ಭರ್ತಿಯಾಗದ ಹಾರಂಗಿ: ಚಿಂತಾಕ್ರಾಂತರಾದ ರೈತರು!
ಮಡಿಕೇರಿ, ಜುಲೈ 11: ಕೊಡಗಿನಲ್ಲಿ ಮಳೆ ಕ್ಷೀಣಿಸಿದೆ. ಕಳೆದ ಜನವರಿಯಿಂದ ಇಲ್ಲಿವರೆಗಿನ ಮಳೆಯ ಪ್ರಮಾಣವನ್ನು ಗಮನಿಸಿದರೆ ಪ್ರಸಕ್ತ ಸುರಿದ ಮಳೆ ಕಳೆವ ವರ್ಷಕ್ಕಿಂತ ಕಡಿಮೆ ಇರುವುದು ಗೋಚರಿಸಿದೆ. ಪರಿಣಾಮ ಮಡಿಕೇರಿ ಜಿಲ್ಲೆಯ ಹಾರಂಗಿ ಜಲಾಶಯದ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿಲ್ಲ.
ಹಾರಂಗಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ಇದರಿಂದ ಇದೇ ಜಲಾಶಯವನ್ನು ನಂಬಿ ಕೃಷಿ ಚಟುವಟಿಕೆ ಕೈಗೊಳ್ಳುತ್ತಿದ್ದ ರೈತರು ಚಿಂತಾಕ್ರಾಂತರಾಗಿದ್ದಾರೆ. ಇಷ್ಟರಲ್ಲೇ ಭತ್ತದ ಕೃಷಿಯನ್ನು ಕೈಗೊಳ್ಳಬೇಕಾಗಿತ್ತು. ಆದರೆ ಇವತ್ತಿನ ಪರಿಸ್ಥಿತಿಯಲ್ಲಿ ಜಲಾಶಯ ಭರ್ತಿಯಾಗುತ್ತಾ? ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ.
ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಾದರೆ ಮಾತ್ರ ಕೃಷಿಗಾಗಿ ನಾಲೆಗೆ ನೀರು ಬಿಡಲು ಸಾಧ್ಯ. ಇಲ್ಲದೆ ಹೋದರೆ ನೀರು ಸಿಗುವುದು ಕಷ್ಟವೇ. ಒಂದು ವೇಳೆ ತಡವಾಗಿ ಮಳೆ ಬಂದು ಜಲಾಶಯ ಭರ್ತಿಯಾಗಿ ಬಳಿಕ ನೀರು ಬಿಟ್ಟರೂ ಭತ್ತದ ಕೃಷಿ ಮಾಡುವ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ.
ಕಳೆದ ವರ್ಷ ಇದೇ ವೇಳೆಯಲ್ಲಿ ಇಲ್ಲಿ ಉತ್ತಮ ಮಳೆಯಾಗಿತ್ತು ಹೀಗಾಗಿ ಜುಲೈ ಮೊದಲನೇ ವಾರದಲ್ಲಿ ಜಲಾಶಯದಿಂದ ಸಾಮರ್ಥ್ಯಕ್ಕನುಗುಣವಾಗಿ ನೀರನ್ನು ಸಂಗ್ರಹಿಸಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿತ್ತು. ಅದರಿಂದ ರೈತರು ಬೆಳೆ ಬೆಳೆಯಲು ಸಾಧ್ಯವಾಗಿತ್ತು. ಆದರೆ ಇವತ್ತಿನ ಪರಿಸ್ಥಿತಿ ತೀವ್ರ ಬಿಗಡಾಯಿಸಿದ್ದು, ರೈತರು ಬೆಳೆ ಬೆಳೆಯಲಾರದ ಹಂತಕ್ಕೆ ಬಂದು ತಲುಪಿದ್ದಾನೆ. ಇದರಿಂದ ಈಗಾಗಲೇ ರೈತರು ಕಂಗಾಲಾಗಿದ್ದಾರೆ.

ನಿರೀಕ್ಷೆ ಹುಟ್ಟಿಸಿ ಹೋದ ಮಳೆ
ಜೂನ್ ಆರಂಭದಲ್ಲಿ ಉತ್ತಮವಾಗಿ ಸುರಿದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಮಳೆ, ಕ್ರಮೇಣ ಕಡಿಮೆಯಾಗುತ್ತ ಭವಿಷ್ಯದ ಕತೆಯೇನು ಎಂದು ರೈತರು ತಲೆಮೇಲೆ ಕೈಯಿಟ್ಟು ಕೂರುವಂಥ ಪರಿಸ್ಥಿತಿಯನ್ನು ತಂದಿಟ್ಟಿದೆ.

ಭರ್ತಿಯಾಗುವುದು ಯಾವಾಗ?
ಈಗ ಹಾರಂಗಿ ಜಲಾಶಯ ಅರ್ಧದಷ್ಟು ಮಾತ್ರ ಭರ್ತಿಯಾಗಿದೆ ಸದ್ಯ ಸುಮಾರು ಮೂರು ಟಿಎಂಸಿಯಷ್ಟು ಮಾತ್ರ ನೀರಿದೆ. ಈ ವೇಳೆಗೆ ಸುಮಾರು ನಾಲ್ಕೈದು ಸಾವಿರ ಕ್ಯೂಸೆಕ್ ನೀರು ಹರಿದು ಬರಬೇಕಿತ್ತು. ಆದರೆ ಈಗ ಹರಿದು ಬರುತ್ತಿರುವುದು ಕೇವಲ ಮೂನ್ನೂರೋ ನಾನೂರೋ ಕ್ಯೂಸೆಕ್ ಅಷ್ಟೆ. ಹೀಗಿರುವಾಗ ಜಲಾಶಯ ಭರ್ತಿಯಾಗುವುದು ಯಾವಾಗ ಎಂಬ ಚಿಂತೆ ಎಲ್ಲರನ್ನು ಕಾಡತೊಡಗಿದೆ.

ಜೀವನ ನಡೆಸೋದು ಹೇಗೆ?
ಸರ್ಕಾರ ಕೂಡ ಜಲಾಶಯದ ನೀರನ್ನು ಯಾವುದೇ ಕಾರಣಕ್ಕೂ ನಾಲೆಗೆ ಹರಿಸಬಾರದೆಂದು ಆದೇಶಿಸಿದೆ. ಹೀಗಾಗಿ ರೈತರು ಆಕಾಶ ನೋಡುವಂತಾಗಿದೆ. ಕೃಷಿಯನ್ನು ನಂಬಿ ಬದುಕುತ್ತಿರುವ ರೈತರು ಬೆಳೆಬೆಳೆಯದಿದ್ದರೆ ಜೀವನ ಮಾಡುವುದಾದರೂ ಹೇಗೆ ಎಂದು ಆಲೋಚಿಸುವಂತಾಗಿದೆ.

ಜಲಾಶಯದಲ್ಲಿ ಎಷ್ಟಿದೆ ನೀರು?
2,859 ಅಡಿ ಸಾಮರ್ಥ್ಯದ ಜಲಾಶಯದಲ್ಲೀಗ ಕೇವಲ 2832 ಅಡಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ 2854.68 ಇದ್ದಿದ್ದನ್ನು ಗಮನಿಸಬಹುದಾಗಿದೆ. ಒಟ್ಟಾರೆ ಮಳೆ ಚೇತರಿಸಿಕೊಂಡು ಜಲಾಶಯ ಭರ್ತಿಯಾದರೆ ಮಾತ್ರ ಅಚ್ಚುಕಟ್ಟು ಪ್ರದೇಶದ ರೈತರು ನೆಮ್ಮದಿಯಿಂದ ಬದುಕಲು ಸಾಧ್ಯವಿದೆ. ಇಲ್ಲದೆ ಹೋದರೆ ಸಂಕಷ್ಟ ತಪ್ಪಿದಲ್ಲ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications