ವೈರಮುಡಿ ಉತ್ಸವ: ಪುನೀತರಾದ ಭಕ್ತರು
ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಸಂಭ್ರಮಕ್ಕೆ ಬುಧವಾರ ರಾತ್ರಿ ಸಾವಿರಾರು ಭಕ್ತರು ಸಾಕ್ಷಿಯಾದರು.
ಮಂಡ್ಯ, ಏಪ್ರಿಲ್ 6: ದಕ್ಷಿಣ ಬದರೀಕಾಶ್ರಮ, ಯದುಗಿರಿ ಎಂದೇ ಪ್ರಸಿದ್ಧಿಯಾಗಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಸಂಭ್ರಮಕ್ಕೆ ಬುಧವಾರ ರಾತ್ರಿ(ಏಪ್ರಿಲ್ 5) ಸಾವಿರಾರು ಭಕ್ತರು ಸಾಕ್ಷಿಯಾದರು.
ವಜ್ರಖಚಿತ ವೈರಮುಡಿ ಕಿರೀಟ ಧರಿಸಿರುವ ಚಲುವನಾರಾಯಣಸ್ವಾಮಿ ಮೆರವಣಿಗೆ ಹೊರಕ್ಕೆ ಬರುತ್ತಿದ್ದಂತೆಯೇ ದರ್ಶನ ಪಡೆದ ಭಕ್ತರು ಧನ್ಯತೆಯ ಭಾವದಲ್ಲಿ ತೇಲಿದರು.[ತಪ್ಪದೇ ಬನ್ನಿ ಮೇಲುಕೋಟೆ ವೈರಮುಡಿ ಉತ್ಸವಕ್ಕೆ]

ವೈರಮುಡಿಯನ್ನು ಮಂಡ್ಯದಿಂದ ಮೇಲುಕೋಟೆ ದೇವಸ್ಥಾನಕ್ಕೆ ಪಲ್ಲಕ್ಕಿ ಮೆರವಣಿಗೆಯಲ್ಲಿ ತರುವ ವೇಳೆಗೆ ಸಂಜೆ 7 ಗಂಟೆಯಾಗಿತ್ತು. ನಂತರ ಚಲುವನಾರಾಯಣಸ್ವಾಮಿಯನ್ನು ಆಭರಣಗಳಿಂದ ಅಲಂಕರಿಸಿ, ಗರುಡದೇವನ ಮೆರವಣಿಗೆ ನಂತರ ಬ್ರಹ್ಮೋತ್ಸವಕ್ಕೆ ಚಾಲನೆ ನೀಡಲಾಯಿತು.

ವಜ್ರ ಕಿರೀಟ ಧರಿಸಿದ ಚಲುವನಾರಾಯಣಸ್ವಾಮಿಯ ಮೆರವಣಿಗೆ ಹೂವಿನಿಂದ ಅಲಂಕೃತ ಪಲ್ಲಕ್ಕಿಯಲ್ಲಿ ರಾಜಬೀದಿಗೆ ಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಎಲ್ಲೆಲ್ಲೂ 'ಗೋವಿಂದ... ಗೋವಿಂದ...' ಎಂಬ ಭಜನೆ ಮೊಳಗಿತು.
ರಾಜ್ಯದ ವಿವಿಧೆಡೆಯಿಂದ ಮಾತ್ರಲ್ಲದೇ ನೆರೆರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದಲೂ ಬಂದಿದ್ದ ಭಕ್ತರು ಬ್ರಹ್ಮೋತ್ಸವದ ಸಂಭ್ರಮವನ್ನು ಕಣ್ತುಂಬಿಸಿಕೊಂಡರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications