ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟದಲ್ಲೇನಿದೆ?
ಮಡಿಕೇರಿ, ಜುಲೈ 25: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಆಗಸ್ಟ್ 12 ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ ಬೋಪಯ್ಯನವರ ಗದ್ದೆಯಲ್ಲಿ ನಡೆಯಲಿದೆ.
ಈ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು ವಿವರಗಳು ಇಲ್ಲಿವೆ. ವಾಲಿಬಾಲ್ ಪುರುಷರ ವಿಭಾಗ (4 ಜನರ ತಂಡ), ಥ್ರೋಬಾಲ್ ಮಹಿಳೆಯರ ವಿಭಾಗ (5 ಜನರ ತಂಡ), ಹಗ್ಗ ಜಗ್ಗಾಟ ಪುರುಷರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಮಹಿಳೆಯರ ವಿಭಾಗ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕರಿಗೆ (9 ಜನರ ತಂಡ), ಹಗ್ಗ ಜಗ್ಗಾಟ ಪ್ರೌಢಶಾಲಾ ಬಾಲಕಿಯರಿಗೆ (9 ಜನರ ತಂಡ).

ಕಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 50ಮೀ ಓಟ, ಕಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 50ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ 100ಮೀ ಓಟ, ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರಿಗೆ 100ಮೀ ಓಟ, ಪ್ರೌಢ ಶಾಲಾ ಬಾಲಕರಿಗೆ 200ಮೀ ಓಟ, ಪ್ರೌಢ ಶಾಲಾ ಬಾಲಕಿಯರಿಗೆ 200ಮೀ ಓಟ, ಪದವಿ ಪೂರ್ವ ಕಾಲೇಜು ಬಾಲಕರಿಗೆ 300 ಮೀ.ಓಟ, ಪದವಿ ಪೂರ್ವ ಕಾಲೇಜು ಬಾಲಕಿಯರಿಗೆ 300 ಮೀ.ಓಟ, ಪ್ರಾಥಮಿಕ, ಪೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ರಿಲೇ ಓಟ, ಸಾರ್ವಜನಿಕ ಪುರುಷರ ಮುಕ್ತ ಓಟ, ಸಾರ್ವಜನಿಕ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ.
ಪ್ರಥಮ ಹಾಗೂ ದ್ವೀತಿಯ ಸ್ಥಾನ ಗಳಿಸುವ ಕ್ರೀಡಾ ತಂಡಗಳಿಗೆ ಆಕರ್ಷಕ ಪಾರಿತೋಷಕ ಮತ್ತು ನಗದು ಬಹುಮಾನವನ್ನು ನೀಡಲಾಗುವುದು. ಪ್ರೌಢಶಾಲಾ ವಿಭಾಗದ ಹಗ್ಗ ಜಗ್ಗಾಟದಲ್ಲಿ ಭಾಗವಹಿಸುವವರು ತಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕೆಂದು ನವೀನ್ ದೇರಳ ತಿಳಿಸಿದ್ದಾರೆ.
ಓಟದ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಪಾರಿತೋಷಕಗಳನ್ನು ಮತ್ತು ಪ್ರಶಂಸನಾ ಪತ್ರವನ್ನು ನೀಡಲಾಗುವುದು. ಕ್ರೀಡಾಕೂಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭದ ನಂತರ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ 9449952008, 9740404520, 9901316315, 9480674546, 9481213920 ನ್ನು ಸಂಪರ್ಕಿಸಬಹುದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications