ಮಡಿಕೇರಿ; ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ 4ನೇ ದಿನಕ್ಕೆ

ಮಡಿಕೇರಿ, ಫೆಬ್ರವರಿ 25: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ, ಟಿ. ಶೆಟ್ಟಿಗೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿನ ಜನತೆಗೆ ತೀವ್ರ ಆತಂಕ ಸೃಷ್ಟಿಯಾಗಿರುವ ಹುಲಿ ದಾಳಿ ಪ್ರಕರಣ ಇನ್ನೂ ಜನತೆಯಲ್ಲಿ ಹಸಿರಾಗಿದೆ. ಈಗಾಗಲೇ ಇಬ್ಬರು ವ್ಯಕ್ತಿಗಳು ಹುಲಿಯಿಂದ ಜೀವ ಕಳೆದುಕೊಂಡಿರುವ ಘಟನೆ ಒಂದೆಡೆಯಾದರೆ, ಬೇರೆ ಬೇರೆ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವುದು, ಜಾನುವಾರುಗಳು ಬಲಿಯಾಗುತ್ತಿರುವುದು ಗ್ರಾಮಸ್ಥರನ್ನು ಮತ್ತಷ್ಟು ಅತಂಕಕ್ಕೆ ನೂಕಿದೆ.

ಈಗಾಗಲೇ ಒಂದು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಆದರೆ, ಸೆರೆಯಾಗಿರುವ ಹುಲಿ ಇದಲ್ಲ ಎಂಬ ಸಂಶಯವೂ ಇರುವುದರಿಂದ ಜನತೆ ನಿತ್ಯವೂ ಭಯದಲ್ಲೇ ದಿನ ಕಳೆಯುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಮತ್ತೊಂದು ಹುಲಿರಾಯನನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹಮ್ಮಿಕೊಂಡಿರುವ ಕಾರ್ಯಾಚರಣೆಗೆ ಇನ್ನೂ ಯಶಸ್ಸು ಸಿಕ್ಕಿಲ್ಲ.

ಕಾರ್ಯಾಚರಣೆ 4 ದಿನ ದಾಟಿದ್ದು ಈ ತಂಡಕ್ಕೆ ಹುಲಿಯ ಜಾಡು ಅರಿವಾಗುತ್ತಿಲ್ಲ. ಮಳೆಯ ಪರಿಸ್ಥಿತಿ ಹಾಗೂ ಭಯಭೀತರಾಗಿರುವ ಜನತೆ ಪಟಾಕಿ ಸಿಡಿಸುವುದು, ಪದೇ ಪದೇ ಟಾರ್ಚ್ ಬೆಳಕುಗಳನ್ನು ಬೆಳಗಿಸುವುದು, ಶಬ್ಧ ಮಾಡುವ ಕಾರಣದಿಂದ ಹುಲಿ ಕಾರ್ಯಾಚರಣೆ ತಂಡದ ಬಲೆಗೆ ಬೀಳುತ್ತಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

Tiger Capture Operation From 4 Dyas In Ponnampet

ಆದರೆ, ಬೇರೆ ಬೇರೆ ಭಾಗಗಳಲ್ಲಿ ಜನತೆಗೆ ವ್ಯಾಘ್ರ ಕಾಣಿಸಿಕೊಳ್ಳುತ್ತಿರುವುದು, ಹೆಜ್ಜೆ ಗುರುತು ಪತ್ತೆಯಾಗುತ್ತಿರುವುದು ಪರಿಸ್ಥಿತಿ ಬಿಗಡಾಯಿಸುವಂತಾಗಿದೆ. ಅರಣ್ಯ ಇಲಾಖಾ ತಂಡ ಹುಲಿಯ ಸೆರೆಗೆ ಹಗಲು-ರಾತ್ರಿ ಪ್ರಯತ್ನ ಮುಂದುವರಿಸಿದ್ದು, ಈ ವಿಭಾಗದಲ್ಲಿ ಅಧಿಕ ಸಂಖ್ಯೆಯ ಅಧಿಕಾರಿಗಳು, ಸಿಬ್ಬಂದಿಗಳು ನಿಯೋಜಿತರಾಗಿದ್ದಾರೆ.

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫೆಬ್ರವರಿ 23ರಂದು ಹೈಸೊಡ್ಲೂರು-ಬಾಡಗರಕೇರಿ ಮುಖ್ಯ ರಸ್ತೆಯಲ್ಲಿ ಮತ್ತು ಪೊರಾಡು ಗ್ರಾಮದಲ್ಲಿ ಹುಲಿ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿದೆ. ಇದಲ್ಲದೆ, ಟಿ. ಶೆಟ್ಟಿಗೇರಿ ಸಮೀಪ ತಾವಳಗೇರಿ ಗ್ರಾಮದ ಗುಟ್ಟುಕೊಲ್ಲಿಯಲ್ಲಿಯೂ ಜನರಿಗೆ ಹುಲಿ ಗೋಚರಿಸಿದೆ.

ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆಯನ್ನು ಮತ್ತು ಕುಮಟೂರು ಗ್ರಾಮದಲ್ಲಿ ವಿದ್ಯಾರ್ಥಿಯನ್ನು ಕೊಂದಿದ್ದ ನಂತರ ತಾವಳಗೇರಿ ಗ್ರಾಮದಲ್ಲಿ ಎರಡು ಕಡೆ ಹಸುಗಳನ್ನು ಕೊಂದ ಸ್ಥಳದಲ್ಲಿ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ 2 ಅಟ್ಟಣಿಗೆ ಶಾರ್ಪ್ ಶೂಟರ್ ಮೂಲಕ ಅರವಳಿಕೆ ನೀಡಿ ಸೆರೆ ಹಿಡಿಯಲು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಂಡಿದೆ.

Tiger Capture Operation From 4 Dyas In Ponnampet

ಸ್ಥಳದಲ್ಲಿ 2 ಅಟ್ಟಣಿಗೆಯೊಂದಿಗೆ ಕ್ಯಾಮರಗಳನ್ನು ಅಳವಡಿಸಲಾಗಿದ್ದು, ದೂರದಿಂದ ಹುಲಿ ಆಗಮಿಸುವುದನ್ನು ಗುರುತಿಸಲು ಅತ್ಯಾಧುನಿಕ ಬೈನಾಕ್ಯೂಲರ್ ವ್ಯವಸ್ಥೆಯನ್ನು ಮಾಡಿಕೊಂಡಿದೆ.
ಕಾರ್ಯಾಚರಣೆ ತಂಡ ಹಗಲು ರಾತ್ರಿ ಹುಲಿ ಸೆರೆಗೆ ಪ್ರಯತ್ನಿಸುತ್ತಿದ್ದು ಟಿ. ಶೆಟ್ಟಿಗೇರಿಯಲ್ಲಿ ಕಾರ್ಮಿಕ ಮಹಿಳೆಯನ್ನು ಹುಲಿ ಕೊಂದಿರುವ ಸ್ಥಳದ ಸಮೀಪವೇ ತಾತ್ಕಾಲಿಕ ಶೆಡ್ ನಿರ್ಮಿಸಿ ಅಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಸ್ಥಳದಲ್ಲಿಯೇ ಕಾರ್ಯಾಚರಣೆ ತಂಡದ ಸುಮಾರು 150 ಅಧಿಕಾರಿ, ಸಿಬ್ಬಂದಿಗಳಿಗೆ ಅಡುಗೆ ತಯಾರಿಸುವುದು ಮತ್ತು ಅರಣ್ಯ ಇಲಾಖೆಯ ಕಚೇರಿ ಕೆಲಸವನ್ನು ಸಹ ಕಂಪ್ಯೂಟರ್ ಇಟ್ಟುಕೊಂಡು ಸ್ಥಳದಲ್ಲಿಯೇ ನಿರ್ವಹಿಸಲಾಗುತ್ತಿದೆ. ಸರ್ಕಾರ ಇದನ್ನು ಅತ್ಯಂತ ಗಂಭೀರ ವಿಚಾರವೆಂದು ಪರಿಗಣಿಸಿ ಶಾಶ್ವತ ಪರಿಹಾರದ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

"ವಿವಿಧ ಭಾಗದಲ್ಲಿ 6ಕ್ಕಿಂತ ಹೆಚ್ಚು ಹುಲಿಯ ಸಂಚಾರವಿದ್ದು ಇವುಗಳನ್ನು ನಿಯಂತ್ರಣಕ್ಕೆ ತರಲು ತಕ್ಷಣ ಅರಣ್ಯ ಸಚಿವರ ಸಮ್ಮುಖದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು ಹುಲಿಯ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ಅರಣ್ಯ ಸಚಿವರು ವಾರದೊಳಗೆ ಸಭೆ ಕರೆಯಲು ವಿಫಲರಾದರೆ ಕೊಡಗಿನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೊಡಗು ಬಂದ್‌ ಕರೆ ನೀಡಲಾಗುವುದೆಂದು" ಜಿಲ್ಲಾ ರೈತ ಸಂಘದ ಅದ್ಯಕ್ಷ ಮನುಸೋಮಯ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+