ಹಾರಂಗಿ ಜಲಾಶಯದಿಂದ ಮತ್ತೆ ನದಿಗೆ ನೀರು ಬಿಡುಗಡೆ
ಮಡಿಕೇರಿ, ಆಗಸ್ಟ್ 20: ಕಳೆದ 15 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ಕೇವಲ ವಿದ್ಯುತ್ ಘಟಕದ ಮೂಲಕ ನಾಲೆಗೆ ಮಾತ್ರ ನೀರನ್ನು ಹರಿಸಲಾಗುತ್ತಿತ್ತು.
ಆದರೆ ಕಳೆದ ಎರಡು ದಿನಗಳಿಂದ ಕೊಡಗು ಭಾಗದಲ್ಲಿ ಹೆಚ್ಚು ಮಳೆಯಾಘುತ್ತಿದ್ದು, ಹಾರಂಗಿ ಅಣೆಕಟ್ಟೆಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ವಿದ್ಯುತ್ ಘಟಕದ ಮೂಲಕ 2000 ಕ್ಯುಸೆಕ್ ನೀರು ಮತ್ತು ಮುಖ್ಯ ದ್ವಾರದ ಮೂಲಕ 1,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ಹಾರಂಗಿ ಜಲಾಶಯದ ಸಾಮರ್ಥ್ಯ 2858,09 ಅಡಿಗಳಾಗಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಮಟ್ಟ 8.19202 ಟಿಎಂಸಿ ಆಗಿದೆ. ಆದರೆ ಗುರುವಾರ ವರದಿ ಪ್ರಕಾರ ಹಾರಂಗಿ ಜಲಾಶಯದ ನೀರಿನ ಮಟ್ಟ 7.44155 ಟಿಎಂಸಿ ನೀರು ಇದೆ. ಅಣೆಕಟ್ಟೆಯ ಒಳಹರಿವು 2,910 ಕ್ಯುಸೆಕ್ನಷ್ಟಿದ್ದು, ನಾಲೆಗೆ 250 ಕ್ಯುಸೆಕ್ ಮತ್ತು ನದಿಗೆ ಒಟ್ಟು 3,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾರಂಗಿ ಅಣೆಕಟ್ಟೆಯ ನೀರಿನ ಪ್ರಮಾಣದ ಮಾಹಿತಿ ಪಡೆದ ನಂತರ ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ನೀರಿನ ಮಟ್ಟವನ್ನು ಕಾಯ್ದಿರಿಸಿಕೊಂಡು ಹೆಚ್ಚುವರಿಯಾಗಿ ಬರುವ ನೀರನ್ನು ನದಿಗೆ ಹರಿಸುವಂತೆ ಸೂಚನೆ ನೀಡಿದ್ದಾರೆ.
"ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆ ಮೇರೆಗೆ ನದಿಗೆ ನೀರು ಹರಿಸಲಾಗುತ್ತಿದೆ," ಎಂದು ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.
ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ತೂಗು ಸೇತುವೆ ನಿರ್ಮಾಣ
ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆಯ ಪ್ರಮುಖ ಜಲಾಶಯ ಹಾಗೂ ಪ್ರವಾಸಿ ತಾಣ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ.
ಈ ಸಂಬಂಧ ತೂಗು ಸೇತುವೆಯ ಜನಕ ಎಂದೇ ಪ್ರಸಿದ್ಧವಾಗಿರುವ ಗಿರೀಶ್ ಭಾರದ್ವಾಜ್ ಪುತ್ರ ಪತಂಜಲಿ ಭಾರದ್ವಾಜ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಾರಂಗಿ ಜಲಾಶಯ ಭರ್ತಿಯಾದ ಸಂದರ್ಭ ನಾಲ್ಕು ಕ್ರಸ್ಟ್ಗೇಟ್ಗಳ ಮೂಲಕ ಹೊರಬಿಡುವ ನೀರಿನ ನಯನ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಣೆಕಟ್ಟೆ ಮುಂಭಾಗ ಹರಿಯುವ ನದಿ ದಂಡೆಯ ಮೇಲೆ ತೂಗುಸೇತುವೆ ನಿರ್ಮಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ ನೀಡಿದ್ದರು.

ಅದರಂತೆ ಅಂದಾಜು 3.5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್ ತಿಳಿಸಿದ್ದಾರೆ.
ಹಾರಂಗಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ತೂಗು ಸೇತುವೆಯು ಅಣೆಕಟ್ಟೆಯಿಂದ ಸುಮಾರು 300 ಮೀಟರ್ ಅಂತರದಲ್ಲಿರಲಿದ್ದು, 160 ಮೀಟರ್ ಉದ್ದ, 3.5 ಮೀಟರ್ ಎತ್ತರ, 1.5 ಮೀ ಅಗಲವಿರಲಿದ್ದು, ಈ ಸೇತುವೆ ನಿರ್ಮಾಣ ಕಾಮಗಾರಿಗೆ ಪತಂಜಲಿ ಭಾರದ್ವಾಜ್ರಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.
ಅದರಂತೆ ತೂಗು ಸೇತುವೆ ನಿರ್ಮಾಣದಲ್ಲಿ ಪರಿಣತಿ ಹೊಂದಿರುವ, ಇದುವರೆಗೆ 145 ಸೇತುವೆಗಳನ್ನು ನಿರ್ಮಿಸಿರುವ ಗಿರೀಶ್ ಭಾರದ್ವಾಜ್ ಮತ್ತು ಪತಂಜಲಿ ಭಾರದ್ವಾಜ್ ತಂಡ 146ನೇ ತೂಗು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ರಾಜ್ಯ ಸರ್ಕಾರದ ಅನುಮತಿ ದೊರೆತು, ಶೀಘ್ರದಲ್ಲಿ ಹಣ ಬಿಡುಗಡೆಯಾದರೆ ಮುಂದಿನ 2022ರ ಒಳಗಾಗಿ ಹಾರಂಗಿ ಜಲಾಶಯದ ತೂಗುಸೇತುವೆ ಲೋಕಾರ್ಪಣೆಗೊಳ್ಳಲಿದೆ.
Recommended Video
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications