ಈಜಲು ಹೋಗಿ ಕಾವೇರಿ ನದಿ ಪಾಲಾದ ವಿದ್ಯಾರ್ಥಿಗಳು
ಮಡಿಕೇರಿ, ಜೂನ್ 6: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಶಾಲನಗರ ಬಳಿಯ ಮಾದಾಪಟ್ಟಣದಲ್ಲಿ ಬುಧವಾರ ನಡೆದಿದೆ.
ಮಡಿಕೇರಿಯ ಉಕ್ಕುಡ ನಿವಾಸಿ ರಮೇಶ್ ಎಂಬುವರ ಪುತ್ರ ಆಕಾಶ್, ಮ್ಯಾನ್ಸ್ ಕಾಂಪೌಂಡ್ ಬಳಿಯ ನಿವಾಸಿ ಚೆಲುವರಾಜುರವರ ಪುತ್ರ ಗಗನ್ ಮತ್ತು ಮೇಕೇರಿ ಗ್ರಾಮದ ನಿವಾಸಿ ಉಮೇಶ್ ಅವರ ಪುತ್ರ ಶಶಾಂಕ್ ಮೃತಪಟ್ಟವರು. ಈ ಮೂವರು ವಿದ್ಯಾರ್ಥಿಗಳು ಮಡಿಕೇರಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದರು.
ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಗೆಳೆಯ ಸ್ಯಾಂಡಲ್ ಕಾಡ್ ಎಸ್ಟೇಟ್ ನಲ್ಲಿರುವ ಮನ್ಸೂರ್ ಮನೆಗೆ ಗಗನ್, ಆಕಾಶ್ ಮತ್ತು ಶಶಾಂಕ್ ತೆರಳಿದ್ದರು. ಅಲ್ಲಿ ಊಟ ಮುಗಿಸಿಕೊಂಡು ಕುಶಾಲನಗರಕ್ಕೆ ತೆರಳಿದ್ದಾರೆ. ಆ ನಂತರ ಮಾದಾಪಟ್ಟಣ ಬಳಿ ಸರ್ಕಾರಿ ಇಂಜಿನಿಯರ್ ಕಾಲೇಜು ಮುಂಭಾಗದಲ್ಲಿರುವ ಕಾವೇರಿ ನದಿಗೆ ಈಜಲು ತೆರಳಿದ್ದು, ಅಲ್ಲಿ ಕೆಲವು ಸಮಯ ಈಜಾಡಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಆಕಸ್ಮಿಕವಾಗಿ ನೀರಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಕುಶಾಲನಗರ ಟೌನ್ ಪೊಲೀಸ್ ಠಾಣಾಧಿಕಾರಿ ಜಗದೀಶ್, ಸಿಬ್ಬಂದಿ ರವೀಂದ್ರ, ಮಾಚಯ್ಯ ಅವರು ಪರಿಶೀಲನೆ ನಡೆಸಿದ್ದು, ಈಜುಗಾರರ ಸಹಾಯದಿಂದ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications