ಮಂಡ್ಯ ಕನ್ನಲಿಯಲ್ಲಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮಂಡ್ಯ, ಜನವರಿ 18: ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರ ಆತಂಕ ದೂರವಾದಂತಾಗಿದೆ. ಕಳೆದ ಹಲವು ದಿನಗಳಿಂದಲೂ ಚಿರತೆ ಭಯ ಗ್ರಾಮಸ್ಥರನ್ನು ಕಾಡುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಗ್ರಾಮಸ್ಥರ ದೂರಿನ ಮೇರೆಗೆ ಅಧಿಕಾರಿಗಳು ಗ್ರಾಮದ ಸುತ್ತಮುತ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೂ ಚಿರತೆ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಗ್ರಾಮದ ಹೊರ ವಲಯದಲ್ಲಿರುವ ಶ್ರೀನಿವಾಸ್ ಅವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಅದನ್ನು ರಕ್ಷಣೆ ಮಾಡಿ ಅರಣ್ಯ ಇಲಾಖಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದರು.

ಎರಡು ಚಿರತೆ ಮರಿಗಳನ್ನು ತಾಯಿ ಚಿರತೆ ಎತ್ತಿಕೊಂಡು ಹೋಗಿತ್ತು. ಈ ಹಿನ್ನೆಲೆಯಲ್ಲಿ ಕಬ್ಬಿನ ಗದ್ದೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಇತರೆ ಮರಿಗಳಾಗಲೀ, ತಾಯಿ ಚಿರತೆಯಾಗಲೀ ಪತ್ತೆಯಾಗಿರಲಿಲ್ಲ. ಸ್ಥಳಕ್ಕೆ ಧಾವಿಸಿದ ಮೇಲುಕೋಟೆ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತಂಡ ಚಿರತೆ ಮರಿಯನ್ನಿಟ್ಟುಕೊಂಡು ತಾಯಿ ಚಿರತೆಯನ್ನು ಸೆರೆ ಹಿಡಿಯಲು ಬೋನು ಇಟ್ಟಿದ್ದರು. ಇಂದು ಮುಂಜಾನೆ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ ಹಲವು ದಿನಗಳಿಂದಲೂ ಗರ್ಭಿಣಿಯಾಗಿದ್ದ ಚಿರತೆ ಈ ಭಾಗದಲ್ಲಿ ಓಡಾಡುತ್ತಿದ್ದುದನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಗರ್ಭಿಣಿಯಾಗಿರುವ ಕಾರಣ ಅದು ಮರಿಗಳಿಗೆ ಜನ್ಮ ನೀಡಲು ಸೂಕ್ತ ಸ್ಥಳಾವಕಾಶದ ಹುಡುಕಾಟದಲ್ಲಿತ್ತು. ಆ ಕಾರಣಕ್ಕೆ ಕಬ್ಬಿನ ಗದ್ದೆ ಸೇರಿದಂತೆ ಇತರೆ ಕಡೆಗಳಲ್ಲಿ ಸುತ್ತಾಡುತ್ತಿತ್ತು ಎಂದು ವಲಯ ಅರಣ್ಯಾಧಿಕಾರಿ ಚೈತ್ರಾ ತಿಳಿಸಿದ್ದಾರೆ.
ತಾಯಿ ಚಿರತೆಯೊಂದಿಗೆ ಒಟ್ಟು ಮೂರು ಮರಿಗಳು ಇದ್ದವು ಎಂಬ ಮಾಹಿತಿಯನ್ನು ಗ್ರಾಮಸ್ಥರೇ ನೀಡಿದ್ದರು. ಸದ್ಯ ಒಂದು ಚಿತರೆ ಮರಿ ನಮಗೆ ಸಿಕ್ಕಿದೆ. ಇದೀಗ ತಾಯಿ ಚಿರತೆಯನ್ನೂ ನಾವು ಸೆರೆ ಹಿಡಿದಿದ್ದೇವೆ. ಇನ್ನೂ ಎರಡು ಚಿತರೆ ಮರಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದೇವೆ. ಕೇವಲ 15 ದಿನಗಳ ಒಳಗಿನ ಚಿರತೆಗಳಾಗಿರುವ ಕಾರಣ ಕಬ್ಬಿನ ಗದ್ದೆಯಲ್ಲೇ ಇರಬಹುದೆಂಬ ಶಂಕೆ ಇದೆ. ಆ ಕಾರಣ ನಾವು ಇಲ್ಲೇ ಹುಡುಕಾಟ ನಡೆಸಿದ್ದೇವೆ. ಒಂದೆರಡು ದಿನಗಳಲ್ಲಿ ಮರಿಗಳು ಸಿಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸೆರೆ ಹಿಡಿದಿರುವ ಚಿರತೆ ಮತ್ತು ಮರಿಯನ್ನು ಮೇಲಧಿಕಾರಿಗಳ ಸೂಚನೆ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಚೈತ್ರಾ ತಿಳಿಸಿದ್ದಾರೆ. ಒಟ್ಟಾರೆ ತಾಯಿ ಚಿರತೆ ಸೆರೆಯಿಂದಾಗಿ ಕನ್ನಲಿ ಗ್ರಾಮಸ್ಥರ ಆತಂಕ ದೂರವಾದಂತಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications