ಬೆಂಗಳೂರು-ಜಲ್ಸೂರು ರಾಜ್ಯ ಹೆದ್ದಾರಿ ಕಾಮಗಾರಿ 6 ತಿಂಗಳಲ್ಲಿ ಪೂರ್ಣಗೊಳಿಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ನಾಗಮಂಗಲ, ಸೆಪ್ಟೆಂಬರ್, 06: ನಾಗಮಂಗಲ ತಾಲೂಕಿನಲ್ಲಿ ಹಾಯ್ದು ಹೋಗುತ್ತಿರುವ ಬೆಂಗಳೂರು-ಜಲ್ಸೂರು ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಮುಂದಿನ 6 ತಿಂಗಳಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೌಡ್ಲೆ ಗೇಟ್ನಿಂದ ದೇವಲಾಪುರ, ನಾಗಮಂಗಲ, ಬೋಗಾದಿ ಮಾರ್ಗವಾಗಿ ಕೆ.ಆರ್.ಪೇಟೆ ಮೂಲಕ ಹಾಯ್ದು ಹೋಗಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಧಿಕಾರಿಗಳ ಜೊತೆಗೂಡಿ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಳೆದ 2018ರಲ್ಲಿ ಬೆಂಗಳೂರು-ಜಲ್ಸೂರು ರಾಜ್ಯ ಹೆದ್ದಾರಿ ಕಾಮಗಾರಿಗೆ ಅನುಮೋದನೆ ದೊರಕಿದ್ದು, 2020ರಲ್ಲಿ ಕಾಮಗಾರಿ ಆರಂಭವಾಗಿ 3ವರ್ಷಗಳಿಂದ ಯಾವುದೇ ಸಮಸ್ಯೆಯಿಲ್ಲದ ಪ್ರದೇಶದಲ್ಲಿ ಮಾತ್ರ ಕಾಮಗಾರಿಯನ್ನು ನಡೆಸಲಾಗಿದೆ ಎಂದರು.

ಇನ್ನುಳಿದಂತೆ ಗ್ರಾಮ ಪರಿಮಿತಿ ಮತ್ತು ಅರಣ್ಯ ಪ್ರದೇಶದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿಲ್ಲ. ಕೋವಿಡ್ ಸಂದರ್ಭ ಸೇರಿದಂತೆ ಅಧಿಕಾರಿಗಳ ಬದಲಾವಣೆ, ಭೂಸ್ವಾಧೀನ ಪ್ರಕ್ರಿಯೆ, ಅರಣ್ಯ ಇಲಾಖೆಗೆ ಸೇರಿದ ಕೆಲವು ಭಾಗಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರಣ್ಯ ಪ್ರದೇಶದಲ್ಲಿಯೇ ಹೆಚ್ಚು ಸಮಸ್ಯೆಯಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ರಸ್ತೆ ನಿರ್ಮಾಣಕ್ಕೆ ತೊಡಕಾಗಿರುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಇಂದು ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರಿನಿಂದ ಜಲ್ಸೂರು ರಸ್ತೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಸೇರಿದ ಸ್ಥಳ 13 ಕಿಲೋ ಮೀಟರ್ ಇದ್ದು, ಇದರಲ್ಲಿ 8 ಕಿ.ಮೀ. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಇರುತ್ತದೆ. ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ಪರಿಹರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಅರಣ್ಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳ ಹಂತದಲ್ಲಿ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕಿರುವುದರಿಂದ ಡಿಸಿ, ಎಸಿ ಸೇರಿದಂತೆ ಕೆಶಿಪ್ ಅಧಿಕಾರಿಗಳು ಮತ್ತು ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಸಂಸ್ಥೆಯ ಮುಖ್ಯಸ್ಥರ ಜೊತೆಗೂಡಿ ತಪಾಸಣೆ ನಡೆಸಿದ್ದು, ಎಲ್ಲೆಲ್ಲಿ ಏನೆಲ್ಲಾ ಸಮಸ್ಯೆಯಿದೆ, ಅವುಗಳಿಗೆ ಪರಿಹಾರ ಕಂಡುಹಿಡಿಯಲು ಕಾನೂನಾತ್ಮಕ ಮಾರ್ಗೋಪಾಯ ಕಂಡುಹಿಡಿಯಲು ಸಮಗ್ರ ಮಾಹಿತಿ ಪಡೆದುಕೊಳ್ಳಲಾಗಿದೆ. ಮುಂದಿನ 6 ತಿಂಗಳಲ್ಲಿ ಈ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ್, ಪಾಂಡವಪುರ ಉಪ ವಿಭಾಗಾಧಿಕಾರಿ ನಂದೀಶ್, ಕೆಶಿಪ್ ಮುಖ್ಯ ಇಂಜಿನಿಯರ್ ಶಿವಕುಮಾರ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications