ಶಿವರಾಮೇಗೌಡ ವಿರುದ್ಧ ಪ್ರತಿಭಟನೆ:ಉಪೇಂದ್ರ ಕೊಟ್ಟ ಪ್ರತಿಕ್ರಿಯೆ ಏನು?
Recommended Video

ಮಂಡ್ಯ, ಏಪ್ರಿಲ್ 02: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಗೌಡ್ತಿ ಅಲ್ಲ ಎಂದು ಹೇಳಿಕೆ ನೀಡಿರುವ ಸಂಸದ ಎಲ್.ಆರ್.ಶಿವರಾಮೇಗೌಡರ ಕ್ರಮ ಖಂಡಿಸಿ ಸಮೀಪದ ಅಂಬಿ ತವರು ಗ್ರಾಮ ದೊಡ್ಡರಸಿನಕೆರೆ ಗೇಟ್ ಬಳಿ ಅಂಬಿ ಅಭಿಮಾನಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಂಬಿ ಬದುಕಿದ್ದ ವೇಳೆ ತುಟಿ ಬಿಚ್ಚದೇ ಅವರ ನೆರಳಿನಲ್ಲಿದ್ದು, ಈಗ ಅವರ ಪತ್ನಿ ಮೇಲೆ ಟೀಕೆ ಮಾಡುತ್ತಿರುವ ಕ್ರಮ ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿ ಅವರು ಎಲ್ಆರ್ಎಸ್ ವಿರುದ್ಧ ಧಿಕ್ಕಾರ ಕೂಗಿದರು.
ಸುಮಲತಾ ಮಂಡ್ಯದ ಸೊಸೆ, ನಮ್ಮೂರಿನ ಮನೆಯ ಮಗಳು. ಆಕೆಯ ಬಗ್ಗೆ ಹಗುರವಾಗಿ ಮಾತನಾಡಿದರೆ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲ್ಲಿ. ತೇಜೋವಧೆ ಮಾಡುವುದನ್ನು ನಿಲ್ಲಿಸಬೇಕು. ತಮ್ಮ ಲೋಕ ಸಭಾ ಚುನಾವಣೆಯಲ್ಲಿ ಅಂಬಿ ಬೆಂಬಲ ಪಡೆದಿರುವುದನ್ನು ಮರೆತಿರಾ? ಶಿವರಾಮೇಗೌಡರೇ...ಎಂದು ಕಿಡಿಕಾರಿದರು.

ಅಂಬಿ ಕುಟುಂಬದ ಬಗ್ಗೆ ಕೀಳು ವ್ಯಕ್ತ್ತಿತ್ವ ತೋರಿಸುತಿದ್ದಾರೆ. ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಅಭಿಮಾನಿಗಳು ಎಚ್ಚರಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಬ್ಇನ್ಸ್ಪೆಕ್ಟರ್ ಅಯ್ಯನಗೌಡ ಪ್ರತಿಭಟನಾ ನಿರತರ ಮನವೊಲಿಸಿದ ನಂತರ ಪ್ರತಿಭಟನೆ ಹಿಂಪಡೆದರು.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ಪ್ರತಿಭಟನಾ ವೇಳೆ ಸುಮಲತಾ ಅವರ ಚಿಹ್ನೆಯಾದ ರಣಕಹಣೆ ಮೊಳಗಿಸಿದ ಪ್ರತಿಭಟನಾ ನಿರತರು ನಮ್ಮೂರಿನ ಹೆಣ್ಣು ಮಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಉಪೇಂದ್ರಗೂ ತಟ್ಟಿದ ಪ್ರತಿಭಟನಾ ಬಿಸಿ
ಶಿವರಾಮೇಗೌಡ ಅವರ ವಿರುದ್ಧ ಪ್ರತಿಭಟನೆ ನಡೆಸುತಿದ್ದ ವೇಳೆ ಬೆಂಗಳೂರಿನಿಂದ ಮಳವಳ್ಳಿಗೆ ತೆರಳುತ್ತಿದ್ದ ನಟ ಉಪೇಂದ್ರರಿಗೆ ಪ್ರತಿಭಟನೆಯ ಬಿಸಿ ತಟ್ಟಿತು. ಈ ವೇಳೆ ಪ್ರತಿಭಟನಾ ನಿರತರು ಉಪೇಂದ್ರ ಅವರನ್ನು ಸುತ್ತುವರಿದು, ಚಿತ್ರರಂಗದ ಒಬ್ಬ ಮಹಿಳೆ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿ ಅವಮಾನಿಸುತಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿ ಎಂದಾಗ ಪ್ರಜಾಕೀಯ ಪಕ್ಷದಿಂದ ನಮ್ಮ ಅಭ್ಯರ್ಥಿ ಸ್ಪರ್ಧಿಸಿದ್ದು, ಅವರನ್ನು ಬೆಂಬಲಿಸಿ ಎಂದರು. ಬಳಿಕ ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಈ ಚುನಾವಣೆಯಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುತ್ತಾ ತಮ್ಮ ಬುದ್ಧಿವಂತಿಕೆ ಮಾತು ಹೇಳಿ ಜಾರಿಕೊಂಡರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications