ಮಂಡ್ಯ ನಗರದಲ್ಲಿ ರಸ್ತೆ ತುಂಬಾ ಬಣ್ಣದ ಚಿತ್ತಾರ ಇರುವುದೇಕೆ?
ಮಂಡ್ಯ , ಜನವರಿ 02: ಹೊಂಡ, ಹಳ್ಳ-ಗುಂಡಿಗಳು, ಚರಂಡಿ, ರಸ್ತೆ ಉಬ್ಬುಗಳಿಂದ ಕೂಡಿರುವ ಮಂಡ್ಯ ಪಟ್ಟಣದ ರಸ್ತೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಯಾರೂ ಅತ್ತಕಡೆ ಗಮನಹರಿಸದ ಕಾರಣದಿಂದಾಗಿ ಕಲಾವಿದರು ತಮ್ಮ ಕುಂಚದ ಮೂಲಕ ಆಕರ್ಷಣೀಯ ಚಿತ್ರಗಳನ್ನು ಬಿಡಿಸಿ ಒಂದೆಡೆ ರಸ್ತೆಗಳಲ್ಲಿರುವ ಹೊಂಡ-ಗುಂಡಿಯಿರುವ ಬಗ್ಗೆ ಸಂಚಾರ ಮಾಡುವವರಿಗೆ ಎಚ್ಚರಿಕೆ ನೀಡುವುದರೊಂದಿಗೆ ಸಂಬಂಧಿಸಿದ ಅಧಿಕಾರಿಗಳ ಗಮನಸೆಳೆಯುವ ಯತ್ನವನ್ನು ಮಾಡಿದ್ದಾರೆ.
ಈಗಾಗಲೇ ಕುಲಗೆಟ್ಟಿರುವ ರಸ್ತೆಗಳ ಅಭಿವೃದ್ಧಿಯನ್ನೇ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳು ಮರೆತಿದ್ದು ಅವರ ಕಣ್ತೆರೆಸುವ ಕೆಲಸವನ್ನು ಮಾಡಿ ಗಮನ ಸೆಳೆದಿದ್ದಾರೆ.
ಮಂಡ್ಯ ನಗರದ ಜಯಚಾಮರಾಜೇಂದ್ರ ವೃತ್ತ, ಎಸ್.ಡಿ.ಜಯರಾಂ ವೃತ್ತ, ಮಹಾವೀರ ವೃತ್ತ, ಹೊಸಹಳ್ಳಿ ವೃತ್ತ ಸೇರಿದಂತೆ ಹಲವೆಡೆ ರಸ್ತೆಗಳ ಅದ್ವಾನ ಸ್ಥಿತಿಗೆ ಕನ್ನಡಿ ಹಿಡಿಯುವಂತೆ ಚಿತ್ರಗಳನ್ನು ರಚಿಸಿದ್ದು, ಈ ಒಂದೊಂದು ಚಿತ್ರವೂ ರಸ್ತೆಗಳ ದುರವಸ್ಥೆಯನ್ನು ಸಾರಿ ಹೇಳುತ್ತಿವೆ.

ಚಿತ್ರಕಲಾವಿದರು ನಗರದಲ್ಲಿ ಗುಂಡಿಗಳಿಂದ ಕೂಡಿರುವ ರಸ್ತೆಗಳ ಮುಂಭಾಗ ಚಿತ್ರ ಬಿಡಿಸುವ ಜೊತೆಗೆ ಗುಂಡಿ ಮುಚ್ಚಿ, ಜೀವ ಉಳಿಸಿ, ರಸ್ತೆ ಉಬ್ಬುಗಳು ಇರುವ ಕಡೆ ನಿಧಾನವಾಗಿ ಚಲಿಸಿ ಎಂಬ ಬರಹಗಳು ವಾಹನ ಸವಾರರನ್ನು ಎಚ್ಚರಿಸುತ್ತಿವೆ. ಸಣ್ಣ ಗುಂಡಿಗಳಿದ್ದರೆ ಅವುಗಳಿಗೂ ಪ್ರೀತಿ ಮತ್ತು ಅಪಾಯದ ಚಿಹ್ನೆಗಳ ಬಿಡಿಸಿ ವಿಶಿಷ್ಟ ಮತ್ತು ವಿಭಿನ್ನ ರೀತಿಯಲ್ಲಿ ಎಲ್ಲರನ್ನು ಸೆಳೆಯುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಈ ಕುರಿತಂತೆ ಪ್ರಕಾಶ್ ಆರ್ಟ್ಸ್ನ ಕಲಾವಿದ ಪ್ರಕಾಶ್ ಮಾತನಾಡಿ, ರಸ್ತೆಗಳು ಹಾಳಾಗಿ ಹಲವು ವರ್ಷಗಳಾಗಿವೆ. ಅವುಗಳನ್ನು ದುರಸ್ತಿ ಮಾಡುವ ಕಾರ್ಯ ಇದುವರೆಗೂ ನಡೆದಿಲ್ಲ ಎಂದು ದೂರಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications