ಮಂಡ್ಯದ ಹುಲ್ಕೆರೆ ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ: ಇಬ್ಬರ ಸ್ಥಿತಿ ಗಂಭೀರ
ಮಂಡ್ಯ, ಜುಲೈ 15: ವಿಷ ಬೆರೆಸಿದ ಶಾಲೆಯ ಟ್ಯಾಂಕ್ ನ ನೀರನ್ನು ಕುಡಿದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾದ ಘಟನೆ ಮಂಡ್ಯ ಜಿಲ್ಲೆಯ ಹುಲ್ಕೆರೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಕುಡಿಯುವ ನೀರಿಗೆ ವಿಷ ಬೆರೆಸಿದ ದುಷ್ಕರ್ಮಿಗಳು
ಸೋಮವಾರ ಬೆಳಗ್ಗೆ 11ರ ಸಮಯದಲ್ಲಿ ವಿಷಮಿಶ್ರಿತ ನೀರು ಕುಡಿದ ಹುಲ್ಕೆರೆ ಗ್ರಾಮದ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ದರ್ಶನ್, ಧನುಷ್, ಶಿವಲಿಂಗ, ಯಶವಂತ್, ಮಯೂರ್, ಚಂದು, ಸೋಮಶೇಖರ್, ನಿಶಾ, ಪ್ರಜ್ವಲ್ ಮತ್ತು ತೇಜು ಎಂಬ ವಿದ್ಯಾರ್ಥಿಗಳು ನೀರು ಕುಡಿದ ತಕ್ಷಣ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಕ್ಕಳ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಳಿದ 9 ಮಕ್ಕಳಿಗೆ ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.