ವೈರಲ್ ವಿಡಿಯೋ; ನರಹಂತಕ ಹುಲಿಗೆ ಗುಂಡಿಕ್ಕಲು ಶಾಸಕರ ಕರೆ
ಮಡಿಕೇರಿ, ಮಾರ್ಚ್ 12; ಪೊನ್ನಂಪೇಟೆ ತಾಲೂಕಿನ ಜನರ ನಿದ್ದೆಗೆಡಿಸಿರುವ ನರಹಂತಕ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಪ್ರಯತ್ನ ಮುಂದುವರೆದಿದೆ. 150ಕ್ಕೂ ಅಧಿಕ ಸಿಬ್ಬಂದಿಗಳು ಹಗಲಿರುಳೂ ಶ್ರಮಿಸುತ್ತಿದ್ದಾರೆ. ಆದರೆ, ಹುಲಿಯನ್ನು ಇದುವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.
ಫೆಬ್ರುವರಿ 21ರಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ಗಂಡು ಹುಲಿ ಪತ್ತೆಯಾಗಿಲ್ಲ. ಆದರೆ, ಪ್ರತಿ ದಿನ ಅಥವಾ ಎರಡು ದಿನಗಳಿಗೊಮ್ಮೆ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತ್ತಿದೆ.
ಈ ನಡುವೆ ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಗುರುವಾರ ಜನರೇ ಸ್ವಯಂ ಪ್ರೇರಿತರಾಗಿ ಪೊನ್ನಂಪೇಟೆ ತಾಲೂಕು ಬಂದ್ ಮಾಡಿದ್ದರು. ಕೊಡಗು ಜಿಲ್ಲೆಯ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ. ಜಿ. ಬೋಪಯ್ಯ ಮತ್ತು ಎಂಎಲ್ಸಿ ವೀಣಾ ಅಚ್ಚಯ್ಯ ಸದನದಲ್ಲಿಯೂ ಈ ಕುರಿತು ವಿಷಯ ಪ್ರಸ್ತಾಪಿಸಿದ್ದಾರೆ.

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಹುಲಿ ಸೆರೆ ಸಾಧ್ಯವಾಗದಿದ್ದರೆ ಗುಂಡಿಟ್ಟು ಕೊಲ್ಲುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಜಿಲ್ಲಾ ರೈತ ಸಂಘವೂ ಕಳೆದ 5 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿದೆ, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಗುರುವಾರ ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಮೂವರೂ ಜನಪ್ರತಿನಿಧಿಗಳು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಶಾಸಕ ಅಪ್ಪಚ್ಚು ರಂಜನ್ ಹುಲಿಯನ್ನು ಕೊಲ್ಲುವಂತೆ ಗ್ರಾಮಸ್ಥರಿಗೆ ಧೈರ್ಯ ನೀಡಿದರಲ್ಲದೆ, ಕೊಂದ ನಂತರ ತಮಗೆ ದೂರವಾಣಿ ಕರೆ ಮಾಡಿ ತಿಳಿಸಿದರೆ ತಾವು ಕೊಂದವರಿಗೆ ರಕ್ಷಣೆ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.
ಶಾಸಕರ ಈ ಮಾತಿನ ವಿಡಿಯೋ ಈಗ ವೈರಲ್ ಆಗಿದೆ. ಅರಣ್ಯ ಇಲಾಖೆಯ ಪಿಸಿಸಿಎಫ್ ಹುಲಿ ಸೆರೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯಾಧಿಕಾರಿಗಳಿಗೆ ಹುಲಿ ಸೆರೆ ಹಿಡಿಯಲು ಸಾಧ್ಯವಾಗದಿದ್ದರೆ ಮಾತ್ರ ಕೊಲ್ಲಬೇಕೆಂದು ಆದೇಶಿಸಿದ್ದಾರೆ.
ಅದರಲ್ಲೂ ಕೊಲ್ಲುವುದು ಕಡೇ ಆಯ್ಕೆ ಆಗಿರಬೇಕೆಂದು ಸ್ಪಷ್ಟವಾಗಿದೇ ತಿಳಿಸಿದ್ದಾರೆ. ಇದೀಗ ಶಾಸಕರೇ ನೇರವಾಗಿ ಗುಂಡು ಹೊಡೆಯಿರಿ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಕೊಲ್ಲುವುದು ಕಡೇ ಅಯ್ಕೆ ಆಗಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳೇ ಶಾರ್ಪ್ ಶೂಟರ್ ಮೂಲಕ ಕೊಲ್ಲಿಸಬೇಕಿದೆ.
ಅರಣ್ಯ ಇಲಾಖೆಯು ಈ ಹಿಂದೆ ಬೆಳೆ ನಾಶ ಮಾಡುತ್ತಿರುವ ಹಂದಿಗಳನ್ನು ಕೊಲ್ಲಲು ರೈತರಿಗೆ ಅನುಮತಿ ನೀಡಿದೆ. ಆದರೆ, ಕೊಲ್ಲಬೇಕಾದರೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆದುಕೊಂಡೇ ಕೊಲ್ಲಬೇಕಿದೆ. ಕೊಂದ ನಂತರ ಅದರ ದೇಹವನ್ನು ಅರಣ್ಯ ಇಲಾಖೆಗೆ ಒಪ್ಪಿಸಬೇಕಿದೆ.
ಹೀಗಿರುವಾಗ ಹುಲಿಯೊಂದನ್ನು ಕೊಲ್ಲಲು ಶಾಸಕರೇ ಕರೆ ನೀಡಿರುವುದು ಆಶ್ಚರ್ಯಕರವಾಗಿದೆ. ಆದರೆ, ಗ್ರಾಮಸ್ಥರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹುಲಿ ಹಿಡಿಯುವ ಇಲಾಖೆಯ ಕಾರ್ಯಾಚರಣೆಯಲ್ಲಿ ನುರಿತ ಬೇಟೆಗಾರರಾದ ಗ್ರಾಮಸ್ಥರನ್ನು ಕರೆದುಕೊಳ್ಳುವಂತೆ ರೈತ ಸಂಘ ಒತ್ತಾಯಿಸಿದೆ.
ಈ ನಡುವೆ ಹುಲಿ ಕಾಣಿಸಿಕೊಂಡ ಕೂಡಲೇ ವಾಟ್ಸ್ ಅಪ್ ಸಂದೇಶದ ಮೂಲಕ ಗ್ರೂಪ್ ಗಳಲ್ಲಿ ಹಾಕುತ್ತಿರುವುದರಿಂದ ಹುಲಿ ನೋಡಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿರುವುದರಿಂದ ಜನರ ಗದ್ದಲಕ್ಕೆ ಹುಲಿಯು ಮತ್ತೆ ಬರುತ್ತಿಲ್ಲ. ಜನರ ಗದ್ದಲವಿಲ್ಲದ ಪ್ರದೇಶಕ್ಕೆ ಹೋಗಿ ಜಾನುವಾರುಗಳನ್ನು ಕೊಲ್ಲುತ್ತಿದೆ. ಹುಲಿ ಕಂಡವರು ಯಾರಿಗೂ ತಿಳಿಸದೆ ಅರಣ್ಯ ಇಲಾಖೆಗೆ ಮಾತ್ರ ತಿಳಿಸುವಂತೆ ಅರಣ್ಯಾಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications