ಬಂದ್ : ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಅನುಮಾನ
ಮಂಡ್ಯ, ಜನವರಿ 07 : 'ಅನೇಕ ಸಂಘ ಸಂಸ್ಥೆಗಳು ಜನವರಿ 8 ಮತ್ತು 9ರಂದು ಬಂದ್ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹ ಸಹಕಾರ ನೀಡುತ್ತಾರೆ' ಎಂದು ಕರ್ನಾಟಕದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಸೋಮವಾರ ಮದ್ದೂರಿನಲ್ಲಿ ಮಾತನಾಡಿದ ಡಿ.ಸಿ.ತಮ್ಮಣ್ಣ ಅವರು, 'ಸರ್ಕಾರ ಬಂದ್ಗೆ ಬೆಂಬಲ ನೀಡುತ್ತದೆ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ' ಎಂದರು.
'ಮುಷ್ಕರದ ದಿನ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ನಡೆಸುವ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಆದರೆ, ಬಂದ್ ಇರುವುದಿಂದ ಸಾರಿಗೆ ವ್ಯವಸ್ಥೆ ಕಷ್ಟ' ಎಂದು ತಿಳಿಸಿದರು.

'ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಬಸ್ಗಳು ರಸ್ತೆಗೆ ಇಳಿಯಲಿವೆ. ಇಲ್ಲವಾದಲ್ಲಿ ಬಸ್ ಸಂಚಾರ ಇರುವುದಿಲ್ಲ' ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದರು.
ಬಸ್ ಇಲ್ಲ : 'ಕೆ.ಎಸ್.ಆರ್.ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಸಂಚಾರ ಜನವರಿ 8 ಮತ್ತು 9ರಂದು ಸ್ಥಗಿತವಾಗಲಿದೆ' ಎಂದು ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ.
ಮೋಟಾರು ವಾಹನ ತಿದ್ದುಪಡಿ ಮಸೂದೆ 2017ಅನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನು ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಒತ್ತಾಯಿಸಿ ಎರಡು ದಿನದ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
-
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications