ಮಂಡ್ಯ ಪಂಚಾಯತ್ರಾಜ್ ಇಂಜಿನಿಯರಿಂಗ್ ನೌಕರರಿಂದ 3.51 ಕೋಟಿ ರೂ. ದುರುಪಯೋಗ: ಸಿಎಂ
ಮಂಡ್ಯ, ಸೆಪ್ಟೆಂಬರ್, 22: ಮಂಡ್ಯ ಜಿಲ್ಲಾ ಪಂಚಾಯಿತಿಯ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಈವರೆಗೆ 3.51 ಕೋಟಿ ಹಣ ದುರುಪಯೋಗ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿಗಳು, 2010-11 ರಿಂದ 2019-20ನೇ ಸಾಲಿನವರೆಗೆ ಇಂಜಿನಿಯರಿಂಗ್ ವಿಭಾಗದಲ್ಲಿ ಅಧಿಕಾರಿ ಮತ್ತು ನೌಕರರು 3.51 ಕೋಟಿ ರೂ. ದುರುಪಯೋಗ ಆಗಿರುವುದು ಕಂಡುಬಂದಿದೆ. ಈ ಪ್ರಕರಣದಲ್ಲಿ ಕಾರ್ಯಪಾಲಕ ಅಭಿಯಂತರರಾದ ಪ್ರಕಾಶ್ ಗೋಪಾಲಕೃಷ್ಣ, ಎಸ್.ವಿ. ಪದ್ಮನಾಭ, ಲೆಕ್ಕಾಧೀಕ್ಷಕ ವಿ.ಪಿ. ಆನಂದ್ ಕುಮಾರ್ ಸೇರಿದಂತೆ 10 ಜನ ಅಧಿಕಾರಿಗಳು, ನೌಕರರ ವಿರುದ್ಧ ಪ್ರಕರಣ ದಾಖಲಾಗಿದೆ. ಇಲಾಖಾ ತನಿಖೆ ಪ್ರಗತಿಯಲ್ಲಿದೆ ಎಂದು ಸಿಎಂ ಉತ್ತರಿಸಿದ್ದಾರೆ.
3.51 ಕೋಟಿ ರೂಪಾಯಿ ದುರುಪಯೋಗ
ವಿಚಾರಣಾಧಿಕಾರಿಗಳು ವರದಿ ನೀಡಿದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಸಂಬಂಧಿಸಿದ ಬ್ಯಾಂಕುಗಳಿಗೂ ತಿಳಿಸಿದ್ದು, ಲೋಪವೆಸಗಿರುವವರಿಂದ ಸರ್ಕಾರಕ್ಕೆ ಹಣ ಮರುಪಾವತಿಸುವ ಬಗ್ಗೆ ಕರ್ನಾಟಕ ರಾಜ್ಯ ಗ್ರಾಹಕರ ವಿವಾದ ಪರಿಹಾರ ಆಯೋಗ, ಬೆಂಗಳೂರಿನಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಜೊತೆಗೆ ಸದರಿ ಅಧಿಕಾರಿ, ನೌಕರರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಅಪರಾಧ ಎಸಗಿದ್ದಾರೆನ್ನಲಾದ ಗ್ರೂಪ್ ಡಿ ನೌಕರ ಎಚ್.ಎಲ್. ನಾಗರಾಜು ಅವರು ಕಳೆದ ಮೇ 8ರಂದು ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರಾದ ಚಂದ್ರಹಾಸ, ರಾಮಕೃಷ್ಣ, ಎಸ್.ವಿ. ಪದ್ಮನಾಭ, ಪ್ರಕಾಶ್ ಗೋಪಾಲಕೃಷ್ಣ ಪವರ್, ಎಸ್. ಕುಮಾರ್, ಲೆಕ್ಕ ಪರಿಶೋಧಕರಾದ ಕೆ. ಪುಟ್ಟಭೈರಯ್ಯ, ಆರ್. ರಾಜು, ಎ.ಪಿ. ಆನಂದ್ಕುಮಾರ್, ನಗದು ಸಹಾಯಕರಾದ ಬಿ.ಆರ್. ರಮೇಶ್ ಹಾಗೂ ಎಚ್.ಎಲ್. ನಾಗರಾಜು ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 2014ರಿಂದ 2020ರವರೆಗೆ ಕರ್ತವ್ಯದಲ್ಲಿದ್ದ ಅಧಿಕಾರಿ, ನೌಕರರು ಎಷ್ಟು ಮೊತ್ತದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದರ ಬಗ್ಗೆಯೂ ವಿವರಣೆ ನೀಡಿದ್ದಾರೆ. ಈ ಅವಧಿಯಲ್ಲಿ ಒಟ್ಟಾರೆ 3.51 ಕೋಟಿಗೂ ಹೆಚ್ಚು ದುರುಪಯೋಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವರಣೆ ನೀಡಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications