ಮಂಡ್ಯ ಕನ್ನಲಿಯಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮಂಡ್ಯ, ಜನವರಿ 18: ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರ ಆತಂಕ ದೂರವಾದಂತಾಗಿದೆ. ಕಳೆದ ಹಲವು ದಿನಗಳಿಂದಲೂ ಚಿರತೆ ಭಯ ಗ್ರಾಮಸ್ಥರನ್ನು ಕಾಡುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಗ್ರಾಮಸ್ಥರ ದೂರಿನ ಮೇರೆಗೆ ಅಧಿಕಾರಿಗಳು ಗ್ರಾಮದ ಸುತ್ತಮುತ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೂ ಚಿರತೆ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಗ್ರಾಮದ ಹೊರ ವಲಯದಲ್ಲಿರುವ ಶ್ರೀನಿವಾಸ್ ಅವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಅದನ್ನು ರಕ್ಷಣೆ ಮಾಡಿ ಅರಣ್ಯ ಇಲಾಖಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದರು.

ಎರಡು ಚಿರತೆ ಮರಿಗಳನ್ನು ತಾಯಿ ಚಿರತೆ ಎತ್ತಿಕೊಂಡು ಹೋಗಿತ್ತು. ಈ ಹಿನ್ನೆಲೆಯಲ್ಲಿ ಕಬ್ಬಿನ ಗದ್ದೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಇತರೆ ಮರಿಗಳಾಗಲೀ, ತಾಯಿ ಚಿರತೆಯಾಗಲೀ ಪತ್ತೆಯಾಗಿರಲಿಲ್ಲ. ಸ್ಥಳಕ್ಕೆ ಧಾವಿಸಿದ ಮೇಲುಕೋಟೆ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಂಡ ಚಿರತೆ ಮರಿಯನ್ನಿಟ್ಟುಕೊಂಡು ತಾಯಿ ಚಿರತೆಯನ್ನು ಸೆರೆ ಹಿಡಿಯಲು ಬೋನು ಇಟ್ಟಿದ್ದರು. ಇಂದು ಮುಂಜಾನೆ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಹಲವು ದಿನಗಳಿಂದಲೂ ಗರ್ಭಿಣಿಯಾಗಿದ್ದ ಚಿರತೆ ಈ ಭಾಗದಲ್ಲಿ ಓಡಾಡುತ್ತಿದ್ದುದನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಗರ್ಭಿಣಿಯಾಗಿರುವ ಕಾರಣ ಅದು ಮರಿಗಳಿಗೆ ಜನ್ಮ ನೀಡಲು ಸೂಕ್ತ ಸ್ಥಳಾವಕಾಶದ ಹುಡುಕಾಟದಲ್ಲಿತ್ತು. ಆ ಕಾರಣಕ್ಕೆ ಕಬ್ಬಿನ ಗದ್ದೆ ಸೇರಿದಂತೆ ಇತರೆ ಕಡೆಗಳಲ್ಲಿ ಸುತ್ತಾಡುತ್ತಿತ್ತು ಎಂದು ವಲಯ ಅರಣ್ಯಾಧಿಕಾರಿ ಚೈತ್ರಾ ತಿಳಿಸಿದ್ದಾರೆ.
ತಾಯಿ ಚಿರತೆಯೊಂದಿಗೆ ಒಟ್ಟು ಮೂರು ಮರಿಗಳು ಇದ್ದವು ಎಂಬ ಮಾಹಿತಿಯನ್ನು ಗ್ರಾಮಸ್ಥರೇ ನೀಡಿದ್ದರು. ಸದ್ಯ ಒಂದು ಚಿತರೆ ಮರಿ ನಮಗೆ ಸಿಕ್ಕಿದೆ. ಇದೀಗ ತಾಯಿ ಚಿರತೆಯನ್ನೂ ನಾವು ಸೆರೆ ಹಿಡಿದಿದ್ದೇವೆ. ಇನ್ನೂ ಎರಡು ಚಿತರೆ ಮರಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದೇವೆ. ಕೇವಲ 15 ದಿನಗಳ ಒಳಗಿನ ಚಿರತೆಗಳಾಗಿರುವ ಕಾರಣ ಕಬ್ಬಿನ ಗದ್ದೆಯಲ್ಲೇ ಇರಬಹುದೆಂಬ ಶಂಕೆ ಇದೆ. ಆ ಕಾರಣ ನಾವು ಇಲ್ಲೇ ಹುಡುಕಾಟ ನಡೆಸಿದ್ದೇವೆ. ಒಂದೆರಡು ದಿನಗಳಲ್ಲಿ ಮರಿಗಳು ಸಿಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸೆರೆ ಹಿಡಿದಿರುವ ಚಿರತೆ ಮತ್ತು ಮರಿಯನ್ನು ಮೇಲಧಿಕಾರಿಗಳ ಸೂಚನೆ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಚೈತ್ರಾ ತಿಳಿಸಿದ್ದಾರೆ. ಒಟ್ಟಾರೆ ತಾಯಿ ಚಿರತೆ ಸೆರೆಯಿಂದಾಗಿ ಕನ್ನಲಿ ಗ್ರಾಮಸ್ಥರ ಆತಂಕ ದೂರವಾದಂತಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications