ಮಂಡ್ಯ: ಹಳ್ಳ ಹಿಡಿದ ಆರ್ಟಿಇ, ಜಿಲ್ಲೆಯಾದ್ಯಂತ 300 ಸೀಟ್ಗಳಲ್ಲಿ 13 ವಿದ್ಯಾರ್ಥಿಗಳು ದಾಖಲು
ಮಂಡ್ಯ, ಜೂನ್ 07: ಮಹತ್ವಕಾಂಕ್ಷೆ ಯೋಜನೆಯಾದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್.ಟಿ.ಇ) ಸಂಪೂರ್ಣ ಹಳ್ಳ ಹಿಡಿಯುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಆರ್ಟಿಇಯಡಿ ಶಾಲೆಗೆ ದಾಖಲು ಮಾಡಲು ಹಿಂದೇಟು ಹಾಕುತ್ತಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ 300 ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆಶ್ಚರ್ಯದ ಸಂಗತಿ ಎಂದರೆ 300 ಸೀಟ್ಗೆ ಕೇವಲ 75 ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಿದ್ದು, 74 ವಿದ್ಯಾರ್ಥಿಗಳಿಗೆ ಸೀಟುಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ. ಈವರೆಗೂ 13 ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದಾರೆ.

ಆರ್ಟಿಇಯಡಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗುವುದು. ಆರ್ಟಿಇಯಡಿ ಆಯ್ಕೆಯಾದ ವಿದ್ಯಾರ್ಥಿಗಳಿ ಸರ್ಕಾರವೇ ಶುಲ್ಕವನ್ನು ಭರಸಲಿದೆ.
ಜಿಲ್ಲೆಯಲ್ಲಿ ಒಟ್ಟು 48 ಅನುದಾನಿತ ಶಾಲೆಗಳ ಆರ್ಟಿಇ ವ್ಯಾಪ್ತಿಗೆ ಒಳಪಡಲಿದ್ದು, ಈ ಪೈಕಿ ಮೂರು ಖಾಸಗಿ ಶಾಲೆಗಳು ಸೇರಲಿವೆ.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 4, ಮದ್ದೂರು 8, ಮಳವಳ್ಳಿ 4, ಮಂಡ್ಯ ಉತ್ತರ ವಲಯ 5, ಮಂಡ್ಯ ದಕ್ಷಿಣ ವಲಯ 12, ನಾಗಮಂಗಲ 2. ಪಾಂಡವಪುರ 8 ಹಾಗೂ ಶ್ರೀರಂಗಪಟ್ಟಣ 5 ಶಾಲೆಗಳು ಸೇರಿ ಒಟ್ಟು 48 ಶಾಲೆಗಳನ್ನು ಆರ್ಟಿಇಯಡಿ ಪ್ರವೇಶಾತಿಗೆ ಗುರುತಿಸಲಾಗಿದೆ.
ಸರ್ಕಾರ ಇಷ್ಟೆಲ್ಲ ಸವಲತ್ತುಗಳನ್ನು ನೀಡುತ್ತಿದ್ದರೂ ಮಕ್ಕಳು ಆರ್ಟಿಇಯಡಿ ಶಾಲೆಗೆ ದಾಖಲಾಗಲು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ''ಪ್ರಜಾಸತ್ಯ'' ಪತ್ರಿಕೆ ಮಾಹಿತಿ ಪಡೆದು ಪರಿಶೀಲಿಸಿದಾಗ ಸರ್ಕಾರ ತೆಗೆದುಕೊಂಡ ಕೆಲ ನಿರ್ಧಾರಗಳೇ ಆರ್ಟಿಇ ಹಳ್ಳ ಹಿಡಿಯಲು ಕಾರಣ ಎಂಬ ಸತ್ಯಗಳು ಗೋಚರಿಸುತ್ತವೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಯಡಿ ಖಾಸಗಿ ಶಾಲೆಗಳನ್ನು ಕೈ ಬಿಟ್ಟಿರುವುದೇ ಪೋಷಕರು ತಮ್ಮ ಮಕ್ಕಳನ್ನು ಆರ್ಟಿಇಯಡಿ ಶಾಲೆಗೆ ಪ್ರವೇಶಾತಿ ಕಲ್ಪಿಸಲು ಹಿಂದೇಟು ಹಾಕಲು ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ವಿದ್ಯಾಭ್ಯಾಸಕ್ಕೆ ಅವಕಾಶವೇ ಇರುವುದಿಲ್ಲ. ಆರ್ಟಿಇ ಇಲ್ಲಿ ಅನ್ವಯಿಸುವುದಿಲ್ಲ. ಹಾಗಾದರೆ ಆರ್ಟಿಇಯಡಿ ಅನುದಾನಿತ ಶಾಲೆಗೆ ನೀಡಿ ಏನು ಪ್ರಯೋಜನ ಎನ್ನುವುದು ಪೋಷಕರ ಆಕ್ರೋಶವಾಗಿದೆ.
2010ರಲ್ಲಿ ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೂ ಖಾಸಗಿ ಶಾಲೆಗಳಲ್ಲಿ ಪ್ರವೇಶಾತಿ ಸಿಗಬೇಕೆಂಬ ನಿಟ್ಟಿನಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಾರಂಭದಲ್ಲಿ ತುಂಬಾ ಅಚ್ಚುಕಟ್ಟಾಗಿ ನಡೆದುಕೊಂಡು ಬಂತು. ಈ ಮೊದಲು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಸೀಟು ಪಡೆದುಕೊಳ್ಳಲು ಪೋಷಕರು ಇನ್ನಿಲ್ಲದ ಹರಸಾಹಸ ಪಡುತ್ತಿದ್ದರು. ಆದರೆ, ಇತ್ತೀಚೆಗೆ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಮಾಡಿ ಕೂರಿಸಿವೆ.
ಎಲ್ಕೆಜಿ ಹಾಗೂ 1ನೇ ತರಗತಿಗೆ ಪ್ರವೇಶಾತಿ ಪಡೆಯಲು ಆರ್ಟಿಇಯಡಿ ಅವಕಾಶ ಕಲ್ಪಿಸಿದೆ. ಎಲ್ಕೆಜಿ. ಪ್ರವೇಶಾತಿ ಪಡೆಯುವ ಪ್ರತಿ ಮಗುವಿಗೆ ಸರ್ಕಾರವೇ ಗರಿಷ್ಠ 8 ಸಾವಿರ ಹಾಗೂ 1ನೇ ತರಗತಿ ಪ್ರವೇಶಾತಿ ಪಡೆಯುವ ಪ್ರತಿ ಮಗುವಿಗೆ 16 ಸಾವಿರ ಶುಲ್ಕವನ್ನು ಪಾವತಿಸುತ್ತದೆ.
ಆರ್ಟಿಇ ಕಾಯ್ದೆಯಡಿ ಈ ಮೊದಲು ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಟಿಇಯಡಿ ಸೇರಿಕೊಂಡಿದ್ದವು. ಆದರೆ, ಇತ್ತೀಚೆಗೆ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ಅನುದಾನಿತ ಶಾಲೆಗಳಿಗೆ ಮಾತ್ರ ಆರ್ಟಿಇಯಡಿ ಪ್ರವೇಶಾತಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಅನುಮತಿ ನೀಡಿರುವ ಅನುದಾನಿತ ಶಾಲೆಗಳ ಪೈಕಿ ಕೆಲ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಇಲ್ಲದಿರುವುದು ತಮ್ಮ ಮಕ್ಕಳನ್ನು ದಾಖಲು ಮಾಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಪ್ರತಿ ಪೋಷಕರಿಗೂ ತಮ್ಮ ಮಗುವಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹೆಬ್ಬಯಕ್ಕೆ ಇರುತ್ತದೆ. ಆರ್.ಟಿಇಯಡಿ ಅನುಮತಿ ನೀಡಿರುವ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಇಲ್ಲದಿರುವುದು ಪೋಷಕರನ್ನು ಗೊಂದಲಕ್ಕೀಡು ಮಾಡಿದ್ದು, ಆರ್ಟಿಇ ಸಹವಾಸವೇ ಬೇಡ ಎಂಬ ತೀರ್ಮಾನಕ್ಕೆ ಬಂದಂತಿದೆ.
ವರ್ಷದಿಂದ ವರ್ಷಕ್ಕೆ ಮಹತ್ವಕಾಂಕ್ಷೆ ಯೋಜನೆಯಾದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಹಳ್ಳ ಹಿಡಿಯುತ್ತಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ, ಮುಂದಿನ ಎರಡ್ಮೂರು ವರ್ಷಗಳಲ್ಲಿ ಆರ್.ಟಿ.ಇ. ಕಾಯ್ದೆ ರದ್ದಾದರೂ ಪೋಷಕರು ಆಶ್ಚರ್ಯ ಪಡುವಂತಿಲ್ಲ.
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲೂ ಆರ್ಟಿಇ ಯಡಿ ಪ್ರವೇಶಾತಿಗೆ ಅವಕಾಶ ಕಲ್ಪಿಸಿಕೊಡಲು ಮುಂದಾಗುವುದೇ ಎಂಬುದನ್ನು ನೋಡಬೇಕು.
ವಿದ್ಯಾರ್ಥಿಗಳು ವಾಸಿಸುವ ವಾರ್ಡ್ ಮತ್ತು ಜನವಸತಿ ಸ್ಥಳಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿರುವುದರಿಂದ ಖಾಸಗಿ ಶಾಲೆಗಳಿಗೆ ಶೇ.25ರಷ್ಟು ಆರ್ಟಿಇ ಸೀಟನ್ನು ನೀಡುತ್ತಿಲ್ಲ. ಆರ್ಟಿಇ 12(1) ಬಿ ಯಡಿ ಅನುದಾನಿತ ಶಾಲೆಗಳಿಗೆ ಶೇ.25 ರಷ್ಟು ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಂಡ್ಯ ಶಿಕ್ಷಣಾಧಿಕಾರಿಗಳಾದ ಬಿ.ಟಿ. ಚಂದ್ರಕಾಂತ್ ಹೇಳಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications