ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿರಾಜಪೇಟೆ ಯುವತಿ
ಮಡಿಕೇರಿ, ಫೆಬ್ರವರಿ 24: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಬಳ್ಳೇಕೆರೆಯಲ್ಲಿ ನಡೆದಿದೆ.
ರಂಜಿತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಿದ್ದಾಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಂಜಿತಾ, ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ಹುಡುಗಿ ನಿಂದಿಸಿದಳೆಂದು ಆತ್ಮಹತ್ಯೆ ಮಾಡಿಕೊಂಡ ವಿರಾಜಪೇಟೆ ಯುವಕ
ಈ ಕಾರಣವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. "ನನ್ನ ಸಾವಿಗೆ ಯಾರೂ ಕಾರಣ ಅಲ್ಲ. ನಾನು ಎಲ್ಲರಿಗೂ ಕಷ್ಟ ಕೊಡುತ್ತಿದ್ದೇನೆ. ನನ್ನಿಂದ ಯಾರೂ ಕಷ್ಟ ಪಡಬಾರದು. ಅಪ್ಪ ಅಮ್ಮ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ, ನನ್ನ ಎಲ್ಲಾ ಸ್ನೇಹಿತರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ" ಎಂದು ಡೆತ್ ನೋಟ್ ಬರೆದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
A young woman committed suicide by hanging herself for the health issue at Bellakere, Virajapet of madikeri. Ranjita (17) is a young woman who committed suicide
Story first published: Monday, February 24, 2020, 11:34 [IST]