ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ಅಂಗನವಾಡಿ ಚುಚ್ಚುಮದ್ದಿನಿಂದ 2 ಮಕ್ಕಳು ಸಾವು

|
Google Oneindia Kannada News

ಮಂಡ್ಯ, ಫೆಬ್ರವರಿ 10: ಅಂಗನವಾಡಿಯಲ್ಲಿ ನೀಡಿದ ಚುಚ್ಚುಮದ್ದಿನಿಂದ ಎರಡು ಮಕ್ಕಳು ಸಾವನ್ನಪ್ಪಿದ್ದು, 7 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಚಿನ್ನಗಿರಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಚನ್ನಗಿರಿ ಗ್ರಾಮದ ಪ್ರೀತಮ್(2) ಮತ್ತು ಭುವನ್(2) ಮೃತಪಟ್ಟಿರುವ ಮಕ್ಕಳು. ಫೆ.9 ರಂದು ಗ್ರಾಮದ ಅಂಗನವಾಡಿಯಲ್ಲಿ 9 ಮಕ್ಕಳಿಗೆ ಚುಚ್ಚುಮದ್ದು ಲಸಿಕೆ ನೀಡಲಾಗಿತ್ತು ಎನ್ನಲಾಗಿದೆ. ಈ ಚುಚ್ಚುಮದ್ದಿನಿಂದ ಎರಡು ಮಕ್ಕಳ ಸಾವು ಮತ್ತು ಹಲವು ಮಕ್ಕಳ ಅಸ್ವಸ್ಥ ಸುದ್ದಿ ತಿಳಿದು ಸುತ್ತಮುತ್ತಲ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ.

ಅಂಗನವಾಡಿಯಲ್ಲಿ ನೀಡಿದ ಚುಚ್ಚುಮದ್ದಿನಿಂದ ಎರಡು ಮಕ್ಕಳು ಸಾವನ್ನಪ್ಪಿದ್ದು, 7 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಚಿನ್ನಗಿರಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚನ್ನಗಿರಿ ಗ್ರಾಮದ ಪ್ರೀತಮ್(2) ಮತ್ತು ಭುವನ್(2) ಮೃತಪಟ್ಟಿರುವ ಮಕ್ಕಳು. ಫೆ.9 ರಂದು ಗ್ರಾಮದ ಅಂಗನವಾಡಿಯಲ್ಲಿ 9 ಮಕ್ಕಳಿಗೆ ಚುಚ್ಚುಮದ್ದು ಲಸಿಕೆ ನೀಡಲಾಗಿತ್ತು ಎನ್ನಲಾಗಿದೆ. ಈ ಚುಚ್ಚುಮದ್ದಿನಿಂದ ಎರಡು ಮಕ್ಕಳ ಸಾವು ಮತ್ತು ಹಲವು ಮಕ್ಕಳ ಅಸ್ವಸ್ಥ ಸುದ್ದಿ ತಿಳಿದು ಸುತ್ತಮುತ್ತಲ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ.

7 ಅಸ್ವಸ್ಥ ಮಕ್ಕಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 2500 ಮಕ್ಕಳಿಗೆ ಇದೇ ಚುಚ್ಚುಮದ್ದು ಹಾಕಿಸಲಾಗಿತ್ತು ಆದರೆ ಯಾರಿಗೂ ಏನೂ ತೊಂದರೆಯಾಗಿಲ್ಲ ಕೆಲವೇ ಕೆಲವು ಮಕ್ಕಳು ಮಾತ್ರ ಅಸ್ವಸ್ಥರಾಗಿದ್ದಾರೆ. ಈ ಬಗ್ಗೆ ಕಾರಣ ಹುಡುಕಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಂಡ್ಯ ಆರೋಗ್ಯಾಧಿಕಾರಿ ಮೋಹನ್ ಹೇಳಿಕೆ ನೀಡಿದ್ದಾರೆ.

English summary
After vaccination to children in Anganawadi of Chinnagiridoddi in Mandya taluk two children were died and seven unwell.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X