Get Updates
Get notified of breaking news, exclusive insights, and must-see stories!

ನಾಗಮಂಗಲ ಗಲಭೆಯಲ್ಲಿ ಜೈಲು ಸೇರಿದ್ದ 55 ಮಂದಿಗೆ ಕೊನೆಗೂ ಬೇಲ್‌

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣವು ರಾಜ್ಯದೆಲ್ಲೆಡೆ ಸದ್ದು ಮಾಡಿತ್ತು. ಈ ಪ್ರಕರಣ ಸಂಬಂಧ ಹಲವರು ಜೈಲು ಕೂಡ ಸೇರಿದ್ದರು. ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಗಲಾಟೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಒಟ್ಟು 55 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಈ ಎಲ್ಲರಿಗೂ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ ಎಂದು ವರದಿಯಾಗಿದೆ.

Bail Has Been Granted To All The Accused In Nagamangala Riot Case

ಆರೋಪಿಗಳಿಗೆ ತಲಾ ಒಂದು ಲಕ್ಷ‌ ರೂಪಾಯಿ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕುವುದು, ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಹಾಗೂ ಯಾವುದೇ ಅಪರಾಧ ‌ಕೃತ್ಯಗಳಲ್ಲ ಭಾಗಿಯಾಗಬಾರದು ಎಂದು ಕೋರ್ಟ್‌ ಷರತ್ತುಗಳನ್ನು ವಿಧಿಸಿದೆ.

ನಾಗಮಂಗಲದಲ್ಲಿ ಗಲಭೆಯಾದ ನಂತರ ಪೊಲೀಸರು ಸೆಪ್ಟೆಂಬರ್‌ 11ರಂದು ಆರೋಪಿಗಳನ್ನು ಬಂಧಿಸಿದ್ದರು. ಸೆಪ್ಟೆಂಬರ್‌ 12 ರಿಂದ ಆರೋಪಿಗಳು ಮಂಡ್ಯ ಜೈಲಿನಲ್ಲೇ ಇದ್ದರು. ಇಂದು ಮತ್ತು ನಾಳೆ ರಜೆ ಇರುವ ಕಾರಣ ಆರೋಪಿಗಳಿಗೆ ಸೋಮವಾರ ಬಿಡುಗಡೆ ಭಾಗ್ಯ ಸಿಗಲಿದೆ ಎನ್ನಲಾಗಿದೆ.

Bail Has Been Granted To All The Accused In Nagamangala Riot Case

ಏನಿದು ಪ್ರಕರಣ?: ಸಕ್ಕರೆ ನಾಡು ಮಂಡ್ಯದಲ್ಲಿ ಗಣೇಶೋತ್ಸವದ ಅಂಗವಾಗಿ ಯುವಕರು ಮೂರ್ತಿಯ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿತ್ತು. ಮಂಡ್ಯ ಜಿಲ್ಲೆಯ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಈ ಘಟನೆ ನಡೆದಿತ್ತು. ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು.

ಮೆರವಣಿಗೆ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್‌ ಬಾಂಬ್‌ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಅಲ್ಲಿದ್ದ ಕೆಲ ವಾಹನಗಳಿಗೂ ಕೂಡ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.

Bail Has Been Granted To All The Accused In Nagamangala Riot Case

ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಕೈಯಲ್ಲಿ ಕತ್ತಿ, ತಲ್ವಾರ್‌ ಕೂಡ ಹಿಡಿದು ಬಂದಿದ್ದರು ಎನ್ನಲಾಗಿತ್ತು. ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಲಾಠಿ ಚಾರ್ಜ್‌ ಮೂಲಕ ದುಷ್ಕರ್ಮಿಗಳನ್ನು ಅಲ್ಲಿಂದ ಚದುರಿಸಿ, ಅವರು ತಂದಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿತ್ತು.

ಇನ್ನು ಅಲ್ಲಿನ ಮುಸ್ಲಿಂ ಸಮುದಾಯದ ಕೆಲ ಯುವಕರು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ ಎಂದು ಗಣೇಶೋತ್ಸವದ ಯುವಕರು ಆರೋಪಿಸಿದ್ದು, ಗಣಪತಿ ಮೂರ್ತಿಯನ್ನು ನೇರವಾಗಿ ನಾಗಮಂಗಲ ಪೊಲೀಸ್‌ ಠಾಣೆಯ ಎದುರು ಕರೆದೊಯ್ದು, ಧಿಕ್ಕಾರ ಕೂಡ ಕೂಗಿದ್ದರು.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅನುಮಾನ ಬಂದಿದ್ದ ಎಲ್ಲರನ್ನೂ ಬಂಧಿಸಿ ಕ್ರಮ ತೆಗೆದುಕೊಂಡಿದ್ದರು. ಈ ಘಟನೆಯು ಕೋಮು ದಳ್ಳುರಿಗೂ ಕಾರಣವಾಗಿ ರಾಜ್ಯದ್ಯಂತ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದವು. ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ನಡುವೆ ದೊಡ್ಡ ಮಟ್ಟದಲ್ಲಿ ಆರೋಪ ಪ್ರತ್ಯಾರೋಪಗಳು ಸಹ ನಡೆದಿತ್ತು.

ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿಯು ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ತಂಡವನ್ನು ರಚಿಸಿ, ಸಮಗ್ರ ವರದಿ ನೀಡಲು ನಿರ್ದೇಶಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸತ್ಯಶೋಧನಾ ತಂಡ ರಚಿಸಿದ್ದರು. ಇದರಲ್ಲಿ ಬಿಜೆಪಿ ನಾಯಕರಾದ ಸಿ.ಎನ್‌.ಅಶ್ವತ್ಥ್‌ ನಾರಾಯಣ್‌, ಬೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+