ನಿರ್ಮಲಾನಂದರ ಪರಿಸರ ಪ್ರೇಮ; ಆದಿಚುಂಚನಗಿರಿಯಲ್ಲಿ 250 ಮರಗಳ ಸ್ಥಳಾಂತರ
ಮಂಡ್ಯ, ಜನವರಿ 7: ತಂತ್ರಜ್ಞಾನವನ್ನು ಬಳಸಿಕೊಂಡು ಪರಿಸರವನ್ನು ಉಳಿಸುವ ಪ್ರಯತ್ನಗಳು ಹೆಚ್ಚಾಗಿ ನಡೆಯುತ್ತಿವೆ. ಅದಕ್ಕೆ, ಈಚೆಗೆ ಮರಗಳನ್ನು ಒಂದೆಡೆಯಿಂದ ಇನ್ನೊಂದು ಕಡೆಗೆ ಸ್ಥಳಾಂತರಗೊಳಿಸುತ್ತಿರುವ ಹಲವು ಉದಾಹರಣೆಗಳು ದೊರೆಯುತ್ತಿರುವುದೇ ಸಾಕ್ಷಿ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದಲ್ಲೂ ಇಂಥದ್ದೊಂದು ಉದಾಹರಣೆ ದೊರೆತಿದೆ.
ಅತ್ಯಾಧುನಿಕ ತಂತ್ರಜ್ಞಾನದ ನೂತನ ಆಸ್ಪತ್ರೆಯ ಕಟ್ಟಡ ನಿರ್ಮಾಣದ ವೇಳೆ ಧರೆಗೆ ಉರುಳಲಿದ್ದ ಸುಮಾರು ಇನ್ನೂರೈವತ್ತಕ್ಕೂ ಹೆಚ್ಚಿನ ಮರಗಳನ್ನು ಬುಡಸಹಿತ ತೆಗೆದು ಬೇರೆಡೆ ನೆಡುವ ಮೂಲಕ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಮಠಾಧೀಶರಾದ ಡಾ ನಿರ್ಮಲಾನಂದ ಸ್ವಾಮೀಜಿ ಪರಿಸರ ಪ್ರೇಮ ಮೆರೆದಿದ್ದಾರೆ.

ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯಿರುವ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮುಂಭಾಗದ ಆವರಣದಲ್ಲಿ ಸುಮಾರು 140 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನೂತನ ಆಸ್ಪತ್ರೆ ಶಂಕುಸ್ಥಾಪನೆ ನೆರವೇರಿದೆ. ಇನ್ನೊಂದು ವರ್ಷದ ಅವಧಿಯಲ್ಲಿ ಈ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದ್ದು, ಈ ಕಟ್ಟಡ ನಿರ್ಮಿಸಲುದ್ದೇಶಿಸಿದ ಆಸ್ಪತ್ರೆ ಆವರಣದಲ್ಲಿ ಸುಮಾರು 250ಕ್ಕೂ ಹೆಚ್ಚು ಗಿಡ ಮರಗಳಿದ್ದು, ಅವುಗಳನ್ನು ಕಟ್ಟಡ ನಿರ್ಮಾಣದ ವೇಳೆ ತೆರವುಗೊಳಿಸುವುದು ಅನಿವಾರ್ಯವಾಗಿತ್ತು. ಆದರೆ ಈ ಮರಗಳನ್ನು ನೂತನ ತಂತ್ರಜ್ಞಾನ ಬಳಸಿ ಮತ್ತೊಂದು ಪ್ರದೇಶವಾದ ಬಿಜಿಎಸ್ ಮಾಡೆಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನೆಡಲಾಗಿದೆ.

ಈ ಮರಗಿಡಗಳನ್ನು ಆದಿಚುಂಚನಗಿರಿ ವೈದ್ಯಕೀಯ ಮಹಾ ವಿದ್ಯಾಲಯದ ಬೃಹತ್ ಆವರಣದಲ್ಲಿ ದೈವೈಕ್ಯರಾದ ಬಾಲ ಗಂಗಾಧರನಾಥ ಸ್ವಾಮೀಜಿ ಹತ್ತಾರು ಜಾತಿಯ ನೂರಾರು ಮರಗಳನ್ನು ನೆಟ್ಟು ಪೋಷಿಸಿದ್ದರು. ಪರಿಸರಕ್ಕೆ ಹೆಚ್ಚು ಒತ್ತು ನೀಡಿದ್ದರು. ಈ ಮರಗಿಡಗಳು ಬೆಳೆದು ಆಸ್ಪತ್ರೆ ಆವರಣದ ಸುತ್ತಮುತ್ತ ಹಚ್ಚಹಸಿರಿನಿಂದ ಕಾಣುವುದರೊಂದಿಗೆ ತಂಪು ನೀಡುತ್ತಿತ್ತು. ಇದೀಗ ಈ ಸ್ಥಳದಲ್ಲಿ ನೂತನ ತಂತ್ರಜ್ಞಾನದಲ್ಲಿ 140 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಲ್ಲಿದ್ದ ಮರಗಳಿಗೆ ಜೀವದಾನ ಮಾಡಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications