ಕೊಡಗಿನವರಿಗೆ ಆತಂಕಕಾರಿಯಾದ ಟಿಪ್ಪು!
ಟಿಪ್ಪು ಜಯಂತಿ ಆಚರಣೆ ನಿಮಿತ್ತ ಕೊಡಗಿನಲ್ಲಿ ಅದರಲ್ಲೂ ಮಡಿಕೇರಿಯಲ್ಲಿ ಭಯದ ವಾತಾವರಣವಿದೆ. ಏನಾಗುತ್ತದೆಯೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಇದಕ್ಕೆ ಕಾರಣ ಕಳೆದ ವರ್ಷ ಇದೇ ನ.10 ರಂದು ನಡೆದ ದುರ್ಘಟನೆ.
ಮಡಿಕೇರಿ, ನೆಂಬರ್. 10 : ಟಿಪ್ಪು ಸುಲ್ತಾನ್ ಮತಾಂಧ, ಹಿಂದೂ ದೇವಾಲಯ, ಚರ್ಚ್ ಗಳನ್ನು ಧ್ವಂಸ ಮಾಡಿದವನು, ಕೊಡವರನ್ನು ಹತ್ಯೆಗೈದವನು ಹೀಗೆ ಮೊದಲಾದ ಆರೋಪಗಳನ್ನು ಮಾಡುತ್ತಾ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಆತ ಅವತ್ತು ಅದೇನಾಗಿದ್ದನೋ ಗೊತ್ತಿಲ್ಲ. ಆದರೆ ಈಗ ಕೊಡಗಿನ ಸಾಮಾನ್ಯ ಜನಕ್ಕೆ ಆತಂಕಕಾರಿಯಾಗಿರುವುದಂತೂ ಸತ್ಯ.
ಸಧ್ಯ ಕೊಡಗಿನಲ್ಲಿ ಅದರಲ್ಲೂ ಮಡಿಕೇರಿಯಲ್ಲಿ ಭಯದ ವಾತಾವರಣವಿದೆ. ಏನಾಗುತ್ತದೆಯೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಇದಕ್ಕೆ ಕಾರಣ ಕಳೆದ ವರ್ಷ ಇದೇ ನ.10 ರಂದು ನಡೆದ ದುರ್ಘಟನೆ.
ಸರ್ಕಾರ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಬಲಿಯಾಗಿ ಹಲವರು ಗಾಯಗೊಂಡಿದ್ದರು. ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತಲ್ಲದೆ, ಅಂಗಡಿ, ಮುಂಗಟ್ಟುಗಳಿಗೆ ಹಾನಿಯಾಗಿತ್ತು. ಶಾಂತಿಯ ನಾಡು ಅರ್ಥಾತ್ ರಣರಂಗವಾಗಿ ಮಾರ್ಪಟ್ಟಿತ್ತು.

ಕೇರಳ ಸೇರಿದಂತೆ ಹೊರ ಊರುಗಳಿಂದ ಕಿಡಿಗೇಡಿಗಳ ದೊಡ್ಡದಂಡೇ ಗಲಾಟೆ ಮಾಡಲೆಂದೇ ಬಂದಿತ್ತು. ಅವತ್ತು ನಡೆದ ಘಟನೆ ತೀವ್ರತೆಯನ್ನು ಜನತೆ ಇಂದಿಗೂ ಮರೆತಿಲ್ಲ. ಹೀಗಾಗಿ ಇವತ್ತು ಮಡಿಕೇರಿಯ ಜನತೆಯಲ್ಲಿ ಆತಂಕ ಮನೆಮಾಡಿದೆ.
ಅದು ಎಂತಹದ್ದೇ ವಿರೋಧ ಬಂದರೂ ಎದುರಿಸಿ ಟಿಪ್ಪು ಜಯಂತಿಯನ್ನು ಆಚರಿಸಿ ಎಂಬುದಾಗಿ ಸರ್ಕಾರ ಸೂಚಿಸಿದ್ದು ಇದಕ್ಕಾಗಿ ಕೋಟ್ಯಂತರ ರೂಪಾಯಿ ಹಣವನ್ನು ವ್ಯಯ ಮಾಡಿದೆ. ಇಷ್ಟೊಂದು ಭದ್ರತೆಯಲ್ಲಿ ಆಚರಣೆ ನಡೆಸುವ ಅವಶ್ಯಕತೆ ಇತ್ತಾ ಎಂಬುದು ಸಾಮಾನ್ಯ ಮನುಷ್ಯನ ಪ್ರಶ್ನೆಯಾಗಿದೆ.
ಟಿಪ್ಪು ಜಯಂತಿಯನ್ನು ರಾಜಕೀಯ ಪಕ್ಷಗಳು ಓಟ್ ಬ್ಯಾಂಕ್ ಆಗಿ ಪರಿವರ್ತಿಸಿಕೊಳ್ಳಲು ಹವಣಿಸುತ್ತಿದ್ದು, ಅವುಗಳಿಗೆ ಲಾಭವಾದರೂ ಅನುಭವಿಸುವವನು ಶ್ರೀಸಾಮಾನ್ಯ ಎಂಬುವುದರಲ್ಲಿ ಎರಡು ಮಾತಿಲ್ಲ.

ಇಂದು ಆಚರಿಸಲ್ಪಡುವ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಮತ್ತು ಸಂಘ ಪರಿವಾರದವರು ವಿರೋಧ ವ್ಯಕ್ತಪಡಿಸುವ ಹಾಗೂ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಅದರಲ್ಲೂ ಮಡಿಕೇರಿಯ ಜನತೆ ಈಗಾಗಲೇ ಭಯಭೀತರಾಗಿದ್ದಾರೆ. ಪ್ರತಿಯೊಬ್ಬರ ಮುಖದಲ್ಲಿ ಭಯದ ಛಾಯೆ ಮೂಡಿದೆ.
ಬಹುಶಃ ನ.10 ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆಗೆ ಯಾರೂ ಕೂಡ ಬಾರದಿರುವುದು ಈಗಾಗಲೇ ಸ್ಪಷ್ಟಗೊಂಡಿದೆ.ಕಳೆದ ವರ್ಷ ಟಿಪ್ಪು ಜಯಂತಿ ಆಚರಣೆಗೆ ಕೇರಳದಿಂದ ಜನರು ಬಂದಿದ್ದರೆನ್ನಲಾಗಿತ್ತು.
ಆದರೆ ಈ ವರ್ಷ ಹೊರ ಜಿಲ್ಲೆಗಳಿಂದ ಹಿಂದೂ ಸಂಘಟನೆಯ ಮತ್ತು ಬಿಜೆಪಿಯ ಕಾರ್ಯಕರ್ತರು ಆಗಮಿಸಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಎಲ್ಲಾ ಹೋಟೆಲ್ ಹಾಗೂ ಹೋಂಸ್ಟೇಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಕಳೆದ ವಾರದಿಂದಲೇ ಪೊಲೀಸರು ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಹಾಗೂ ರಾಜ್ಯಗಳಿಂದ ಅಪರಿಚಿತರು ಆಗಮಿಸುವ ಮತ್ತು ಅವರ ವಾಹನಗಳ ತಪಾಸಣೆಯೊಂದಿಗೆ ವಾಹನಗಳ ಸಂಖ್ಯೆಗಳನ್ನು ದಾಖಲು ಮಾಡಿಕೊಂಡಿದ್ದಾರೆ.
ಹೀಗಾಗಿ ಟಿಪ್ಪು ಜಯಂತಿ ಆಚರಣೆ ವೇಳೆ ಯಾವುದೇ ಅನಾಹುತಗಳು ಹಾಗೂ ಗಲಭೆಗಳು ನಡೆಯದಂತೆ ಅಲ್ಲದೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸಜ್ಜಾಗಿದ್ದು ಯಾವುದೇ ಆತಂಕ ಬೇಡ ಎಂದು ಜಿಲ್ಲಾಡಳಿತ ಹೇಳುತ್ತಿದ್ದರೂ ಆತಂಕ ಮಾತ್ರ ಇದ್ದೇ ಇದೆ.
ಇನ್ನು ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರದಲ್ಲಿ ಬಿಜೆಪಿ ನಾಯಕರ ಹೆಸರು ನಮೂದಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಗೊಂಡಿದೆ. ಜಿಲ್ಲಾಡಳಿತದಿಂದ ಆಮಂತ್ರಣ ಪತ್ರವನ್ನು ಮುದ್ರಿಸಲಾಗಿದ್ದು,
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications