ಚರಂಡಿ ಕಾಮಗಾರಿ ಅನುಷ್ಠಾನಕ್ಕೆ ನಿರ್ಲಕ್ಷ್ಯ: ಪಿಡಿಒಗೆ 10 ಸಾವಿರ ರೂ ದಂಡ
ಮಂಡ್ಯ, ಮೇ 20: ಅರ್ಧಕ್ಕೆ ನಿಂತಿರುವ ಚರಂಡಿ ಕಾಮಗಾರಿ ಅನುಷ್ಠಾನಗೊಳಿಸಲು ನಿರ್ಲಕ್ಷ್ಯ ಧೋರಣೆ ಅನುಸರಿಸಿದ ಬೂದನೂರು ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ 10 ಸಾವಿರ ದಂಡ ವಿಧಿಸಿ ಮಂಡ್ಯ ಜಿಲ್ಲಾ ಪಂಚಾಯತ್ ದೂರು ನಿವಾರಣಾ ಪ್ರಾಧಿಕಾರ ಆದೇಶ ಹೊರಡಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಕೆ.ಕರಿಯಪ್ಪ ಅವರು, ಪಿಡಿಒ ವಿನಯ್ ಕುಮಾರ್ ಅವರಿಗೆ ದಂಡ ವಿಧಿಸಿದ್ದು, 30 ದಿನದೊಳಗೆ ಜಿಲ್ಲಾ ಪಂಚಾಯತ್ ಲೆಕ್ಕ ಶೀರ್ಷಿಕೆಗೆ ಜಮಾ ಮಾಡುವಂತೆ ಸೂಚಿಸಿದ್ದಾರೆ.

ತಮ್ಮ ಮನೆ ಬಳಿ ಚರಂಡಿ ಕಾಮಗಾರಿ ಕೈಗೊಂಡಿದ್ದು, ಪೂರ್ಣಗೊಳಿಸದೆ ನೀರು ಸರಾಗವಾಗಿ ಹರಿಯದೇ ನಿಂತು ರೋಗ-ರುಜಿನಗಳಿಗೆ ಕಾರಣವಾಗಿದೆ ಎಂದು ಗ್ರಾಮದ ಬಿ.ಎಸ್.ಚಂದ್ರಶೇಖರ ಎನ್ನುವವರು ದೂರು ಸಲ್ಲಿಸಿದ್ದರು.
ಸದರಿ ವಿಚಾರವಾಗಿ ಮಹಾತ್ಮ ಗಾಂಧಿ ನರೇಗಾ ಹಾಗೂ 13ನೇ ಹಣಕಾಸು ಯೋಜನೆಯಲ್ಲಿ ಕ್ರಮ ವಹಿಸುವುದಾಗಿ ತಿಳಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಪಂ ಸದಸ್ಯರೊಬ್ಬರ ಅಕ್ಷೇಪಣೆ ಮುಂದಿಟ್ಟುಕೊಂಡು ಅನುಪಾಲನಾ ವರದಿಗೆ ತದ್ವಿರುದ್ಧವಾಗಿ ಹಾಗೂ ಉದ್ದೇಶಪೂರ್ವಕವಾಗಿ ಗ್ರಾಪಂ ಸಭೆಗೆ ತಪ್ಪು ಮಾಹಿತಿ ನೀಡಿದ್ದಲ್ಲದೆ ಪ್ರಾಧಿಕಾರದ ನಿರ್ದೇಶನವನ್ನು ನಿರ್ಲಕ್ಷ್ಯ ಮಾಡಿರುವುದಾಗಿ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993, ಪ್ರಕರಣ 296(ಎ)ಯ ಉಪ ಪ್ರಕರಣ (7) ರಡಿಯಲ್ಲಿ ಪಿಡಿಒ ನಿರ್ವಹಿಸಬೇಕಾದ ಕರ್ತವ್ಯವನ್ನು ಕಡೆಗಣಿಸಿರುವುದು ಹಾಗೂ ನಿರಾಕರಿಸಿ, ನಿಗದಿತ ಸಮಯದೊಳಗೆ ಅನುಷ್ಠಾನ ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಳಂಬ ಮಾಡಿದ್ದಾರೆ. ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಬೂದನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿನಯ್ ಕುಮಾರ್ ಅವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, 30 ದಿನಗಳೊಳಗೆ ದಂಡದ ಹಣವನ್ನು ಜಿಲ್ಲಾ ಪಂಚಾಯತ್ನ ಲೆಕ್ಕ ಶೀರ್ಷಿಕೆಗೆ ಪಾವತಿ ಮಾಡಬೇಕು ಎಂದು ಪ್ರಾಧಿಕಾರ ಸೂಚನೆ ನೀಡಿದೆ ಎನ್ನಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications