ಭಕ್ತರಿಗೆ ತಿಂಗಳ ನಂತರ ಬಾಗಿಲು ತೆರೆದ ಅರ್ಕೇಶ್ವರ ದೇವಸ್ಥಾನ
ಮಂಡ್ಯ, ಅಕ್ಟೋಬರ್ 12: ಮೂವರು ಅರ್ಚಕರ ಕೊಲೆ ಪ್ರಕರಣ ನಡೆದ ತಿಂಗಳ ನಂತರ ಮಂಡ್ಯದ ಅರ್ಕೇಶ್ವರ ದೇಗುಲ ಭಕ್ತರಿಗೆ ಬಾಗಿಲು ತೆರೆದಿದೆ.
ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿರುವ ಅರ್ಕೇಶ್ವರ ಸ್ವಾಮಿ ದೇವಾಲಯದಲ್ಲಿ ಸೆ.10ರ ರಾತ್ರಿ ಹುಂಡಿ ಹಣ ಕದಿಯಲು ಬಂದಿದ್ದ ದುಷ್ಕರ್ಮಿಗಳು ಮೂವರು ಅರ್ಚಕರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದಿದ್ದರು. ಈ ಘಟನೆಯಿಂದ ಇಡೀ ಜಿಲ್ಲೆಯಲ್ಲಿ ತಲ್ಲಣ ಉಂಟಾಗಿತ್ತು. ಆ ನಂತರ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ದೇವಸ್ಥಾನದ ಹುಂಡಿಯನ್ನು ಕದಿಯುವ ಉದ್ದೇಶದಿಂದ ದೇವಸ್ಥಾನದಲ್ಲಿ ಮಲಗಿದ್ದ ಆನಂದ್, ಗಣೇಶ್, ಪ್ರಕಾಶ್ ಎಂಬ ಮೂವರು ಅರ್ಚಕ/ಕಾವಲುಗಾರರನ್ನು ಬರ್ಬರವಾಗಿ ಕೊಲ್ಲಲಾಗಿತ್ತು. ಈ ಕುರಿತು ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಮಂಡ್ಯ ಡಿವೈಎಸ್ ಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಐದು ತನಿಖಾ ತಂಡಗಳನ್ನು ನೇಮಿಸಲಾಗಿತ್ತು. ಈ ಕೃತ್ಯ ಎಸಗಿದ್ದ ಐದು ಮಂದಿಯನ್ನು ಪೊಲೀಸರು ಮೂರು ದಿನದ ಒಳಗೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು, ಕಾರ್ಯಾಚರಣೆ ವೇಳೆ ಶೂಟೌಟ್ ಕೂಡ ನಡೆದಿತ್ತು.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 14ರಂದು ಶ್ರೀರಂಗಪಟ್ಟಣದ ಅಭಿ (22), ರಘು (20)ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28), ತೊಪ್ಪನಹಳ್ಳಿಯ ಮಂಜು (30) ಎಂಬುವರನ್ನು ಬಂಧಿಸಿದ್ದರು.
ಇಂದಿನಿಂದ ಅರ್ಕೇಶ್ವರಸ್ವಾಮಿ ದೇಗುಲವನ್ನು ತೆರೆಯಲಾಗಿದ್ದು, ದೇವರಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುವುದರ ಜೊತೆಗೆ ಭಕ್ತರಿಗೂ ದರ್ಶನದ ಅವಕಾಶ ಮಾಡಿಕೊಡಲಾಗಿದೆ. ದೇವಸ್ಥಾನದ ಬಾಗಿಲು ತೆರೆದು ದೇವಸ್ಥಾನವನ್ನು ಶುದ್ಧಿಗೊಳಿಸಿ ಪೂಜೆ ಸಲ್ಲಿಸಲಾಗಿದೆ.
Recommended Video
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications