ರೌಡಿ ಫಣೀಶ್ ಹತ್ಯೆ ಪ್ರಕರಣದಲ್ಲಿ 6 ಆರೋಪಿಗಳ ಬಂಧನ
ಮಂಡ್ಯ, ಜೂನ್ 29: ರೌಡಿ ಫಣೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ ಪಟ್ಟಣದ ಗಂಗಾಮತ ಬೀದಿಯ ಜಿಮ್ ಶಿವು ಉರುಫ್ ಎಂ.ಸಿ.ಶಿವಪ್ರಸಾದ್, ಎಂ.ಪವನ್ ಕುಮಾರ್(20), ಪುರುಷೋತ್ತಮ್ (26), ಗೌಡಗೆರೆ ಗ್ರಾಮದ ಜಿ.ಕಿರಣ (20), ರವಿಕಿರಣ (20) ಹಾಗೂ ಕೆ.ಕೌಶಿಕ್ (18) ಬಂಧಿತ ಆರೋಪಿಗಳು. ಬಂಧಿತರಿಂದ 4 ಲಾಂಗ್, 1 ಚಾಕು, 3 ಮೊಬೈಲ್, 1 ಮೋಟಾರು ಬೈಕ್ ಹಾಗೂ ಸ್ಕಾರ್ಫಿಯೋ ವಶಪಡಿಸಿಕೊಳ್ಳಲಾಗಿದೆ.

ಜೂನ್ 2ರಂದು ಫಣೀಶ್ ವಾಕಿಂಗ್ ಗೆ ಬಂದಿದ್ದ ಸಂದರ್ಭದಲ್ಲಿ ಮಳವಳ್ಳಿ ಹೊರವಲಯದ ಸವಿಗಂಗಾ ಕಲ್ಯಾಣ ಮಂಟಪದ ಬಳಿ ಸ್ಕಾರ್ಪಿಯೋದಲ್ಲಿ ಬಂದ ಆರೋಪಿಗಳು ಖಾರದ ಪುಡಿ ಎರಚಿ, ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು

ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಅದರಂತೆ ಡಿವೈಎಸ್ಪಿ ಮ್ಯಾಥೀವ್ ಥಾಮಸ್ ನೇತೃತ್ವದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಶ್ರೀಕಾಂತ್ ಪಿಎಸ್ ಐಗಳಾದ ರವಿಕುಮಾರ್, ಶ್ರೀಧರ್, ಅಯ್ಯನಗೌಡ, ಸಿಬ್ಬಂದಿ ಸಿದ್ದರಾಜು, ಅಂಜನ್ ಮೂರ್ತಿ, ರಾಜು, ಮಾದೇಶ, ನಟರಾಜು, ಪ್ರಭುಸ್ವಾಮಿ, ರಿಯಾಜ್ ಪಾಷ್ ಮತ್ತಿತರರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications