ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮಂಡ್ಯ, ಅಕ್ಟೋಬರ್.10: ತೋಟಗಾರಿಕೆ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಕಚೇರಿ ಟೆರೇಸ್ನಲ್ಲಿ ವಿಷಪೂರಿತ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಂಡವಪುರದಲ್ಲಿ ನಡೆದಿದೆ.
ಪಟ್ಟಣದ ಸುಬ್ರಹ್ಮಣ್ಯ ಬೀದಿಯ ನಿವಾಸಿ ರವೀಂದ್ರನಾಥ್ ರಾವ್ ಅವರ ಪುತ್ರಿ ಬಿ.ಎಂ.ಚೈತ್ರ(35) ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಬಿ.ಎಂ.ಚೈತ್ರ ಕಳೆದ 7 ವರ್ಷಗಳಿಂದ ಪಟ್ಟಣದ ತೋಟಗಾರಿಕೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಚೈತ್ರ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿ 8 ವರ್ಷದಿಂದ ಚೈತ್ರ ಪತಿಯಿಂದ ದೂರವಿದ್ದರು. ಪ್ರಸ್ತುತ ಚೈತ್ರ ಅವರ ತಾಯಿ, ತಮ್ಮನೊಂದಿಗೆ ವಾಸಮಾಡುತ್ತಿದ್ದಳು ಎನ್ನಲಾಗಿದೆ.

ತೋಟಗಾರಿಕೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರ ಎಲ್ಲರ ವಿಶ್ವಾಸಗಳಿಸಿದ್ದರು. ಹಾಗಾಗಿ ಇಲಾಖೆ ಮುಖ್ಯ ಗೇಟ್ ಹಾಗೂ ಕಚೇರಿ ಬೀಗ ಇವರ ಬಳಿಯೇ ಇತ್ತು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಮನೆಯಿಂದ ಕಚೇರಿಗೆ ಹೋಗಿಬರುವುದಾಗಿ ಹೇಳಿ ಹೋದ ಚೈತ್ರ ರಾತ್ರಿಯಾದರೂ ಮನೆಗೆ ವಾಪಸ್ಸಾಗಲಿಲ್ಲ.
ಸಂಬಂಧಿಕರ ಮನೆಯಲ್ಲಿ ಹುಡುಕಾಟ ನಡೆಸಿದರೂ ಸಹ ಪತ್ತೆಯಾಗಲಿಲ್ಲ. ಮಂಗಳವಾರ ಬೆಳಗ್ಗೆ ಕಚೇರಿಗೆ ಬಂದ ಸಿಬ್ಬಂದಿ ಕಚೇರಿಯ ಟೆರೇಸ್ ಮೇಲೆ ಹೋದಂತಹ ಸಂದರ್ಭದಲ್ಲಿ ಚೈತ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಚೈತ್ರ ಸಾವಿಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಮೃತ ಚೈತ್ರ ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದ್ದು, ಅದರಲ್ಲಿ ನನ್ನ ತಮ್ಮ ಜಯಂತ್ಗೆ ನಾನು ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಬ್ಯಾಂಕ್ನಲ್ಲಿ ಲೋನ್ ಕೊಡಿಸಲು ಸಾಧ್ಯವಾಗಲಿಲ್ಲ. ನನ್ನ ಮಗನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆಯೆ ಪಟ್ಟಣದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ಒಪ್ಪಿಸಿದ್ದಾರೆ, ಈ ಸಂಬಂಧ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications