ಟಿಪ್ಪು ಕೊಡವರನ್ನು ಕೊಂದಿಲ್ಲ : ಎ.ಕೆ. ಸುಬ್ಬಯ್ಯ
ಮಡಿಕೇರಿ, ನವೆಂಬರ್ 3: ಟಿಪ್ಪು ಜಯಂತಿಗೆ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಟಿಪ್ಪು ಜಯಂತಿ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಎ.ಕೆ.ಸುಬ್ಬಯ್ಯ ಬ್ಯಾಟ್ ಬೀಸಿದ್ದಾರೆ.
ಬ್ರಿಟಿಷರೊಂದಿಗೆ ಕೈಜೋಡಿಸಿದ್ದ ಹಾಲೇರಿ ವಂಶಸ್ಥ ರಾಜಮನೆತನವನ್ನು ಅಧಿಕಾರದಿಂದ ಟಿಪ್ಪು ಪದಚ್ಯುತಗೊಳಿಸಿದ ಮತ್ತು ಟಿಪ್ಪು ಸುಲ್ತಾನ್ ವಿರುದ್ಧ ದಂಗೆ ಎದ್ದವರನ್ನು ಮಾತ್ರ ಆತ ಹತ್ಯೆಮಾಡಿದ್ದಾನೆ ಹೊರತು, ಕೊಡವರನ್ನು ಹತ್ಯೆಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ. ಅಧಿಕಾರ ಕಳೆದುಕೊಂಡಿದ್ದ ಹಾಲೇರಿ ರಾಜವಂಶಸ್ಥರನ್ನು ಪುನರ್ ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ರಾಜನಿಷ್ಠೆ ತೋರಿ ದಂಗೆ ಎದ್ದವರನ್ನು ಟಿಪ್ಪು ಸುಲ್ತಾನ್ ಹತ್ಯೆಗೈದಿದ್ದಾನೆ ಹೊರತು ಕೇವಲ ಕೊಡವ ಸಮುದಾಯದವರನ್ನು ಹತ್ಯೆ ಮಾಡಲಿಲ್ಲ್ಲ. ಈ ಸಂದರ್ಭ ಅಪಾರ ಸಂಖ್ಯೆಯಲ್ಲಿ ಟಿಪ್ಪುವಿನ ಸೈನಿಕರೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದರು.
ನ.10 ರಂದು ರಾಜ್ಯಾದ್ಯಂತ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ, ಟಿಪ್ಪುವಿನ ಕೀರ್ತಿಗೆ ತಕ್ಕಂತೆ ಶಾಂತಿಯುತವಾಗಿ ಜಯಂತಿ ಆಚರಿಸುವುದನ್ನು ತಾವು ಬೆಂಬಲಿಸುವುದಾಗಿ ಸುಬ್ಬಯ್ಯ ಅವರು ಹೇಳಿದರು.
ಕೆಲವರು ಟಿಪ್ಪು ಜಯಂತಿಯ ವಿರುದ್ಧ ಅಪಸ್ವರ ಎತ್ತಿದ್ದಾರೆ, ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಗೋಡ್ಸೆಯ ದೇವಾಲಯವನ್ನು ನಿರ್ಮಿಸಲು ಮುಂದಾದವರು ಕೊಲೆಯ ಸಿದ್ಧಾಂತವನ್ನು ಪ್ರತಿಪಾದಿಸುವವರೇ ಈ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಸುಬ್ಬಯ್ಯ ಆರೋಪಿಸಿದರು.[ಟಿಪ್ಪು ಜಯಂತಿ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಮೋಹನ್ ದಾಸ್ ಪೈ]
ರಾಜ್ಯ ವ್ಯಾಪಿಯಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಭರಾಟೆಯಲ್ಲಿ ಕೋಮು ಗಲಭೆಗಳನ್ನು ಹುಟ್ಟುಹಾಕುವ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ಇದರಲ್ಲಡಗಿದೆ, ಈ ಹಿನ್ನೆಲೆಯಲ್ಲಿ ಜನತೆಯ ನೆಮ್ಮದಿ ಹಾಗೂ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮವನ್ನು ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ಸುಬ್ಬಯ್ಯ ಆಗ್ರಹಿಸಿದರು. [ಟಿಪ್ಪು ಜಯಂತಿ ಆಚರಿಸುವ ಉದ್ದೇಶವೇನು: ಹೈಕೋರ್ಟ್ ಪ್ರಶ್ನೆ]
ಸಮಾಜ ಘಾತುಕ ಶಕ್ತಿಗಳ ಮತ್ತು ಜಾತ್ಯಾತೀತ ಶಕ್ತಿಗಳ ಸಂಘರ್ಷಕ್ಕೆ ಟಿಪ್ಪು ಜಯಂತಿಯ ಆಚರಣೆಯು ವೇದಿಕೆಯನ್ನು ನಿರ್ಮಿಸಿಕೊಟ್ಟಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸುವ ಶಕ್ತಿಗಳ ವಿರುದ್ಧ ನಡೆಯುವ ಹೋರಾಟ ನಿರಂತರಗೊಳ್ಳಲೆಂದು ತಿಳಿಸಿದರು.
ಮತೀಯ ಶಕ್ತಿಗಳ ಕುತಂತ್ರಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನ.8 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಾತ್ಯಾತೀತ ಶಕ್ತಿಗಳ ಒಕ್ಕೂಟದಿಂದ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications