ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ
ಮಡಿಕೇರಿ, ಅಕ್ಟೋಬರ್ 17: ಕೊಡಗಿನ ಕುಲದೇವಿ ಕಾವೇರಿ ಸೋಮವಾರ ಸಂಜೆ ಮೇಷ ಲಗ್ನದಲ್ಲಿ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಕ್ಷಣಗಳಿಗಾಗಿ ಕಾಯುತ್ತಿದ್ದ ಮಂದಿ ಕಣ್ತುಂಬಿಸಿಕೊಂಡು ಕೃತಾರ್ಥರಾದರು.
ಪ್ರಧಾನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ ಆರತಿ ಆಗುತ್ತಿದ್ದಂತೆ ಬ್ರಹ್ಮಕುಂಡಯಲ್ಲಿ 7:21ರ ಸಮಯದಲ್ಲಿ ಜೀವಜಲ ಉಕ್ಕಿದ್ದು, ತೀರ್ಥವನ್ನು ನೆರೆದವರ ಮೇಲೆ ಪ್ರೋಕ್ಷಿಸಿದರು. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವದ ಸಂಭ್ರಮದಲ್ಲಿ ಕೊಡವ ಜನಾಂಗದವರು ಸಾಂಪ್ರದಾಯ ಹುಡುಗೆಯಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು. 5:30ರಿಂದ ಪೂಜೆ ಪುನಸ್ಕಾರ ಆರಂಭಗೊಂಡಿತ್ತು. ಕಾವೇರಿ ಸಹಸ್ರನಾಮ, ಮಹಾ ಮಂಗಳಾರತಿ, ಕುಂಕುಮಾರ್ಚನೆ, ಮಹಾ ಸಂಕಲ್ಪಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆದವು.

ಪ್ರತಿ ವರ್ಷವೂ ತುಲಾ ಸಂಕ್ರಮಣದಂದು ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಸಂಕ್ರಾಂತಿ ಮುಹೂರ್ತದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡುವುದು ಹಿಂದಿನಿಂದಲೂ ನಡೆದು ಬಂದಿದೆ. ಇನ್ನು ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯಾಗಿ ಹರಿದು ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಬಳಿಕ ಕರ್ನಾಟಕದಲ್ಲಿ ಸುಮಾರು 381 ಕಿ.ಮೀ. ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿ.ಮೀ. ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುವುದರೊಂದಿಗೆ ತಾನು ಹರಿದಲೆಲ್ಲಾ ಪವಿತ್ರ ಕ್ಷೇತ್ರಗಳನ್ನು ಸೃಷ್ಟಿಸಿ, ಲಕ್ಷಾಂತರ ಮಂದಿಯ ಪಾಲಿಗೆ ಅನ್ನದಾತೆಯಾಗಿದ್ದಾಳೆ.
ಕಾವೇರಿ ನದಿ ಉಗಮದ ಬಗೆಗಿನ ಪುರಾಣದ ಕಥೆ
ಕೊಡಗಿನ ಬ್ರಹ್ಮಗಿರಿಬೆಟ್ಟ ಶ್ರೇಣಿಯಲ್ಲಿರುವ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಮೈಸೂರು ಜಿಲ್ಲೆಗಾಗಿ ಹಾಸನದ ಮೂಲಕ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸುತ್ತದೆ. ಕಾವೇರಿ ನದಿ ಉಗಮದ ಬಗೆಗಿನ ಪುರಾಣದ ಕಥೆಯನ್ನು ನೋಡುವುದಾದರೆ ಕವೇರನ ಮಾನಸ ಪುತ್ರಿ ಕಾವೇರಿಯನ್ನು ಅಗಸ್ತ್ಯ ಮುನಿಗಳು ವಿವಾಹವಾಗುತ್ತಾರೆ. ಈ ವೇಳೆ ಕಾವೇರಿ ನನಗೆ ಜನಕಲ್ಯಾಣ ಮಾಡುವ ಅಭಿಲಾಷೆಯಿದ್ದು, ನೀವು ಸದಾ ನನ್ನೊಂದಿಗೆ ಇರಬೇಕು ಒಂದು ವೇಳೆ ನನ್ನನ್ನು ಒಬ್ಬಂಟಿಯಾಗಿ ಬಿಟ್ಟು ಹೋದದ್ದೇ ಆದರೆ ನಾನು ನದಿಯಾಗಿ ಹರಿಯುವುದಾಗಿ ಷರತ್ತು ವಿಧಿಸುತ್ತಾಳೆ. ಅದಕ್ಕೆ ಅಗಸ್ತ್ಯ ಮುನಿಗಳು ಒಪ್ಪಿಗೆ ನೀಡುತ್ತಾರೆ.
ಒಂದು ದಿನ ಅಗಸ್ತ್ಯ ಮುನಿಗಳು ತಾವಿದ್ದ ಆಶ್ರಮದಿಂದ ಬೆಟ್ಟದಾಚೆಗಿರುವ ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೊರಡುತ್ತಾರೆ. ಕಾವೇರಿ ನಿದ್ದೆಯಲ್ಲಿರುವುದರಿಂದ ಅವಳು ಎಚ್ಚರವಾಗುವ ವೇಳೆಗೆ ಹಿಂತಿರುಗಿ ಬರಬಹುದೆಂದುಕೊಳ್ಳುತ್ತಾರೆ. ಆದರೆ ಅಗಸ್ತ್ಯ ಮುನಿಗಳು ಅತ್ತ ಸ್ನಾನಕ್ಕೆ ತೆರಳುತ್ತಿದ್ದಂತೆಯೇ ಇತ್ತ ನಿದ್ದೆಯಲ್ಲಿದ್ದ ಕಾವೇರಿಗೆ ಎಚ್ಚರವಾಗುತ್ತದೆ. ಸನಿಹದಲ್ಲಿ ಅಗಸ್ತ್ಯಮುನಿಗಳು ಇಲ್ಲದನ್ನು ಕಂಡು ಷರತ್ತು ಮೀರಿದ ಪತಿಯಿಂದ ದೂರವಾಗಿ ನದಿಯಾಗಿ ಹರಿದು ಲೋಕಕಲ್ಯಾಣ ಮಾಡಲು ಇದು ಸೂಕ್ತ ಸಮಯವೆಂದುಕೊಂಡು ಅಲ್ಲೇ ಇದ್ದ ಕೊಳಕ್ಕೆ ಇಳಿದು ಅಗಸ್ತ್ಯ ಮುನಿಗಳಿಗೆ ತಿಳಿಯದಂತೆ ಅಲ್ಲಿಂದ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರುತ್ತಾಳೆ. ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿಯುತ್ತಾಳೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications