ಹೆಗಲೇರಿದ 350 ಕೆಜಿ ಸೇಬಿನ ಹಾರದಿಂದ ಸೇಬು ಕಿತ್ತು ತಿಂದ ಡಿಕೆಶಿ!
Recommended Video

ಶ್ರೀರಂಗಪಟ್ಟಣ (ಮಂಡ್ಯ), ಮಾರ್ಚ್ 15: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂದು ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದರು. ಈ ಸಂದರ್ಭ ಅವರನ್ನು ಸ್ವಾಗತಿಸಲು ಬೃಹತ್ ಸೇಬಿನ ಹಾರವನ್ನು ಹಾಕಲಾಯಿತು. ಈ ಹಾರದಿಂದ ಡಿಕೆಶಿ ಸೇಬಿನ ಹಣ್ಣನ್ನು ಕಿತ್ತು ತಿನ್ನುತ್ತಿದ್ದುದು ಗಮನಸೆಳೆಯಿತು. ಅಷ್ಟೇ ಅಲ್ಲ ಸೇಬಿನ ಹಾರದ ಹಣ್ಣಿಗಾಗಿ ಕೈ ಕಾರ್ಯಕರ್ತರೂ ಕಿತ್ತಾಡಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತೂಬಿನಕೆರೆ ಹೆಲಿಪ್ಯಾಡ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ನಂತರ ತೆರೆದ ವಾಹನದ ಮೂಲಕ ಮೆರವಣಿಗೆಯಲ್ಲಿ ಯಲಿಯೂರು, ಸಿದ್ದಯ್ಯನಕೊಪ್ಪಲು, ಸುಂಡಹಳ್ಳಿ, ಇಂಡುವಾಳುಗೆ ಕರೆತರಲಾಯಿತು.
ಸಿದ್ದಯ್ಯನಕೊಪ್ಪಲು ಗ್ರಾಮದಲ್ಲಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಮೇಲೆ ಪುಷ್ಪವೃಷ್ಟಿ ಮಾಡಿದರು. ಜೆಸಿಬಿ ಮೇಲಿಂದ ಹೂವಿನ ಮಳೆ ಸುರಿಸಿ ಅಭಿಮಾನ ವ್ಯಕ್ತಪಡಿಸಿದರು.

ಬಳಿಕ ಇಂಡುವಾಳುವಿನಲ್ಲಿ ಶ್ರೀರಂಗಪಟ್ಟಣ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಚ್ಚಿದಾನಂದ ಬೆಂಬಲಿಗರು ಸುಮಾರು ಮೂರುವರೆ ಕ್ವಿಂಟಾಲ್ ತೂಕದ ಸೇಬು, ಗುಲಾಬಿ ಮಿಶ್ರಿತ ಬೃಹತ್ ಹಾರವನ್ನು ಕ್ರೇನ್ ಮೂಲಕ ಹಾಕಿ ಅಭಿನಂದಿಸಿದರು. ಈ ವೇಳೆ ಒಂದು ಸೇಬು ಕಿತ್ತು ತಿಂದು ಅಭಿಮಾನಿಗಳಿಗೆ ಧನ್ಯವಾದವನ್ನು ಡಿಕೆಶಿ ಅರ್ಪಿಸಿದರು.

ಇದಾದ ಬಳಿಕ ಹಾರವನ್ನು ಕ್ರೇನ್ ಮೂಲಕ ಕೆಳಗಿಳಿಸುತ್ತಿದ್ದಂತೆಯೇ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕೈ ಕಾರ್ಯಕರ್ತರು ಸೇಬಿನ ಹಣ್ಣನ್ನು ಪಡೆಯಲು ತಾಮುಂದು ನಾಮುಂದು ಎಂದು ಮುಗಿಬಿದ್ದು ಕಿತ್ತು ತಿಂದರು. ಇದರಿಂದಾಗಿ ಕೆಲಕಾಲ ತಳ್ಳಾಟ ನೂಕಾಟ ಕಂಡು ಬಂದಿತು.

ಸದ್ಯ ಶ್ರೀರಂಗಪಟ್ಟಣವನ್ನು ಜೆಡಿಎಸ್ ಶಾಸಕ ಬಂಡಿಸಿದ್ದೇಗೌಡ ಪ್ರತಿನಿಧಿಸುತ್ತಿದ್ದಾರೆ. ಇವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಇದರಿಂದ ಇಲ್ಲಿ ಕಾಂಗ್ರೆಸ್ ನ ಸಚ್ಚಿದಾನಂದ ಟಿಕೆಟ್ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಕಾರಣಕ್ಕೆ ಅವರ ಜತೆ ಮಾತನಾಡಲು ಇಂದು ಡಿಕೆ ಶಿವಕುಮಾರ್ ಆಗಮಿಸಿದ್ದರು. ಈ ಸಂದರ್ಭ ಡಿ.ಕೆ. ಶಿವಕುಮಾರ್ ಮುಂದೆ ಸಚ್ಚಿದಾನಂದ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications