Sadananda Gowda: ನಿವೃತ್ತಿ ಘೋಷಣೆ ಬೆನ್ನಲ್ಲೇ ಸದಾನಂದಗೌಡರಿಗೆ ಬಂತು ಕುರಿಮರಿ ಉಡುಗೊರೆ
ಮಂಡ್ಯ, ನವೆಂಬರ್ 09: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಹೋಬಳಿಗೆ ಗುರುವಾರ ಬರಪರಿಸ್ಥಿತಿ ಅಧ್ಯಯನ ನಡೆಸಲು ಆಗಮಿಸಿದ್ದ ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡರಿಗೆ ಅರಕನಹಳ್ಳಿ ಗ್ರಾಮದ ಯುವ ರೈತನೋರ್ವ ಕುರಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಅರಕನಹಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿಯಿಂದ ಜಾನುವಾರು ಕಳೆದುಕೊಂಡಿದ್ದ ರೈತರ ಮನೆಗಳಿಗೆ ಡಿ.ವಿ. ಸದಾನಂದಗೌಡ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಗ್ರಾಮದ ಯುವ ರೈತ ಎಚ್.ಆರ್. ರಂಜಿತ್ 5 ತಿಂಗಳ ಕುರಿಮರಿಯನ್ನು ಸದಾನಂದಗೌಡರಿಗೆ ಉಡುಗೊರೆ ನೀಡಿದರು. ಇದರಿಂದ ಸಂತೋಷಗೊಂಡ ಸದಾನಂದಗೌಡರು, ನೀವೇ ಚೆನ್ನಾಗಿ ಸಾಕಿ ಬೆಳೆಸಿ, ಇದೇ ಕುರಿ ಮಾಂಸದೂಟಕ್ಕಾಗಿ ತಮ್ಮ ಗ್ರಾಮಕ್ಕೆ ಬರುವುದಾಗಿ ಭರವಸೆ ನೀಡಿದರು.

ನಂತರ ಸ್ಥಳದಲ್ಲಿದ್ದ ಬಿಜೆಪಿ ಮುಖಂಡರುಗಳು ರಂಜಿತ್ ತಮ್ಮ ಮೇಲೆ ವಿಶ್ವಾಸವಿಟ್ಟು ಕುರಿಯನ್ನು ನೀಡಿದ್ದಾರೆ. ಅದು ನಿಮ್ಮ ಮನೆಗೇ ತೆಗೆದುಕೊಂಡು ಹೋಗಿ ಸಾಕಿ ಎಂದು ಸಲಹೆ ನೀಡಿದರು. ಇದಕ್ಕೆ ಸದಾನಂದಗೌಡರು ಸಮ್ಮತಿ ಸೂಚಿಸಿದರು. ನಂತರ ಬೆಂಗಳೂರಿನಲ್ಲಿರುವ ತಮ್ಮ ಆಪ್ತ ಸಹಾಯಕರ ವಶಕ್ಕೆ ಒಪ್ಪಿಸುವಂತೆ ಬಿಜೆಪಿ ಮುಖಂಡರು ಸಲಹೆ ನೀಡಿದ ನಂತರ ನಾಳೆ ಬೆಂಗಳೂರಿಗೆ ಕುರಿಮರಿಯನ್ನು ಕೊಂಡೊಯ್ಯಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್, ಮಾಜಿ ಶಾಸಕ ಪ್ರೀತಂಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮನ್ಮುಲ್ನಿರ್ದೇಶಕರಾದ ಎಸ್.ಪಿ. ಸ್ವಾಮಿ, ರೂಪ, ಜಿಲ್ಲಾ ಸಮಿತಿ ಮುಖಂಡ ಎಂ. ಸತೀಶ್, ತಾಲೂಕು ಬಿಜೆಪಿ ಅಧ್ಯಕ್ಷ ಶಿವದಾಸ್ ಸತೀಶ್, ನಗರ ಘಟಕದ ಅಧ್ಯಕ್ಷ ಮಧುಕುಮಾರ್, ಮುಖಂಡರಾದ ಎಂ.ಸಿ. ಸಿದ್ದರು, ಬಿ.ಸಿ. ಮಹೇಂದ್ರ ಇತರರು ಇದ್ದರು.
ರಾಜಕೀಯ ನಿವೃತ್ತಿ ಬಗ್ಗೆ ಸದಾನಂದ ಗೌಡ ಹೇಳಿದ್ದೇನು..?
ಇನ್ನು ಮಂಡ್ಯದಲ್ಲಿ ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸದಾನಂದ ಗೌಡ, ಮನುಷ್ಯನಿಗೆ ಕೆಲವು ಇತಿಮಿತಿ ಇರಬೇಕು. ಮೂವತ್ತು ವರ್ಷದಿಂದ ಎಲ್ಲ ಸ್ಥಾನಮಾನ ನೋಡಿದ್ದೇನೆ, ಪಕ್ಷದಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದೆ, ಕೇಂದ್ರ ಸರ್ಕಾರದಲ್ಲಿ ಏಳು ವರ್ಷ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡಿದ್ದೇನೆ. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದೆ. ರಾಜ್ಯ ಅಧ್ಯಕ್ಷನಾಗಿ ಪಕ್ಷವನ್ನು ಮುನ್ನಡೆಸಿದ್ದೇನೆ. ರಾಜಕೀಯದಲ್ಲಿ ಇಷ್ಟು ಮಾತ್ರ ಸಾಕಲ್ಲವೇ ಎಂದರು.
ಅಲ್ಲದೇ ಹೈಕಮಾಂಡ್ ಆದೇಶದ ಮೇರೆಗೆ ರಾಜೀನಾಮೆ ನೀಡಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ಯಾರೂ ನನಗೆ ಸೂಚನೆ ಕೊಟ್ಟಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವೇ ಹೊರತು ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ ಎಂದು ಮಾಧ್ಯಮಗಳ ಮುಖಾಂತರ ತಮ್ಮ ಬೆಂಬಲಿಗರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications