ಮಂಡ್ಯದಲ್ಲಿ ಮನೆಗೆ ಬರಲು ಸಜ್ಜಾಗಿದ್ದಾನೆ "ಆಯುರ್ವೇದ ಗಣಪ"
ಮಂಡ್ಯ, ಆಗಸ್ಟ್ 20: ಕೊರೊನಾ ಸೋಂಕಿನ ಭೀತಿಯಿಂದಾಗಿ ಈ ಬಾರಿ ಅದ್ಧೂರಿ ಗಣಪತಿ ಹಬ್ಬದ ಆಚರಣೆಗೆ ಬ್ರೇಕ್ ಬಿದ್ದಿದೆ. ಆದರೆ ಗಣೇಶ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿಯೂ ಆಚರಿಸಬಹುದೆಂದು ತೋರಿಸಿಕೊಡಲು ಮಂಡ್ಯದ ಕೃಷಿ ಇಲಾಖೆ ಹಾಗೂ ಜಿಲ್ಲಾಡಳಿತ ಮುಂದಾಗಿದೆ.
ಈ ಬಾರಿ ಜೇಡಿ ಮಣ್ಣಿನ ಆಯುರ್ವೇದ ಗಣಪನನ್ನು ಕೃಷಿ ಇಲಾಖೆ, ಜಿಲ್ಲಾಡಳಿತ ಹಾಗೂ ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರ ಜೊತೆಗೂಡಿ ಪರಿಚಯಿಸಿವೆ. ಈ ಮೂಲಕ ಈ ಬಾರಿ ಭಿನ್ನವಾಗಿ ಪರಿಸರಸ್ನೇಹಿ ಗಣಪನ ಹಬ್ಬದಾಚರಣೆಗೆ ಪ್ರೋತ್ಸಾಹಿಸಿವೆ.
ಆಯುರ್ವೇದ ಗಣಪ ಹೇಗೆ?: ಜೇಡಿಮಣ್ಣಿನಿಂದ ಗಣಪನ ಮೂರ್ತಿಯನ್ನು ತಯಾರಿಸಲಾಗಿದ್ದು, ಮೂರ್ತಿಯ ಜೊತೆ ಪಾಟ್ ಹಾಗೂ ಔಷಧೀಯ ಗಿಡಗಳ ಬೀಜಗಳನ್ನು ನೀಡಲಾಗುವುದು. ಗಣಪನ ಪೂಜೆಯ ನಂತರ ಪಾಟ್ ನಲ್ಲಿ ಮೂರ್ತಿಯನ್ನು ವಿಸರ್ಜಿಸಬೇಕು. ಮೂರ್ತಿ ಸಂಪೂರ್ಣ ಕರಗಿದ ಬಳಿಕ ಆ ಬೀಜವನ್ನು ಪಾಟ್ ಗೆ ಹಾಕಿ ನೀರು ಹಾಕಬೇಕು. ಇದರಿಂದ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದರ ಜೊತೆಗೆ ಔಷಧ ಗುಣಗಳುಳ್ಳ ಗಿಡವನ್ನು ಮನೆಯಲ್ಲೇ ಬೆಳೆದಂತಾಗುತ್ತದೆ ಎಂಬುದು ಜಿಲ್ಲಾಡಳಿತದ ಉದ್ದೇಶ.

ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಮಂಡ್ಯದ ವಿ.ಸಿ.ಫಾರಂನಲ್ಲಿರುವ ಆರಾಧ್ಯ ಆಗ್ರೋ ಫುಡ್ ಅಂಡ್ ಬೇವರೇಜ್ ಪರಿಸರಕ್ಕೆ ಪೂರಕವಾಗಿರುವ ಜೇಡಿ ಮಣ್ಣಿನ ಗಣಪನನ್ನು ಸಿದ್ಧಪಡಿಸಿದ್ದಾರೆ. ಅದೂ ಅತ್ಯಂತ ಕಡಿಮೆ ಬೆಲೆ, ಅಂದರೆ 120 ರೂಪಾಯಿಗೆ. ಜೊತೆಗೆ ಗೌರಿಯೂ ಇರಲಿದ್ದಾಳೆ. ಪರಿಸರಸ್ನೇಹಿ ಗಣೇಶ ಪ್ರತಿಷ್ಠಾಪಿಸುವ ಪ್ರಾತ್ಯಕ್ಷಿಕೆಯನ್ನು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆಸಲಾಯಿತು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications