ದೇಶದ ಯುವ ಜನತೆಗಾಗಿ ಅಗ್ನಿಪಥ್ ಯೋಜನೆ ಜಾರಿ, ವಿರೋಧ ಬೇಡ :ಎಸ್.ಎಂ. ಕೃಷ್ಣ
ಮಂಡ್ಯ, ಜೂನ್ 22 : ದೇಶದ ಯುವ ಸಮುದಾಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರಸರ್ಕಾರ ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿ ಹೇಳಿದ್ದಾರೆ.
ತಾಲೂಕಿನ ಸೋಮನಹಳ್ಳಿಯಲ್ಲಿ ದಿವಂಗತ ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್ಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದುವರೆದ ದೇಶಗಳಾದ ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ. 20 ವರ್ಷ ತುಂಬಿದ ಯುವಕರು ಎರಡು ವರ್ಷ ಸೈನಿಕ ಶಿಕ್ಷಣ ಕಲಿಯುವುದು ಕಡ್ಡಾಯವಾಗಿದೆ. ಇಂತಹ ಆದರ್ಶಪ್ರಾಯ ಯೋಜನೆಯನ್ನು ಜಾರಿಗೊಳಿಸಿ ಔನ್ನತ್ಯ ಸಾಧಿಸಿವೆ. ಆದರೆ, ನಮ್ಮ ದೇಶದಲ್ಲಿ ಈ ಯೋಜನೆಗೆ ವಿನೂತನ ಪ್ರಸ್ತಾವನೆ ಕಂಡುಬರುತ್ತಿದೆ ಎಂದು ಬೇಸರದಿಂದ ನುಡಿದರು.
ಅಗ್ನಿವೀರರು ನಾಲ್ಕು ವರ್ಷ ಸೈನ್ಯದಲ್ಲಿ ಕೆಲಸ ನಿರ್ವಹಿಸಿದ ಬಳಿಕ ಬೇರೆ ಕಡೆಗಳಲ್ಲಿ ಉದ್ಯೋಗಗಳನ್ನು ಅವಲಂಬಿಸುವುದಕ್ಕೆ ಅವಕಾಶವಿದೆ. ಮಿಲಿಟರಿಯ ವಿವಿಧ ವಿಭಾಗಗಳು, ಖಾಸಗಿ ಕಂಪನಿಗಳು, ಸರ್ಕಾರಿ ಹುದ್ದೆಗಳಲ್ಲೂ ಮೀಸಲಾತಿ ನೀಡುತ್ತಿರುವುದರಿಂದ ಅಗ್ನಿವೀರರಿಗೆ ಉದ್ಯೋಗದ ವಿಪುಲ ಅವಕಾಶಗಳು ದೊರಕಿದಂತಾಗಿವೆ. ಇದನ್ನು ರಾಜಕೀಯ ಹಿನ್ನೆಲೆಯಿಂದ ನೋಡದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ನೋಡುವಂತೆ ಸಲಹೆ ನೀಡಿದರು.

ಅಭಿವೃದ್ಧಿಶೀಲ ರಾಷ್ಟ್ರಗಳು ಇಂತಹ ಯೋಜನೆಗಳಿಂದ ಪ್ರಗತಿಯತ್ತ ದಾಪುಗಾಲಿಟ್ಟಿವೆ. ಭಾರತವೂ ಆ ದಿಸೆಯಲ್ಲಿ ಹೊಸ ಹೆಜ್ಜೆಯನ್ನಿಟ್ಟಿದೆ. ಅದಕ್ಕೆ ಎಲ್ಲರೂ ಸಹಕಾರಿಯಾಗಿ ನಿಲ್ಲಬೇಕು. ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದು ನನಗೆ ಅರ್ಥವಾಗುತ್ತಿಲ್ಲ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಎಲ್ಲರೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ರಾಜಕಾರಣ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಸ್.ಎಂ.ಕೃಷ್ಣ ಅವರು, "ನಾನು ನನ್ನ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ. ಇಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕುರಿತು ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣನವರು ಬಂದಿದ್ದಾರೆ. ಇಲ್ಲಿ ರಾಜಕಾರಣದ ಬಗ್ಗೆ ಮಾತನಾಡುವುದು ಅಪ್ರಸ್ತುತ," ಎಂದು ಹೇಳಿದರು.

2023ರ ಚುನಾವಣೆಯಲ್ಲಿ ತಮ್ಮ ರಾಜಕೀಯ ನಿಲುವೇನು ಎಂದು ಕೇಳಿದಾಗ, ನಾವಿನ್ನೂ 2022ರಲ್ಲಿದ್ದೇವೆ. 2023 ಬಂದಾಗ ಯೋಚಿಸೋಣ. ಅದರ ಬಗ್ಗೆ ಈಗಲೇ ತಲೆಕೆಡಿಸಿಕೊಳ್ಳುವುದು ಬೇಡ ಎಂದರು. ಕುಟುಂಬದವರು ರಾಜಕೀಯ ಪ್ರವೇಶಿಸುವರೇ ಎಂದು ಕೇಳಿದಾಗಲೂ ವೌನವೇ ಉತ್ತರವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ನ್ನು ಗುರುಚರಣ್ಗೆ ಘೋಷಿಸಿದ್ದು, ಚುನಾವಣೆಗೆ ಸ್ಪರ್ಧಿಸಿದರೆ ಗೆಲ್ಲುವರೇ ಎಂದು ಕೇಳಿದಾಗ, ಜನಬೆಂಬಲವಿದ್ದರೆ ಗೆದ್ದೇ ಗೆಲ್ಲುತ್ತಾರೆ ಎಂದ ಎಸ್.ಎಂ.ಕೃಷ್ಣ ಅವರು, ನಿಮ್ಮ ಕುಟುಂಬದಿಂದ ಬೇರೆಯವರು ಮದ್ದೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ವದಂತಿಗಳು ಹರಡಿರುವ ಬಗ್ಗೆ ಪ್ರಶ್ನಿಸಿದಾಗ, ವದಂತಿಗಳು ವದಂತಿಗಳಾಗಿಯೇ ಉಳಿಯಲಿವೆ. ಆಧಾರರಹಿತ ವದಂತಿಗಳಿಗೆ ಸೊಪ್ಪು ಹಾಕಬೇಡಿ ಎಂದು ಹೇಳಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications