ಕಾವೇರಿಯಲ್ಲಿ ಪುಷ್ಕರ ಸಂಭ್ರಮ, ತೀರ್ಥ ಸ್ನಾನ ಮಾಡಿದ ಆಂಧ್ರ ಸಚಿವ
ಮಂಡ್ಯ, ಸೆಪ್ಟೆಂಬರ್ 22: ಆಂಧ್ರ ಪ್ರದೇಶದ ಮುಜರಾಯಿ ಸಚಿವ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ನಡೆದ ಮಹಾಪುಷ್ಕರದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಆಂಧ್ರ ಪ್ರದೇಶದ ಮುಜರಾಯಿ ಸಚಿವ ಮಾಣಿಕ್ಯ ರಾವ್ ಹಾಗೂ ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕಿ ಸುಗುಣಂ ಅವರು ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಬಳಿಕ ಪಿಂಡ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, "ಮೈಸೂರು ದಸರಾ ಸಂದರ್ಭದಲ್ಲಿ ಕಾವೇರಿ ಪುಷ್ಕರ ನಡೆಯುತ್ತಿರುವುದು ವಿಶೇಷವಾಗಿದ್ದು, ಬರುವ ಭಕ್ತರು, ಕಾವೇರಿ ನದಿಯಲ್ಲಿ ಸ್ನಾನ ಮಾಡಿ, ಚಾಮುಂಡೇಶ್ವರಿ, ಶ್ರೀ ರಂಗನಾಥಸ್ವಾಮಿ ದರ್ಶನ ಮಾಡಿದರೆ ಒಳ್ಳೆಯದಾಗಲಿದೆ. ಹಾಗೂ ಕಾವೇರಿಯಲ್ಲಿ ಸ್ನಾನ ಮಾಡಿರುವುದು ನೆಮ್ಮದಿ ತಂದಿದೆ ಎಲ್ಲರಿಗೂ ಒಳ್ಳೆಯದಾಗಲೆಂದು ಪ್ರಾರ್ಥಿಸಿರುವುದಾಗಿ ಅವರು ಹೇಳಿದರು.
ತಿರುಪತಿ ಕ್ಷೇತ್ರದ ಶಾಸಕಿ ಸುಗುಣಂ ಮಾತನಾಡಿ, ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ಅವರ ಕಾರ್ಯವನ್ನು ಶ್ಲಾಘಿಸಿದರು. ಈ ಕಾರ್ಯದಿಂದಾಗಿ ದಕ್ಷಿಣ ಭಾರತದ ಅನೇಕ ಸಾಧು, ಸಂತರು ಸೇರಿದಂತೆ ಕರ್ನಾಟಕ, ಆಂದ್ರಪ್ರಧೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳಾ ರಾಜ್ಯದಿಂದ ಲಕ್ಷಾಂತ ಭಕ್ತರು ಇಲ್ಲಿಗೆ ಆಗಮಿಸಿ ಕಾವೇರಿ ನದಿಯಲ್ಲಿ ಸ್ನಾನಮಾಡಿ ವಿಶೇಷ ಪೂಜೆ ಕೈಂಕರ್ಯಗಳಲ್ಲಿ ಭಾಗವಹಿಸಲು ಅನುಕೂಲವಾಗಿದೆ ಎಂದು ಹೇಳಿದರು.
ಈಗಾಗಲೇ ತಮಿಳುನಾಡು, ಆಂಧ್ರ ಸೇರಿದಂತೆ ಹಲವಡೆಗಳಿಂದ ಭಕ್ತರು ಆಗಮಿಸುತ್ತಿದ್ದು ಕಾವೇರಿಯಲ್ಲಿ ಸ್ನಾನಾಧಿಕಾರ್ಯಗಳನ್ನು ಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications