ಮಡಿಕೇರಿ; ಆಟೋ ದರ ಏರಿಕೆಗೆ ಚಾಲಕರ ಪ್ರತಿಭಟನೆ
ಮಡಿಕೇರಿ, ಮಾರ್ಚ್ 05; ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಹಿನ್ನೆಲೆ ಆಟೋರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕು ಎಂದು ಚಾಲಕರು ಒತ್ತಾಯಿಸಿದರು. ವಿರಾಜಪೇಟೆ ನಗರ ಆಟೋ ಚಾಲಕರು ಆಟೋ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ವಿರಾಜಪೇಟೆ, ಕಡಂಗ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ ಮುಂತಾದ ಕಡೆ ಸುಮಾರು ಎರಡು ಗಂಟೆಗಳ ಕಾಲ ಆಟೋ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ತಕ್ಷಣ ಸಾರಿಗೆ ಪ್ರಾಧಿಕಾರದ ಸಭೆ ಕರೆದು ಕೊಡಗು ಜಿಲ್ಲೆಯಾದ್ಯಂತ ಏಕರೂಪದ ಆಟೋ ಪ್ರಯಾಣ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿರಾಜಪೇಟೆ ಆಟೋ ಚಾಲಕರ ಸಂಘದ ಅಧ್ಯಕ್ಷ ಎಂ. ಎಂ. ಶಶಿಧರನ್, "ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ವಿರುದ್ಧ ಈ ಹಿಂದೆ ಪ್ರತಿಭಟನೆ ಮಾಡಿ ಆಟೋ ಪ್ರಯಾಣ ದರ ಪರಿಷ್ಕರಣೆಗೆ ಫೆಬ್ರವರಿ 25ರ ಗಡುವು ನೀಡಲಾಗಿತ್ತು" ಎಂದರು.

"ಜಿಲ್ಲಾಡಳಿತ ಇಲ್ಲಿಯವರೆಗೆ ಯಾವುದೇ ಸ್ಪಂದನೆ ನೀಡಿಲ್ಲ ಮತ್ತು ತೈಲೋತ್ಪನ್ನಗಳ ಬೆಲೆ ಇಳಿಕೆಯ ಬಗ್ಗೆ ಸರ್ಕಾರದಿಂದ ಯಾವುದೇ ಭರವಸೆಯೂ ದೊರೆಯುತ್ತಿಲ್ಲ" ಎಂದು ಆರೋಪಿಸಿದರು.
2015ರಲ್ಲಿ ನಿಗದಿಪಡಿಸಿರುವ ದರವನ್ನು ಪಡೆದು ಆಟೋ ಚಲಾಯಿಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶೇ. 48ರಷ್ಟು ಏರಿಕೆಯಾಗಿದೆ. ಅಲ್ಲದೆ ಆಟೋ ಬಿಡಿಭಾಗಗಳ ಬೆಲೆ ಮತ್ತು ವಿಮಾ ಕಂತು, ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಚಾಲಕರು ಹೇಳಿದರು.
ಕೋವಿಡ್ ಪರಿಸ್ಥಿತಿಯ ಸಂಕಷ್ಟದಿಂದ ಚಾಲಕರು ಇನ್ನೂ ಕೂಡ ಹೊರ ಬಂದಿಲ್ಲ. ಇದರ ನಡುವೆಯೇ ಬೆಲೆ ಏರಿಕೆಯ ಬರೆ ಎಳೆಯಲಾಗಿದೆ. ಜಿಲ್ಲಾಡಳಿತ ತಕ್ಷಣ ಸಾರಿಗೆ ಪ್ರಾಧಿಕಾರದ ಸಭೆ ಕರೆದು ಜಿಲ್ಲೆಯಾದ್ಯಂತ ಏಕರೂಪದ ಆಟೋ ಪ್ರಯಾಣ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ಪ್ರಮುಖರಾದ ಚಂದ್ರು, ಸತೀಶ್, ಡಾಲು, ಸುಗುಣ ಸೇರಿದಂತೆ ಎಲ್ಲಾ ಆಟೋ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್ ಮೂಲಕ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
-
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications