87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವಾಗ?
ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಬರುವ ಡಿಸೆಂಬರ್ನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ತಿಳಿಸಿದರು.
ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ನಡೆದ ಸಮ್ಮೇಳನದ ಪುಸ್ತಕ ಪ್ರಕಟಣೆ ಸಮಿತಿಯ ಮೂರನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಿಸೆಂಬರ್ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ಮಾಡಲಾಗುವುದು ಎಂದು ಹೇಳಿದರು.

ತಾವು ಅಮೆರಿಕಾ ಪ್ರವಾಸ ಕೈಗೊಂಡ ವೇಳೆ ಮಂಡ್ಯದವರೂ ಸೇರಿದಂತೆ ಅನೇಕ ಕನ್ನಡಿಗರು ಅಮೆರಿಕದ ಉದ್ದಕ್ಕೂ ಉನ್ನತ ಹುದ್ದೆಗಳಲ್ಲಿ ಇದ್ದು ಮಂಡ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ಸುಮಾರು 500 ಜನ ವಿದೇಶಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
87 ಕೃತಿ ಹೊರತರಲು ನಿರ್ಧಾರ
ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಕೃತಿಗಳನ್ನು ಹೊರತರಲು ನಿರ್ಧರಿಸಲಾಗಿದ್ದು, ಜಿಲ್ಲೆಯ ಏಳು 'ತಾಲೂಕು ದರ್ಶನ' ಕೃತಿಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಈಗಾಗಲೇ 87 ಕೃತಿಗಳನ್ನು ಹೊರ ತರಲು ನಿರ್ಧರಿಸಲಾಗಿದ್ದು, ಅವುಗಳಲ್ಲಿ 35 ಪುಸ್ತಕಗಳನ್ನು ಜಿಲ್ಲೆಯ ಲೇಖಕರಿಂದ ಬರೆಸಲು ಯೋಚಿಸಲಾಗಿದೆ. ಜಿಲ್ಲೆಯ ಏಳು ತಾಲೂಕುಗಳ ತಾಲೂಕು ದರ್ಶನ ಕೃತಿಗಳು ಸೇರಿದ್ದು ತಾಲೂಕು ಕೇಂದ್ರಗಳ ಸ್ಥಳನಾಮ, ಸಂಸ್ಕೃತಿ, ಸಾಹಿತ್ಯ ತಾಲೂಕಿನ ಸಾಧಕರು, ಪ್ರವಾಸಿ ತಾಣಗಳು, ಪರಂಪರೆ,ಇತಿಹಾಸ ಸೇರಿದಂತೆ ಉಳಿದ ವಿಷಯಗಳ ಬಗ್ಗೆ ಸಮಿತಿ ಮುದ್ದೇಗೌಡರ ನೇತೃತ್ವದಲ್ಲಿ ಏಕರೂಪದ ನಿರ್ಣಯ ತೆಗೆದುಕೊಳ್ಳುತ್ತದೆ ಎಂದರು.
ಜನಸಾಮಾನ್ಯ ಓದುಗರನ್ನು ದೃಷ್ಟಿ ಇಟ್ಟುಕೊಂಡು ಪುಸ್ತಕ ರಚಿಸಬೇಕಾಗಿದ್ದು ಯಾವುದೇ ಟೀಕೆ ಟಿಪ್ಪಣಿಗಳಿಗೆ ಅವಕಾಶವಿಲ್ಲದಂತೆ ಬರುವ ಸವಾಲುಗಳನ್ನು ಎದುರಿಸಿ ಪುಸ್ತಕ ಸಮಿತಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪುಸ್ತಕ ಸಮಿತಿಯ ಅಧ್ಯಕ್ಷ ಡಾ.ಹೆಚ್.ಎಸ್.ಮುದ್ದೇಗೌಡ ಮಾತನಾಡಿ, ಈ ಹಿಂದೆ ಪ್ರಕಟವಾಗಿರುವ 'ಸುವರ್ಣ ಮಂಡ್ಯ' ಜಿಲ್ಲಾ ಸಮ್ಮೇಳನ ಸ್ಮರಣ ಸಂಚಿಕೆಗಳನ್ನು ಮರು ಮುದ್ರಣ ಮಾಡುವುದರ ಜೊತೆಗೆ ಸೃಜನಾತ್ಮಕ ಬರಹಗಳನ್ನು ಬರೆಯಲು ಉದಯೋನ್ಮುಖ ಲೇಖಕರು ಮತ್ತು ಆಯಾ ಕ್ಷೇತ್ರದಲ್ಲಿ ಪರಿಣತಿ ಇರುವವರಿಗೆ ಅವಕಾಶ ನೀಡಲಾಗುವುದು. ಜಿಲ್ಲೆಯ ಕವಿಗಳು ಬರೆಯುವ ಪ್ರಾತಿನಿಧಿಕ ಕವನ ಸಂಕಲನವೊಂದನ್ನು ಹೊರತರಲಾಗುವುದು. ಪುಸ್ತಕಗಳು ಕನಿಷ್ಠ 100-150 ಪುಟಗಳ ಮಿತಿಯಲ್ಲಿರಲಿ ಎಂಬ ಸಲಹೆ ನೀಡಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications