ಪ್ರೀತಿಯ ಹೆಸರಲ್ಲಿ ಮೋಸ: ಮಡಿಕೇರಿಯ ಇಬ್ಬರು ನ್ಯಾಯಾಂಗ ಬಂಧನಕ್ಕೆ
ಮದುವೆಯಾಗುವುದಾಗಿ ನಂಬಿಸಿ, ಮೋಸ ಮಾಡಿದ ಮಡಿಕೇರಿಯ ಇಬ್ಬರು ಯುವಕರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮಡಿಕೇರಿ, ಮೇ 08: ತನ್ನದೇ ಗ್ರಾಮದ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಮಡಿಕೇರಿ ಜಿಲ್ಲೆ ಸೋಮವಾರಪೇಟೆಯ ಚೌಡ್ಲು ಗ್ರಾಮಪಂಚಾಯಿಯ ಗಾಂಧಿನಗರ ನಿವಾಸಿ ವೆಂಕಟೇಶ್(35) ಮತ್ತೊಬ್ಬ ಮಹಿಳೆಯನ್ನು ಮದುವೆಯಾದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಅತಿಥಿಯಾಗಿದ್ದಾನೆ.
ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಮತ್ತು ವೆಂಕಟೇಶ್ ಗೆ ಒಂದು ಮಗುವೂ ಇತ್ತು. ಆದರೂ 22 ವರ್ಷದ ಮತ್ತೊಬ್ಬ ಯುವತಿಯನ್ನು ಪುಸಲಾಯಿಸಿ, ಆಂಧ್ರ ಪ್ರದೇಶಕ್ಕೆ ಕರೆದೊಯ್ದು ಮದೆವೆಯಾಗಿದ್ದ. ನಾಪತ್ತೆಯಾಗಿದ್ದ ಯುವತಿಯ ಕುರಿತು ಆಕೆಯ ಕುಟುಂಬ ದೂರು ನೀಡಿತ್ತು. ಕೊನೆಗೂ ಈ ಇಬ್ಬರನ್ನೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು, ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ದೂರಿನನ್ವಯ ಈತನ್ನು ಬಂಧಿಸಿದ್ದಾರೆ.[6 ತಿಂಗಳು ಉಚಿತ ಆಹಾರದ ಭರವಸೆ: ದಿಡ್ಡಳ್ಳಿ ಆದಿವಾಸಿಗಳ ಸ್ಥಳಾಂತರ]

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ದೂರು ನೀಡುತ್ತಿದ್ದಂತೆಯೇ, 22ರ ಯುವತಿಯೂ, ತನಗಿಷ್ಟವಿಲ್ಲದಿದ್ದರೂ ಬಲವಂತವಾಗಿ ತನ್ನನ್ನು ಆಂಧ್ರ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆಂದು ತಿಳಿಸಿದ್ದಾರೆ. ಸದ್ಯಕ್ಕೆ ವೆಂಕಟೇಶ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಅವಳ ಪ್ರೀತಿಸಿ ಇವಳ ಮದುವೆ ಯತ್ನ!
ಇನ್ನೊಂದು ಪ್ರಕರಣದಲ್ಲಿ, 18 ವರ್ಷ ತುಂಬುತ್ತಿದ್ದಂತೆಯೇ ನಿನ್ನನ್ನು ಮದುವೆಯಾಗುತ್ತೇನೆಂದು ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ಮಡಿಕೇರಿಯ ಕರಿಕೆಯ ನಿವಾಸಿ ನಿತಿನ್ ಎಂಬುವವನನ್ನು ಸಹ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಹುಡುಗಿಗೆ 18 ವರ್ಷವಾದರೂ ಮದುವೆಯ ಸೊಲ್ಲೆತ್ತದ ನಿತಿನ್ ಕೊನೆಗೆ ಬೇರೆ ಹುಡುಗಿಯೊಂದಿಗೆ ಮದುವೆಯಾಗಲು ಯತ್ನಿಸುತ್ತಿದ್ದ ವಿಷಯ ತಿಳಿದು, ಹುಡುಗಿ ಗ್ರಾಮದ ಹಿರಿಯರ ಸಮ್ಮುಖದಲ್ಲೇ ದೂರು ಸಲ್ಲಿಸಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆಂದು ಆಕೆ ನೀಡೀದ ದೂರಿನನ್ವಯ ನಿತಿನ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications