ಪ್ರತಿ ಸ್ವಸಹಾಯ ಸಂಘಕ್ಕೂ ತಲಾ 10 ಸಾವಿರ ಸಹಾಯಧನ: ಮಂಡ್ಯದಲ್ಲಿ ನಾರಾಯಣಗೌಡ ಭರವಸೆ
ಮಂಡ್ಯ, ನವೆಂಬರ್, 24: ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಯುವಜನರನ್ನು ಉದ್ಯಮಿಗಳನ್ನಾಗಿಸುವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ. ನಾರಾಯಣಗೌಡ ಮಂಡ್ಯದಲ್ಲಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಕಲಾ ಮಂದಿರದಲ್ಲಿ ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಸ್ವ ಸಹಾಯ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಯುವಜನರ ಆರ್ಥಿಕ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
ಪ್ರತಿಯೊಂದು ಸ್ವಸಹಾಯ ಸಂಘಕ್ಕೂ ತಲಾ 10 ಸಾವಿರ ಸಹಾಯಧನ ನೀಡಲಾಗುವುದು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮ ಕೈಗೊಂಡಲ್ಲಿ ಅಂತಹ ಸಂಘಗಳಿಗೆ ಬ್ಯಾಂಕ್ಗಳಿಂದ 2 ರಿಂದ ಮೂರ್ನಾಲ್ಕು ಲಕ್ಷ ರೂಪಾಯಿವರೆಗೂ ಸಾಲ ಸೌಲಭ್ಯ ದೊರೆಯುತ್ತದೆ. ಇದರಲ್ಲಿ ಶೇಕಡಾ 50ರಷ್ಟು ಸಬ್ಸಿಡಿಯೂ ದೊರೆಯುವಂತೆ ಯೋಜನೆ ರೂಪಿಸಲಾಗಿದ್ದು, ಇದು ಭಾರತದಲ್ಲೇ ಮೊದಲ ಪ್ರಯೋಗವಾಗಿದೆ ಎಂದು ವಿವರಿಸಿದರು.

ಯುವಜನರನ್ನು ಸರಿ ದಾರಿಗೆ ತರುವ ಪ್ರಯತ್ನ
ಮಹಿಳೆ ಮತ್ತು ಯುವತಿಯರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಯುವಕರು ದಾರಿ ತಪ್ಪುತ್ತಿದ್ದು, ರಾಷ್ಟ್ರದ ಅತಿ ಮುಖ್ಯ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ದೇಶದ ಅಭಿವೃದ್ಧಿಯಲ್ಲಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಸ್ವತಃ ಮುಖ್ಯಮಂತ್ರಿಗಳೇ ಚಿಂತಿಸಿದ್ದು, ನಂತರ ಅನುಷ್ಠಾನಗೊಳಿಸಿದ್ದಾರೆ ಎಂದು ಹೇಳಿದರು.

350 ಜನ ಕಿವುಡರಿಗೆ ಸಾಧನ ವಿತರಣೆ
ಮುಂಬೈನ ಉದ್ಯಮಿಯೊಬ್ಬರು ಕೆ.ಆರ್. ಪೇಟೆ ತಾಲೂಕಿನಲ್ಲಿರುವ ಸುಮಾರು ಒಂದು ಸಾವಿರ ಕಿವುಡರಿಗೆ ನೆರವಾಗುವ ಸಾಧನಗಳನ್ನು ವಿತರಿಸಲಾಯಿತು. ಆರಂಭಿಕ ಹಂತದಲ್ಲಿ 350 ಜನರಿಗೆ ವಿತರಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಇರುವ ಕಿವುಡರಿಗೆ ಈ ಸಾಧನಗಳನ್ನು ವಿತರಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಈ ಬಗ್ಗೆ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಸಿಇಒಗೆ ಸೂಚಿಸಿದರು.

ಸರಿಯಾಗಿ ತರಬೇತಿ ಪಡೆಯುವಂತೆ ಸಲಹೆ
ನಂತರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಮಾತನಾಡಿ, ಜಿಲ್ಲಾ ಮಟ್ಟದ ಯುವಜನೋತ್ಸವ ಮಂಡ್ಯದಲ್ಲಿ ನಡೆಯುತ್ತಿದೆ. ಸ್ಪರ್ಧಾಳುಗಳು ಉತ್ತಮ ಪ್ರದರ್ಶನ ನೀಡಿ ಭಾಗವಹಿಸಿ. ಸೋಲು -ಗೆಲುವು ಮುಖ್ಯವಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಸೋತವರು ಮುಂದಿನ ವರ್ಷ ಮತ್ತೆ ಭಾಗವಹಿಸಲು ಅವಕಾಶ ಇದೆ. ಅದಕ್ಕೆ ಸರಿಯಾಗಿ ತರಬೇತಿ ಪಡೆಯುವಂತೆ ಸಲಹೆ ನೀಡಿದರು. ಇಲ್ಲಿ ಆಯ್ಕೆಯಾದವರು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಭಗವಹಿಸಬಹುದು. ಈ ಬಾರಿ ರಾಷ್ಟ ಮಟ್ಟದ ಯುವಜನೋತ್ಸವ ಕರ್ನಾಟಕದಲ್ಲೇ ನಡೆಯುವ ಸಾಧ್ಯತೆಗಳಿವೆ. ಇದಕ್ಕೆ ಸರಿಯಾದ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ತೀರ್ಪುಗಾರರು ಪ್ರಾಮಾಣಿಕವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಲಹೆ ನೀಡಿದರು.

100 ಜನ ಮಕ್ಕಳಿಗೆ ಪೈಲಟ್ ತರಬೇತಿ
ಇನ್ನು ಜಕ್ಕೂರು ವಿಮಾನ ನಿಲ್ದಾಣದಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಸಂಸ್ಥೆಗೆ ಉತ್ತೇಜನ ನೀಡಲಾಗಿದೆ. ಕಾರ್ಮಿಕರ ಮಕ್ಕಳು, ದೀನ ದಲಿತರ ಮಕ್ಕಳನ್ನೂ ಸಹ ಪೈಲಟ್ಗಳನ್ನಾಗಿ ಮಾಡುವ ಯೋಜನೆ ರೂಪಿಸಲಾಗಿದೆ. ಅದರಂತೆಯೇ 100 ಜನರಿಗೆ ತರಬೇತಿ ನೀಡಲಾಗುತ್ತಿದೆ. ಒಬ್ಬರಿಗೆ 30 ರಿಂದ 35 ಲಕ್ಷ ಖರ್ಚಾಗುತ್ತಿದ್ದು, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಇದನ್ನು ವಹಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಸಿಇಒ ಶಾಂತಾ ಎಲ್. ಹುಲ್ಮನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ನಾಗರಾಜು, ಸೋಮಶೇಖರ್, ಕುಮಾರ್ ಕೊಪ್ಪ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಒಂಪ್ರಕಾಶ್ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ 2 ಗುಂಪು, 17 ವೈಯಕ್ತಿಕ ತಂಡಗಳು ಭಾಗವಹಿಸಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications