ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ: 24 ಗಂಟೆಯೊಳಗೆ ಇಬ್ಬರ ಸಾವು

|
Google Oneindia Kannada News

ಮಂಡ್ಯ, ಜೂನ್ 22: ಮಂಡ್ಯದಲ್ಲಿ ಕಳೆದ ವಾರವಷ್ಟೇ ರೈತರೊಬ್ಬರು ನಾಲೆಗೆ ನೀರು ಹರಿಸುವಂತೆ ಸಿಎಂಗೆ ಒತ್ತಾಯಿಸಿ ನೇಣಿಗೆ ಕೊರಳೊಡ್ಡಿದ್ದರು. ಇದಾದ ಬಳಿಕ ನಿನ್ನೆಯಿಂದ ಇಂದಿನವರೆಗೂ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಸಾಲಮನ್ನಾ ತಡವಾಗುತ್ತಿರುವುದಕ್ಕೆ ಕಾರಣ ಕೊಟ್ಟ ಕುಮಾರಸ್ವಾಮಿ ಸಾಲಮನ್ನಾ ತಡವಾಗುತ್ತಿರುವುದಕ್ಕೆ ಕಾರಣ ಕೊಟ್ಟ ಕುಮಾರಸ್ವಾಮಿ

ದೊಡ್ಡತರ ಹಳ್ಳಿ ಗ್ರಾಮದ ಮಂಜಶೆಟ್ಟಿ (35) ಸಾಲಬಾಧೆ ತಾಳದೆ ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಉದ್ದೇಶಕ್ಕಾಗಿ ಆಕ್ಸಿಸ್ ಬ್ಯಾಂಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಖಾಸಗಿ ಲೇವಾದೇವಿದಾರರಿಂದ 2 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ, ಮಗ, ಮಗಳು ಇದ್ದಾರೆ. ಕಿಕ್ಕೇರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 farmer death in one day at Mandya district

ಇಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಹೇತಕೋನಹಳ್ಳಿ ಗ್ರಾಮದಲ್ಲಿ 45 ವರ್ಷದ ಹನುಮಂತಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ ಜಮೀನು ಹೊಂದಿದ್ದು, ಕೃಷಿಗಾಗಿ 5 ಲಕ್ಷ ಸಾಲ ಮಾಡಿಕೊಂಡಿದ್ದ ಹನುಮಂತಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಸೇರಿದಂತೆ ಇತರ ಸಂಘಗಳಿಂದ ಮತ್ತು ಕೆಲ ವ್ಯಕ್ತಿಗಳಿಂದ ಕೈ ಸಾಲ ಮಾಡಿದ್ದ ಇವರು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರು. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Farmers suicide rate is increasing day by day. In 24 hours, two farmer commited suicide in Mandya district. They took a debt from banks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X