KRS ನಿಂದ ನಾಲೆಗಳಿಗೆ ನೀರು; ಕೃಷಿ ಚಟುವಟಿಕೆ ಆರಂಭ

ಮಂಡ್ಯ, ಜುಲೈ 30: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣವೂ ಏರಿಕೆಯಾಗಿದ್ದು, ನಾಲೆಗಳಿಗೆ ನಿನ್ನೆ ನೀರು ಹರಿಸಲಾಗಿದೆ.

Recommended Video

      Hardik Pandya And Natasa Stankovic Blessed With A Baby Boy | Oneindia Kannada

      ಕೆಲ ದಿನಗಳ ಹಿಂದಷ್ಟೇ ನಡೆದಿದ್ದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಂದು ನೀರು ಹರಿಸಬೇಕು, ಹಾರಂಗಿ ಜಲಾಶಯದಿಂದಲೂ ಅದೇ ದಿನ ಇಲ್ಲವೇ ಆದಷ್ಟು ಶೀಘ್ರವಾಗಿ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸರ್ಕಾರದ ಆದೇಶದ‌ ಮೇರೆಗೆ ನಿನ್ನೆ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗಿದೆ.

      Agriculture Activities Started As Water Released To Canals From KRS

      ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ‌ಎಸ್ ಜಲಾಶಯದಲ್ಲಿ ಈಚೆಗೆ ಮಳೆಯಿಂದಾಗಿ ನೀರಿನ ಒಳ ಹರಿವು ಹೆಚ್ಚಾಗಿ ಜಲಾಶಯದ ನೀರಿನ ಮಟ್ಟ 107 ಅಡಿಗೆ ತಲುಪಿತ್ತು. ಇದೀಗ ನಾಲೆಗಳಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ರೈತರು ಸಂತಸಗೊಂಡಿದ್ದು, ಕೃಷಿ ಕಾರ್ಯಗಳನ್ನು ಆರಂಭಿಸುತ್ತಿದ್ದಾರೆ. ನೀರು ಬಿಡುತ್ತಿದ್ದಂತೆ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಲಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+