ಮದ್ದೂರು: ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 14 ಮಂದಿ ಅಸ್ವಸ್ಥ
ಮಂಡ್ಯ, ನ.28: ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿದಂತೆ 14 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಸಮೀಪದ ಹೊಸಕೊಪ್ಪಲು ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕಬ್ಬು ಕಡಿಯುವ ಕೂಲಿ ಕಾರ್ಮಿಕರಾದ ಚಂದ್ರನಾಯ್ಕ (26), ಮೀನಾಕ್ಷಿ ಬಾಯಿ (26), ಶಾಂತಾಬಾಯಿ (30), ಪಾಂಡುನಾಯ್ಕ (25), ರೇಣುಕಾನಾಯ್ಕ(25), ಸತ್ಯನಾಯ್ಕ (28), ಸೀತಾಬಾಯಿ (8), ಯೋಗೀಶ (10), ಅಂಬರೀಶ, ಯಕ್ಷ (5), ಸಂಜೀವ (8 ತಿಂಗಳು), ಬಾಲಾಜಿ (5), ಶರತ್ (6), ಆರತಿಬಾಯಿ (3) ಎನ್ನುವವರು ಅಸ್ವಸ್ಥರಾಗಿದ್ದಾರೆ.
ಬಳ್ಳಾರಿ ಮೂಲದ 30 ಕೂಲಿ ಕಾರ್ಮಿಕರು ಮಕ್ಕಳನ್ನು ಕರೆದುಕೊಂಡು ಮದ್ದೂರು ತಾಲೂಕಿನ ಕೊಪ್ಪಗೆ ಕಬ್ಬು ಕಟಾವಿಗೆ ಬಂದಿದ್ದರು. ಬಳ್ಳೇಕೆರೆ ಸಮೀಪದಲ್ಲಿರುವ ರೈಸ್ಮಿಲ್ ಬಳಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದರು.

ಸಮೀಪದಲ್ಲಿರುವ ಗದ್ದೆಯಲ್ಲಿ ದೊಡ್ಡ ಡ್ರಂ ಇರುವುದನ್ನು ಕಂಡ ಕೂಲಿ ಕಾರ್ಮಿಕರು ಜಮೀನಿನ ಮಾಲೀಕನನ್ನು ಕೇಳಿ ನೀರು ತುಂಬಿಕೊಳ್ಳಲು ಡ್ರಂ ಪಡೆದಿದ್ದರು. ಅದರಲ್ಲಿ ನೀರು ತುಂಬಿಟ್ಟುಕೊಂಡಿ ಕುಡಿದಿದ್ದಾರೆ.
ಜಮೀನು ಮಾಲೀಕ ಮನೆಗೆ ಬಂದು ತನ್ನ ಮಗನಿಗೆ ಕೂಲಿ ಕಾರ್ಮಿಕರಿಗೆ ಡ್ರಂ ನೀಡಿರುವ ವಿಚಾರ ತಿಳಿಸಿದ್ದ. ಆಗ ಆ ಡ್ರಂನಲ್ಲಿಗದ್ದೆಗೆ ಸಿಂಪಡಿಸಲು ಕ್ರಿಮಿನಾಶಕ ತುಂಬಿದ್ದನ್ನು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಜಮೀನು ಮಾಲೀಕ ಗದ್ದೆ ಬಳಿ ಬಂದು ಕೂಲಿ ಕಾರ್ಮಿಕರಿಗೆ ನೀರು ಕುಡಿಯದಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕೆಲವರು ನೀರು ಕುಡಿದಿದ್ದ ಕೆಲವರು ಹೊಟ್ಟೆ ಉರಿಯಿಂದ ಬಳಲುತ್ತಿದ್ದರು.
ತಕ್ಷಣ ಅವರನ್ನು ಸಮೀಪದ ಕೊಪ್ಪ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ಗೆ ದಾಖಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications