Get Updates
Get notified of breaking news, exclusive insights, and must-see stories!

ಸಕ್ಕರೆ ನಾಡಿನ ಕನ್ನಡ ಹಬ್ಬಕ್ಕೆ ಭರ್ಜರಿ ಸಜ್ಜು : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಹೇಗಿದೆ..?

ಮಂಡ್ಯ, ನವೆಂಬರ್‌ 14: ಮಂಡ್ಯ ನಗರದಲ್ಲಿ ಡಿಸೆಂಬರ್ 20, 21, 22ರಂದು ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಹಬ್ಬ. ನಮ್ಮ ಮನೆಯ ಹಬ್ಬ. ಕುಟುಂಬದವರೊಂದಿಗೆ ಹಬ್ಬ ಆಚರಣೆ ಮಾಡುವಂತೆ ಜಿಲ್ಲೆಯ ಜನತೆ ಒಟ್ಟಾಗಿ ಕನ್ನಡ ಹಬ್ಬವನ್ನು ಆಚರಣೆ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದರು.

87th Akhila Bharata Kannada Sahitya Sammelana Preparation In Mandya

ಇದು ಕನ್ನಡದ ಹಬ್ಬ, ನಮ್ಮ ಮನೆ ಹಬ್ಬ. ಕನ್ನಡದ ತೇರು ಎಳೆಯಲು ಎಲ್ಲರ ಸಹಕಾರ ಮುಖ್ಯ. ಮಾಧ್ಯಮದಲ್ಲಿ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆಯ ನಾಡು ಅಕ್ಕರೆಯ ಬೀಡಿನ ಗಮಲನ್ನು ಜಗಕ್ಕೆ ಪಸರಿಸುವಂತೆ ಮಾಡಬೇಕು. ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮ ಮಿತ್ರರ ಆತಿಥ್ಯಕ್ಕೆ ಯಾವುದೇ ಕುಂದುಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಪತ್ರಿಕೆ ಮತ್ತು ಟಿವಿ ಚಾನೆಲ್ ಗಳು ಹೆಚ್ಚಿನ ಪ್ರಚಾರ ನೀಡಿ ನುಡಿ ಹಬ್ಬವನ್ನು ಯಶಸ್ವಿಗೊಳಿಸಬೇಕು. ಎನ್ ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಹಾಗೂ ಎನ್ ಜಿಒಗಳಿಂದ ಸ್ವಯಂ ಸೇವಕರನ್ನು ನೇಮಿಸುಕೊಳ್ಳಬೇಕು. ನಮ್ಮನೆ ಕಾರ್ಯಕ್ರಮದಂತೆ ಕಾರ್ಯ ನಿರ್ವಹಿಸಬೇಕು. ಮಾಧ್ಯಮ ಸಂಸ್ಥೆಗಳಿಂದ ಸಮ್ಮೇಳನಕ್ಕೆ ಆಗಮಿಸುವವವರಿಗೆ ಸೂಕ್ತ ವಸತಿ ವ್ಯವಸ್ಥೆ, ವಾಹನ, ಊಟ, ತಿಂಡಿ ವ್ಯವಸ್ಥೆ ಆಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಆರಂಭ: ಜಿಲ್ಲಾಧಿಕಾರಿ ಕುಮಾರ್

ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ. ಎಲ್ಲೆಡೆ ನಿರೀಕ್ಷೆಗೂ ಮೀರಿ ರಥವನ್ನು ಬರಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕುಮಾರ್ ಅವರು ಹೇಳಿದರು.

87th Akhila Bharata Kannada Sahitya Sammelana Preparation In Mandya

ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಸಾಕಷ್ಟು ಒತ್ತು ನೀಡಲಾಗುತ್ತಿದೆ. ಪ್ರಚಾರದ ರೂವಾರಿಗಳು ಮಾಧ್ಯಮದವರೇ. ಜನರನ್ನು ತಲುಪಲು ಮಾಧ್ಯಮಗಳ ಸಹಕಾರ ಬಹಳ ಮುಖ್ಯ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಲಹೆಗಳನ್ನು ಪಡೆದುಕೊಂಡು ಕಾರ್ಯರೂಪಕ್ಕೆ ತರಲಾಗುವುದು. ಮಾಧ್ಯಮ ಸಮನ್ವಯ ಸಮಿತಿ ಬಹಳ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರ ಕಾರ್ಯಕ್ಕೆ ಜಿಲ್ಲಾಡಳಿತ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗುವುದು. ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ. ಎಲ್ಲಾ ಆಯಮದಲ್ಲಿ ಚರ್ಚಿಸಿ, ತಾಂತ್ರಿಕ ವರದಿ ಆಧರಿಸಿ ಜಾಗ ಗುರುತಿಸಲಾಗಿದೆ. ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+