ಕೊಡಗಿನಲ್ಲಿ ಸಂಜೆ ಬಿರುಸು ಮಳೆಗೆ ಕುಸಿದ ತಡೆಗೋಡೆ
ಕೊಡಗು, ಜೂನ್ 30: ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ಅವೈಜ್ಞಾನಿಕ ಒಳ ಚರಂಡಿ ವ್ಯವಸ್ಥೆಯಿಂದಾಗಿ ತಡೆಗೋಡೆ ಕುಸಿದು ಬಿದ್ದ ಘಟನೆ ನಗರದ ಗೌಳಿಬೀದಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ತಡೆಗೋಡೆ ಕುಸಿದ ಸ್ಥಳದಲ್ಲಿ ಮನೆಗಳು ಇಲ್ಲದೇ ಇದ್ದುದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ನಗರದ ಆಕಾಶವಾಣಿ ಸಮೀಪ ಗೌಳಿಬೀದಿಗೆ ಹೊಂದಿಕೊಂಡಂತೆ ಕಟ್ಟಿರುವ ತಡೆಗೋಡೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ತೇವಾಂಶ ಹೆಚ್ಚಾಗಿ ಏಕಾಏಕಿ ಕುಸಿದಿದೆ. ಗೋಡೆ ಕುಸಿದ ಸ್ಥಳದಲ್ಲಿ ಪಾಳುಬಿದ್ದ ಜಾಗ ಇದ್ದುದ್ದರಿಂದ ಅಪಾಯ ಸಂಭವಿಸಿಲ್ಲ.
ಕೊಡಗಿನಲ್ಲಿ ಮುಂಗಾರು ಚುರುಕು; ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಜಂಟಿ ತಾಲೀಮು
ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಒಂದು ಭಾಗದ ತಡೆಗೋಡೆ ಜಾರಿರುವುದಕ್ಕೆ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ. ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್ ತಂಡ, ನಗರ ಪೊಲೀಸ್ ಸಿಬ್ಬಂದಿ ಹಾಗೂ ಉಪವಿಭಾಗ ಅಧಿಕಾರಿ ಜವರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡೆಗೋಡೆಗೆ ಹೊಂದಿಕೊಂಡಿರುವ 3 ಕುಟುಂಬಗಳನ್ನು ಮಳೆ ಜಿನುಗುತ್ತಿರುವುದರಿಂದ ಮುನ್ನೆಚ್ವರಿಕಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ. ಅಪಾಯದ ಸ್ಥಳದಲ್ಲಿ ಇರುವುದರಿಂದ 3 ಕುಟುಂಬಗಳು ಸಂಬಂಧಿಕರ ಮನೆಗೆ ತೆರಳಿದ್ದಾರೆ.