ಮಡಿಕೇರಿಯಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ ಕಾಡಾನೆಗಳು
ಮಡಿಕೇರಿ, ಸೆಪ್ಟೆಂಬರ್ 2: ಅರಣ್ಯದಿಂದ ಕಾಫಿ ತೋಟಗಳತ್ತ ನುಗ್ಗುವ ಕಾಡಾನೆಗಳು ಕಾರ್ಮಿಕರು ಸೇರಿದಂತೆ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿವೆ.
ಮಡಿಕೇರಿಯ ಸಿದ್ದಾಪುರದ ಬೀಟಿಕಾಡು ಎಂಬ ತೋಟದಲ್ಲಿ ದಿಢೀರ್ ಆಗಿ ಮರಿ ಸೇರಿದಂತೆ 30 ಆನೆಗಳ ಹಿಂಡು ಕಾರ್ಮಿಕರನ್ನು ಅಟ್ಟಾಡಿಸಿವೆ. ಆನೆ ಕಂಡು ಕಾರ್ಮಿಕರು ಜೀವಭಯದಲ್ಲಿ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.
8 ಮರಿ ಆನೆಗಳು ಸೇರಿದಂತೆ ಸುಮಾರು 30 ಕಾಡಾನೆಗಳು ಏಕ ಕಾಲಕ್ಕೆ ಕಾಫಿ ತೋಟಕ್ಕೆ ನುಗ್ಗಿದ್ದು, ಈ ವೇಳೆ ತೋಟ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬೆದರಿ ದಿಕ್ಕಾ ಪಾಲಾಗಿ ಓಡಿದ್ದಾರೆ. ಓಡುವ ಸಂದರ್ಭದಲ್ಲಿ ಕೆಲ ಕಾರ್ಮಿಕರು ಬಿದ್ದು ಗಾಯ ಮಾಡಿಕೊಂಡಿದ್ದಾರೆ.

ಆ ನಂತರ ಆ ತೋಟದಿಂದ ಮತ್ತೊಂದು ತೋಟದತ್ತ ಆನೆಗಳು ತೆರಳಿವೆ. ಈ ವ್ಯಾಪ್ತಿಯ ಕಾಫಿ ತೋಟಗಳಲ್ಲೇ ಈ ಆನೆಗಳ ಹಿಂಡು ನೆಲೆ ನಿಂತಿದ್ದರಿಂದ ಜನ ಭಯ ಪಡುವಂತಾಗಿದೆ. ತೋಟದ ಕೆಲಸ ಮಾಡಲು ಕಾರ್ಮಿಕರೇ ಬಾರದಂತದಾಗಿದೆ.
ಕಳೆದ ಕೆಲ ವರ್ಷಗಳಿಂದ ಅರಣ್ಯದಿಂದ ನೇರವಾಗಿಯೇ ತೋಟಗಳಿಗೆ ಕಾಡಾನೆಗಳು ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಜನ ಭಯದಿಂದ ಕಾಲ ಕಳೆಯುವಂತಾಗಿದೆ. ಜತೆಗೆ ಹಿಂಡು ಹಿಂಡಾಗಿ ಹೋಗುವುದರಿಂದ ಕಾಫಿ ಗಿಡಗಳು ಅವುಗಳಿಗೆ ಸಿಕ್ಕಿ ನಾಶವಾಗುತ್ತಿವೆ.
ಅರಣ್ಯದ ಸುತ್ತ ಆನೆ ಕಂದಕಗಳು ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಸದ್ಯ ತೋಟಗಳಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕೆಲಸವಾಗಬೇಕಿದೆ. ಇಲ್ಲದೆ ಹೋದರೆ ಅಪಾಯ ತಪ್ಪಿದಲ್ಲ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications