ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಚಾಲನೆ
ಮಂಡ್ಯದ ಕೆಎಂ ದೊಡ್ಡಿ ಗ್ರಾಮದ ಅವಿವಾಹಿತ ಯುವಕರ ಗುಂಪೊಂದು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದೆ. ಇದಕ್ಕೆ ಡಾಲಿ ಚಾಲನೆ ನೀಡಿದ್ದಾರೆ.
ಮಂಡ್ಯ, ಫೆಬ್ರವರಿ 23: 30 ವರ್ಷ ತುಂಬಿದರೂ ಮದುವೆಯಾಗದೆ ಉಳಿದ ಹುಡುಗರ ಗುಂಪೊಂದು ಮಲೆ ಮಹದೇಶ್ವರನ ಮೊರೆ ಹೋಗಿ ದೇವರ ಸನ್ನಿಧಿಗೆ ಪಾದಯಾತ್ರೆ ಹೊರಟಿದ್ದು, ಈ ಯಾತ್ರೆಗೆ ಕನ್ನಡದ ಖ್ಯಾತ ನಟ ಡಾಲಿ ಧನಂಜಯ್ ಚಾಲನೆ ನೀಡಿದ್ದಾರೆ.
ಮಂಡ್ಯದ ಕೆಎಂ ದೊಡ್ಡಿ ಗ್ರಾಮದ ಅವಿವಾಹಿತ ಯುವಕರ ಗುಂಪೊಂದು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದೆ. ಇದಕ್ಕೆ ಡಾಲಿ ಚಾಲನೆ ನೀಡಿದ್ದಾರೆ. ಈಗಿನ ಕಾಲದಲ್ಲಿ ಯುವಕರಿಗೆ ಮದುವೆಯಾಗಲು ಸರಿಯಾದ ವಧು ಸಿಗುತ್ತಿಲ್ಲ ಎಂದು ಅದರಲ್ಲೂ ರೈತರ ಮಕ್ಕಳಿಗಂತೂ ಮನೆಗೆ ಕರೆಯುವುದೇ ಇಲ್ಲ ಎಂದು ನೊಂದ ಯುವಕರ ಗುಂಪು ವಧು ಸಿಗಲಿ ಎಂದು ಹರಕೆ ಕಟ್ಟಿಕೊಂಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಕೆಎಂ ದೊಡ್ಡಿಯ ಶ್ರೀ ವೆಂಕಟೇಶ್ವರನ ದೇವಾಲಯದಿಂದ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಗುಂಪು ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ ಎಂಬ ಘೋಷವಾಕ್ಯದೊಂದಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಚಾಲನೆ ನೀಡಿ ಸ್ವಲ್ಪ ದೂರ ಹೆಜ್ಜೆ ಹಾಕಿದ್ದಾರೆ. ನಟ ಡಾಲಿ ಧನಂಜಯ್ ಅವರಿಗೂ ಮದುವೆಯಾಗಿಲ್ಲ ಎಂಬುದು ಇಲ್ಲಿ ವಿಶೇಷ. ಆದರೆ ಅಭಿಮಾನಿಗಳ ಒತ್ತಾಯದ ಮೇಲೆ ಅವರು ಇಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ಕೆಎಂ ದೊಡ್ಡಿ ಯುವಕರಿಗೆ ಬೇಗ ಹೆಣ್ಣು ದೊರಕಲಿ ಎಂದು ಹಾರೈಸಿದ್ದಾರೆ.
30 ವರ್ಷ ದಾಟಿದ ಯುವಕರಿಗೆ ಮದುವೆ ಆಗಿಲ್ಲ ಎಂದು ಪಾದಯಾತ್ರೆ ಮಾಡುತ್ತಿರುವ ಸಂಗತಿ ಇದೇ ಮೊದಲು ಕೇಳುತ್ತಿದ್ದೇನೆ. ನಮ್ಮ ಫ್ರೆಂಡ್ಸ್ ವಾಟ್ಸಪ್ ಗ್ರೂಪ್ನಲ್ಲಿ ಪಾದಯಾತ್ರೆ ವಿಚಾರ ನೋಡಿದಾಗ ತಮಾಷೆ ಅನ್ನಿಸಿತು. ಇಲ್ಲಿ ಬಂದಾಗಲೂ ತಮಾಷೆ ಅನ್ನಿಸಿತು ಎಂದು ಅವಿವಾಹಿತರ ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಂಡ್ಯದ ಕೆ.ಎಂ.ದೊಡ್ಡಿಯಲ್ಲಿ ನಟ ಡಾಲಿ ಧನಂಜಯ್ ತಿಳಿಸಿದ್ದಾರೆ. ಯುವಕರನ್ನು ಪಾದಯಾತ್ರೆ ಯಾಕೆ ಹೊಟಿದ್ದೀರಿ ಎಂದು ಕೇಳಿದಾಗ ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ ಎಂದರು. ಇದು ನಿಜಕ್ಕೂ ಗಂಭೀರವಾದ ವಿಚಾರ. ನಾನು ಹಳ್ಳಿಯಿಂದಲೇ ಬಂದಿದ್ದೀನಿ. ಹಳ್ಳಿಗಳಿಗೆ ಹೋದಾಗಲೆಲ್ಲ ಯುವಕರನ್ನು ಮಾತನಾಡಿಸಿದಾಗ ಹೆಣ್ಣು ಸಿಕ್ತಿಲ್ಲ ಅಂತ ಹೇಳುತ್ತಾರೆ ಎಂದರು.

ಡಾಲಿ ಅಲ್ಲದೆ ಯುವಕರಿಗೆ ಟಗರು ಪಲ್ಯ ಚಿತ್ರದ ನಟ ನಾಗಭೂಷಣ ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ಮಧ್ಯಾಹ್ನದವರೆಗೂ ಭಾಗವಹಿಸಿ ಯುವಕರಿಗೆ ಹಾರೈಸಿದ್ದಾರೆ. ಗುರುವಾರದಿಂದ ಮೂರು ದಿನಗಳವರೆಗೆ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಪಾದಯಾತ್ರೆ ಹಮ್ಮಿಕೊಂಡು ಭಾಗವಹಿಸಿದವರು ಬಹುತೇಕ ಯುವ ರೈತರಾಗಿದ್ದು, ರೈತರಾದ ತಮಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗಿನಲ್ಲೇ ಭಾಗವಹಿಸಿದ್ದಾರೆ ಎಂದು ಬೇಸರದಲ್ಲೆ ಮಾದಪ್ಪನ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ರೈತರ ಮಕ್ಕಳಿಗೂ ಹೆಣ್ಣು ಕೊಡುವಂತಾಗಲಿ ಎಂದು ಪ್ರಾರ್ಥನೆ ಮಾಡಿರುವ ಯುವಕರು ಪಾದಯಾತ್ರೆಯಲ್ಲಿ ಭಾಗಿಯಾಗುವವರಿಗೆ ಮೂರು ಷರತ್ತುಗಳನ್ನು ಹಾಕಿದ್ದಾರೆ. 1. ಕಡ್ಡಾಯವಾಗಿ 30 ವರ್ಷ ದಾಟಿರಬೇಕು. 2. ಮದುವೆಯಾದವರಿಗೆ ಇಲ್ಲಿ ಅವಕಾಶವಿಲ್ಲ. 3. ನಿಶ್ಚಿತಾರ್ಥ ಆದವರೂ ಇಲ್ಲಿ ಭಾಗವಹಿಸುವಂತಿಲ್ಲ. ಅವಿವಾಹಿತರನ್ನು ಸಂಘಟಿಸಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮೂರು ದಿನದ ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಊಟ, ಪಾನೀಯ, ರಾತ್ರಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಎಂ ದೊಡ್ಡಿಯಿಂದ ಪಾದಯಾತ್ರೆ ಹೊರಟು ಮಳವಳ್ಳಿ, ಕೊಳ್ಳೇಗಾಲ, ಹನೂರು ಮಾರ್ಗವಾಗಿ ಯುವಕರು ಮಹದೇಶ್ವರ ಬೆಟ್ಟವನ್ನು ತಲುಪಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications