Kannada Sahitya Sammelana: ಮಂಡ್ಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಡಿಸೆಂಬರ್ 18: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಡ್ಯದಲ್ಲಿ ಆಯೋಜನೆಗೊಂಡಿರುವ ನುಡಿಜಾತ್ರೆಗೆ ದಿನಗಣನೆ ಆರಂಭವಾಗಿದೆ. ಇದೇ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಜಿಲ್ಲೆಯ ಶಾಲೆ ಮತ್ತು ಕಾಲೇಜುಗಳು ರಜೆ ಘೋಷಿಸಿದ್ದ ಬುಧವಾರ ಆದೇಶಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನವು ಪ್ರತಿ ವರ್ಷದಂತೆ ಈ ವರ್ಷವು ನಡೆಯುತ್ತಿದೆ. ಅದ್ಧೂರಿ ಆಚರಣೆಗೆ ಸಖಲ ಸಿದ್ಧತೆಯು ನಡೆದಿದೆ. ಸಮ್ಮೇಳನಾಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಈ ನುಡಿಜಾತ್ರೆಗೆ ಎಲ್ಲ ನಾಗರಿಕರು, ಮಹಿಳೆಯರು ಮಕ್ಕಳು ಆಗಮಿಸಬೇಕು, ಭಾಗವಹಿಸಬೇಕು ಎಂಬ ಉದ್ದೇಶವಿದೆ. ಈ ಕಾರಣದಿಂದಲೇ ಮಂಡ್ಯದ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ.

ಕನ್ನಡ ಕಂಪು ಪಸರಿಸುವ ಈ ಕನ್ನಡ ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಜನರ ದಂಡೇ ಆಗಮಿಸಲಿದೆ. ವಿದ್ಯಾರ್ಥಿಗಳಿಗೂ ಕನ್ನಡ ಹಿರಿಮೆ, ವೈಭವ ತಿಳಿಯಲು ಇದೊಂದು ಉತ್ತಮ ವೇದಿಕೆ ಆಗಿರುವ ಕಾರಣ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಡಿಸೆಂಬರ್ 20 ಮತ್ತು 21ರಂದು ಎರಡು ದಿನಗಳ ಕಲಾ ಸಾರ್ವಜನಿಕ ರಜೆ ನೀಡಿ ಆದೇಶಿಸಿದ್ದಾರೆ.
ಡಿಸೆಂಬರ್ 20ರಿಂದ ಮೂರು ದಿನ ಅಂದರೆ ಡಿಸೆಂಬರ್ 22ರವರೆಗೂ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅರ್ಥಪೂರ್ಣ ಕನ್ನಡ ಹಬ್ಬದಾಚರಣೆಗೆ ಸಕ್ಕರೆ ನಾಡು ಮಂಡ್ಯ ಸಾಕ್ಷಿಯಾಗಲಿದೆ. ಹಿರಿಯ, ಕಿರಿಯ ಸಾಹಿತ್ಯಗಳು, ರಾಜಕೀಯ ಗಣ್ಯರು, ಸಿನಿಮಾ ತಾರೆಯರು, ಪುಸ್ತಕ ಪ್ರೇಮಿಗಳು, ಕನ್ನಡಪರ ಚಿಂತಕರು, ವಿಮರ್ಶಕರು, ಸಾರ್ವಜನಿಕರು, ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಅದ್ಧೂರಿ ಮತ್ತು ಸಂಭ್ರಮದ ಕನ್ನಡದ ಪ್ರಮುಖ ಆಚರಣೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ಕಾರಣದಿಂದಲೇ ಪ್ರಾಥಮಿಕ, ಪ್ರೌಢ ಮತ್ತು ದ್ವಿತೀಯ ಪಿಯುಸಿ ವರೆಗೆ (ಪದವಿ ಪೂರ್ವ ಕಾಲೇಜು) ರಜೆ ಘೋಷಿಸಲಾಗಿದೆ.
ಕಳೆದ ಭಾರಿ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನವು ವಿಜೃಂಭಣೆಯಿಂದ ನಡೆದಿತ್ತು. ಈ ಬಾರಿ ಮಂಡ್ಯದಲ್ಲಿ ಆಯೋಜನೆ ಮಾಡಲಾಗಿದೆ. ಈ ಸಲದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಕನ್ನಡ ಸಮ್ಮೇಳನ ಸಲುವಾಗಿ ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳ ಮೇಲೂ ಕನ್ನಡ ಭಾವುಟ ಹಾರಿಸುವಂತೆ ಕರೆ ನೀಡಲಾಗಿದೆ. ಮಂಡ್ಯ ಕಬ್ಬು, ಭತ್ತ ಬೆಳೆ ಜೊತೆಗೆ ನಾಟಿ ಕೋಟಿ ಸಾರು, ಮುದ್ದೆಗೆ, ಬಾಡೂಟಕ್ಕೂ ಸಖತ್ ಫೇಮಸ್ಸು. ಹೀಗಾಗಿ ಸಮ್ಮೇಳನದಲ್ಲಿ ಬಾಡೂಟ ನೀಡುವಂತೆ ಬೇಡಿಕೆ ಕೇಳಿ ಬಂದಿತ್ತು. ಆದರೆ ಇದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರ ಸೊಪ್ಪು ಹಾಕಿಲ್ಲ ಎನ್ನಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications