ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೆವೆನ್ಯೂ ಇನ್ಸ್ ಪೆಕ್ಟರ್ ಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಜೀವ ಬೆದರಿಕೆ

|
Google Oneindia Kannada News

ಮಂಡ್ಯ, ಜುಲೈ 04 : ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣ ಕಸಬಾದ ರೆವೆನ್ಯೂ ಇನ್ಸ್ ಪೆಕ್ಟರ್ ಕೋಟಿ ದೊಡ್ಡಯ್ಯ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ.

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ದೂರವಾಣಿ ಕರೆ ಮಾಡಿ ಜಾತಿ ನಿಂದನೆ, ಅವಾಚ್ಯ ಶಬ್ಧ, ದಲಿತ ದೌರ್ಜನ್ಯ ಕಾಯ್ದೆ ಅಡಿ ಕೇಸ್ ಹಾಕುತ್ತೇನೆ ಅಷ್ಟೇ ಅಲ್ಲದೇ ಚಪ್ಪಲಿಯಲ್ಲಿ ಹೊಡೆದು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೊಡ್ಡಯ್ಯ ಆರೋಪಿಸಿದ್ದಾರೆ.

A complaint registered against Srirangapatna MLA Ramesh Bandi Siddegowda

ನಿರಂತರ ದೌರ್ಜನ್ಯ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಮತ್ತು ಬೆಂಬಲಿಗರ ವಿರುದ್ಧ ಮಂಡ್ಯ ಎಸ್ಪಿ ಅವರಿಗೆ ಕೋಟಿ ದೊಡ್ಡಯ್ಯ ದೂರು ನೀಡಿದ್ದಾರೆ.

ರಾಜ್ಯಪಾಲರು, ಸಿಎಂ, ಲೋಕಾಯುಕ್ತ, ವಿಧಾನ ಸಭಾ ಸ್ಪೀಕರ್‍ ಗೆ ದೂರು ನೀಡಿರುವ ಕೋಟಿ ದೊಡ್ಡಯ್ಯ ಅವರು ಆರೋಪಿತರ ವಿರುದ್ಧ ಕ್ರಮಕೈಗೊಳ್ಳಬೇಕು, ಜೀವ ಭಯ ಇರುವ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

English summary
Srirangapatna MLA Ramesh Bandi Siddegowda allegedly threatens to revenue inspector Kote Doddaiah. A complaint registered against MLA Ramesh Bandi Siddegowda under caste abuse.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X