ್.09: ಮೈಸೂರು ದಸರಾಕ್ಕೆ ಯಾವ ರೀತಿಯ ಇತಿಹಾಸವಿದೆಯೋ ಅದೇ ರೀತಿ ಮಡಿಕೇರಿ ದಸರಾಗೂ ತನ್ನದೇ ಆದ ಇತಿಹಾಸವಿದೆ. ಜತೆಗೆ ಎಂತಹ ಸಂದರ್ಭದಲ್ಲಿಯೂ ಇಲ್ಲಿಯ ಆಚರಣೆ ನಿಂತಿಲ್ಲ.

ಹೀಗಿರುವಾಗ ಈ ಬಾರಿ ಮಹಾಮಳೆ ಮತ್ತು ಭೂಕುಸಿತದಿಂದ ತತ್ತರಿಸಿರುವ ಮಡಿಕೇರಿಯಲ್ಲಿ ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ.

ಮಡಿಕೇರಿ ದಸರಾ ಆಚರಣೆಗೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪ ದಸರಾಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್ ಹೇಳಿದ್ದು, ದಸರಾವನ್ನು ಸರಳ, ಸಾಂಪ್ರದಾಯಿಕವಾಗಿ ಆಚರಿಸಲು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿಯ ಮಂಗಳೂರು ದಸರಾ ಉದ್ಘಾಟಿಸಲಿದ್ದಾರೆ ಸಿಎಂ ಕುಮಾರಸ್ವಾಮಿಈ ಬಾರಿಯ ಮಂಗಳೂರು ದಸರಾ ಉದ್ಘಾಟಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

ಇನ್ನು ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯೇ ದಶಮಂಟಪಗಳು. ಈ ಮಂಟಪಗಳ ತಯಾರಿಗೆ ಲಕ್ಷಾಂತರ ಹಣ ವ್ಯಯ ಮಾಡಬೇಕಾಗುತ್ತದೆ. ಪ್ರತಿಯೊಂದು ಸಮಿತಿಯ ಸದಸ್ಯರು ಹಗಲು ರಾತ್ರಿ ಎನ್ನದೆ ಓಡಾಡಿ, ಜನರಿಂದ ಹಣ ಸಂಗ್ರಹಿಸಿ ಮಂಟಪಗಳನ್ನು ನಿರ್ಮಾಣ ಮಾಡುತ್ತಿದ್ದರು. ಮುಂದೆ ಓದಿ...

 ಮಹೇಶ್ ಜೈನಿ ಮನವಿ

ಮಹೇಶ್ ಜೈನಿ ಮನವಿ

ಈ ಬಾರಿ ಕೊಡಗಿನ ಜನ ಸಂಕಷ್ಟದಲ್ಲಿದ್ದು, ಚಂದಾ ನೀಡುವ ಪರಿಸ್ಥಿತಿಯಲ್ಲಿ ಜನರಿಲ್ಲ. ಹೀಗಾಗಿ ಸರ್ಕಾರವೇ ಒಂದಷ್ಟು ಹೆಚ್ಚಿನ ಅನುದಾನ ನೀಡಬೇಕು ಎನ್ನುವುದು ಮಡಿಕೇರಿ ನಗರ ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ ಅವರ ಮನವಿಯಾಗಿದೆ

 ದಸರಾ ಜಂಬೂ ಸವಾರಿಯಲ್ಲಿ 40 ಸ್ತಬ್ಧ ಚಿತ್ರಗಳ ವೈಭವ ದಸರಾ ಜಂಬೂ ಸವಾರಿಯಲ್ಲಿ 40 ಸ್ತಬ್ಧ ಚಿತ್ರಗಳ ವೈಭವ

 ಈ ಬಾರಿ ದಸರಾ ಕಳೆಯಿಲ್ಲ

ಈ ಬಾರಿ ದಸರಾ ಕಳೆಯಿಲ್ಲ

ಪ್ರತಿವರ್ಷವೂ ದಸರಾಕ್ಕೆ ಮಡಿಕೇರಿ ನವವಧುವಂತೆ ಸಿಂಗಾರಗೊಳ್ಳುತ್ತಿತ್ತು. ಆದರೆ ಈ ಬಾರಿ ದಸರಾ ಕಳೆಯಿಲ್ಲ. ಜತೆಗೆ ಆಗಾಗ್ಗೆ ಮಳೆ ಸುರಿಯುತ್ತಿರುವುದು ದಸರಾ ಸಂಭ್ರಮಕ್ಕೆ ಅಡ್ಡಿಯಾಗುವ ಲಕ್ಷಣಗಳು ಕಂಡು ಬರುತ್ತಿದೆ.

ಈಗಾಗಲೇ ಪ್ರವಾಹದ ಹೊಡೆತಕ್ಕೆ ಸಿಲುಕಿ ತೊಂದರೆ ಅನುಭವಿಸಿರುವ ಜನಕ್ಕೆ ಯಾವುದರ ಬಗ್ಗೆಯೂ ಆಸಕ್ತಿ ಇಲ್ಲದಂತಾಗಿದೆ. ಆದರೂ ಸಾಂಪ್ರದಾಯಿಕವಾಗಿ ನಡೆದು ಬಂದಿರುವ ದಸರಾವನ್ನು ಆಚರಿಸಲೇಬೇಕಾಗಿರುವುದರಿಂದ ಎಲ್ಲವನ್ನೂ ಸರಳವಾಗಿ ಮಾಡಲಾಗುತ್ತಿದೆ.

 ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ

 ಅ.10 ರಂದು ಮಡಿಕೇರಿ ದಸರಾಕ್ಕೆ ಚಾಲನೆ

ಅ.10 ರಂದು ಮಡಿಕೇರಿ ದಸರಾಕ್ಕೆ ಚಾಲನೆ

ಮಡಿಕೇರಿ ದಸರಾ ಸೂತ್ರಧಾರಿಯಾಗಿರುವ ನಾಲ್ಕು ಶಕ್ತಿದೇವತೆಗಳ ಕರಗಗಳು ಅಕ್ಟೋಬರ್ 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ಪೂಜಾ ಕೈಂಕರ್ಯಗಳೊಂದಿಗೆ ಹೊರಡಲಿದ್ದು, ಮಡಿಕೇರಿ ದಸರಾಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ.

 ಕರಗಗಳನ್ನು ಬರಮಾಡಿಕೊಳ್ಳಲಿದೆ

ಕರಗಗಳನ್ನು ಬರಮಾಡಿಕೊಳ್ಳಲಿದೆ

ನಗರ ದಸರಾ ಸಮಿತಿಯು ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಿದೆ. ಆ ನಂತರ ಒಂಬತ್ತು ದಿನಗಳ ಕಾಲ ನಗರದ ಪ್ರದಕ್ಷಿಣೆ ಮಾಡುವ ಕರಗಗಳು ವಿಜಯದಶಮಿಯಂದು ಬನ್ನಿ ಪೂಜೆ ನೆರವೇರಿಸುವ ಮೂಲಕ ದಸರಾಕ್ಕೆ ತೆರೆ ಬೀಳಲಿದೆ.

English summary
This time Madikeri is celebrated with a simple traditional Dasara. SA RA Mahesh said that Rs 50 lakh for the celebration of Madikeri Dasara and Rs 25 lakh to Gonikoppa Dasara grant will be released.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X