ಸಕ್ಕರೆ ನಾಡಿನಲ್ಲಿ ಭಾರತ್ ಜೋಡೋ ಯಶಸ್ವಿ; ಆದಿಚುಂಚನಗಿರಿಯಲ್ಲಿ ವಾಸ್ತವ್ಯ
ಮಂಡ್ಯ, ಅಕ್ಟೋಬರ್ 7: ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮುಂದುವರಿದಿದ್ದು, ಶುಕ್ರವಾರ ನಾಗಮಂಗಲ ತಾಲೂಕಿನಲ್ಲಿ ಚೌಡಗೋನಹಳ್ಳಿಯಿಂದ ಪ್ರಾರಂಭವಾಗಿ ಅಂಚೆಭೂವನಹಳ್ಳಿಯಲ್ಲಿ ವಿಶ್ರಾಂತಿ ಪಡೆದರು.
ಗುರುವಾರ ಚೌಡಗೋನಹಳ್ಳಿ ಬಳಿಯ ಆಯುರ್ವೇದ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದ ರಾಹುಲ್ ಗಾಂಧಿ ಮತ್ತಿತರರು ಇಂದು ಬೆಳಗ್ಗೆ 6.30ಕ್ಕೆ ಸಮೀಪದ ಮಲ್ಲೇನಹಳ್ಳಿ ಗ್ರಾಮದಿಂದ ಪ್ರಾರಂಭಿಸಲಾಯಿತು. ನಾಗಮಂಗಲ ಪಟ್ಟಣ ಪ್ರವೇಶಿಸುತ್ತಿದ್ದಂತೆ ಭಾರೀ ಸಂಖ್ಯೆಯ ಜನತೆ ಪಾದಯಾತ್ರೆಯನ್ನು ಸ್ವಾಗತಿಸಿದರು.
ನಾಗಮಂಗಲ ಪ್ರವಾಸಿ ಮಂದಿರ ವೃತ್ತವನ್ನು ಬಳಸಿಕೊಂಡು ಮುನ್ನಡೆದ ರಾಹುಲ್ಗಾಂಧಿ ಮತ್ತಿತರರು ಉಪ್ಪಾರಹಳ್ಳಿ ಗೇಟ್ ಬಳಿ ಬೆಳಗಿನ ಉಪಹಾರ ಸೇವಿಸಿ ಕೆಲ ಸಮಯ ವಿಶ್ರಾಂತಿ ಪಡೆದರು. ಮತ್ತೆ 9.30ಕ್ಕೆ ಪಾದಯಾತ್ರೆ ಮುಂದುವರಿಸಿ ತಾಲೂಕಿನ ಅಂಚೆಭೂವನಹಳ್ಳಿ ಬಳಿ ಬೆಳಗ್ಗೆ 10.30ರ ವೇಳೆಗೆ ತಲುಪಿ ವಿಶ್ರಾಂತಿ ಪಡೆಯಿತು. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನತೆಗೆ ಅಂಚೆ ಭೂವನಹಳ್ಳಿ ಬಳಿ ಊಟ ವಿತರಿಸಲಾಯಿತು. ಸಂಜೆ ಮತ್ತೆ 4 ಗಂಟೆಗೆ ಪಾದಯಾತ್ರೆ ಆರಂಭವಾಗಿ 6.30ರ ವೇಳೆಗೆ ಬೆಳ್ಳೂರು ತಲುಪಲಿದೆ. ಬಳಿಕ ಆದಿಚುಂಚನಗಿರಿಗೆ ತೆರಳಿದ ರಾಹುಲ್ ಮತ್ತು ಇತರರು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಮಕ್ಕಳೊಂದಿಗೆ ಹೆಜ್ಜೆ ಹಾಕಿದ ರಾಹುಲ್
ಮಾರ್ಗ ಮಧ್ಯೆದಲ್ಲಿ ಬರುವ ಹಳ್ಳಿಗಳ ಜನತೆ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕಾಂಗ್ರೆಸ್ ಯುವರಾಜ ರಾಹುಲ್ಗಾಂಧಿಯವರನ್ನು ನೋಡಲು ಮುಗಿಬಿದ್ದರು. ಈ ವೇಳೆ ವೃದ್ಧರು, ವೃದ್ದ ಮಹಿಳೆಯರನ್ನು ಕಂಡ ರಾಹುಲ್ ಅವರನ್ನು ತಮ್ಮ ಬಳಿಗೆ ಕರೆದು ಮಾತನಾಡಿಸಿ ಮುನ್ನಡೆದರು. ಕೆಲ ಯುವತಿಯರು ರಾಹುಲ್ರೊಂದಿಗೆ ಹೆಜ್ಜೆಹಾಕಿ ಸೆಲ್ಫಿ ಗಿಟ್ಟಿಸಿಕೊಂಡರು. ಮತ್ತೆ ಕೆಲವರು ತಮ್ಮ ಪುಟ್ಟ ಮಕ್ಕಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಜೊತೆಗೆ ತಮ್ಮ ಮೊಬೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಗು ನಗುತ್ತಲೇ ಅವರ ಹೆಗಲ ಮೇಲೆ ಕೈ ಹಾಕಿ ಸೆಲ್ಫಿ ನೀಡಿದ ರಾಹುಲ್ ಅವರನ್ನೂ ತಮ್ಮೊಡನೆ ಕರೆದುಕೊಂಡು ಪಾದಯಾತ್ರೆ ಮುಂದುವರಿಸಿದ್ದು ವಿಶೇಷವಾಗಿತ್ತು.

ನಾಗಮಂಗಲ ಪಟ್ಟಣದಲ್ಲಿ ಭಾರೀ ಜನಸ್ತೋಮ
ಪುಟ್ಟ ಮಕ್ಕಳಿಗೆ ಚಾಕೋಲೇಟ್ ನೀಡಿದ ರಾಹುಲ್ ಗಾಂಧಿ ಅವರು ಮಕ್ಕಳ ಕೆನ್ನೆ ಸವರಿ, ಮೈದಡವಿ ಮುನ್ನಡೆಯುತ್ತಿದ್ದರು. ಕೆಲ ಯುವಕರು ಅವರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಶುಕ್ರವಾರ ಸಹ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ರಾಹುಲ್ ಆಗಮಿಸುವ ವೇಳೆ ನಾಗಮಂಗಲ ಪಟ್ಟಣದಲ್ಲಿ ಭಾರೀ ಜನಸಮೂಹವೇ ನೆರೆದಿತ್ತು.
ಭಾರತ್ ಜೋಡೋ ಯಾತ್ರೆಯ ಟೀಶರ್ಟ್ ಧರಿಸಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಹಿಡಿದು ರಾಹುಲ್ ಪರ ಘೋಷಣೆ ಕೂಗುತ್ತಾ ಸಾಗಿದರು. ರಸ್ತೆಯ ಎರಡೂ ಕಡೆ ಭಾರತ್ ಜೋಡೋ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್ಗಳು ಹಾರಾಡುತ್ತಿದ್ದರೆ, ಕಾಂಗ್ರೆಸ್ ನಾಯಕರ ಕಟೌಟ್ಗಳು, ಬೃಹದಾಕಾರದ ಫ್ಲೆಕ್ಸ್ಗಳು, ಕಾಂಗ್ರೆಸ್ ಬಾವುಟಗಳು ರಾರಾಜಿಸುತ್ತಿದ್ದವು. ಮೂರ್ನಾಲ್ಕು ಕಿ.ಮೀ. ದೂರದವರೆಗೆ ಜನರು ಪಾದಯಾತ್ರೆಯಲ್ಲಿ ನಡೆದರು.

ಟಿಪ್ಪು ಸುಲ್ತಾನ್, ಕುವೆಂಪು ಪುಸ್ತಕ ವಿತರಣೆ
ಮಂಡ್ಯದ ನಾಗಮಂಗಲ ವಕೀಲರು ರಾಹುಲ್ ಗಾಂಧಿಗೆ ವಿಶೇಷ ಉಡುಗೊರೆ ನೀಡಿದರು . ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ ಫೋಟೊ ಜೊತೆಗೆ ಟಿಪ್ಪು ಸುಲ್ತಾನ್, ಕುವೆಂಪು ಪುಸ್ತಕ ಕೊಟ್ಟು ಭಾವೈಕ್ಯತೆ ಸಾರಿದ್ದಾರೆ. ನಾಗಮಂಗಲಕ್ಕೆ ಪ್ರವೇಶಿಸುತ್ತಿದ್ದಂತೆ ಭಾರತ್ ಜೋಡೋ ಯಾತ್ರೆ ಕೀ ಜೈ, ರಾಹುಲ್ ಗಾಂಧಿ ಕೀ ಜೈ ಎಂದು ಜೈಕಾರಗಳು ಮೊಳಗಿದವು. ಜನಸಾಗರದತ್ತ ಕೈ ಬೀಸುತ್ತಾ ಪಾದಯಾತ್ರೆಯಲ್ಲಿ ರಾಹುಲ್ ಮುನ್ನಡೆಯುತ್ತಿದ್ದರು. ಪೊಲೀಸರು ಎರಡೂ ಕಡೆ ಹಗ್ಗ ಹಿಡಿದುಕೊಂಡು ಸಾರ್ವಜನಿಕರನ್ನು ನಿಯಂತ್ರಿಸುತ್ತಾ ಪಾದಯಾತ್ರೆ ಸುಗಮವಾಗಿ ನಡೆಯುವುದಕ್ಕೆ ನೆರವಾದರು.

ಇಡಿ ವಿಚಾರಣೆ ಹಿನ್ನೆಲೆ ಡಿಕೆಶಿ ಗೈರು
ಕರ್ನಾಟಕ ಭಾರತ್ ಜೋಡೋ ಪಾದಯಾತ್ರೆ ಜವಾಬ್ದಾರಿ ವಹಿಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶುಕ್ರವಾರ ಪಾದಯಾತ್ರೆಯಲ್ಲಿ ಕಾಣಿಸಿಕೊಳ್ಳಲಿಲ್ಲ. ಜಾರಿ ನಿರ್ದೇಶನಾಲಯದ ವಿಚಾರಣೆ ಇರುವ ಹಿನ್ನಲೆ ಅವರು ದೆಹಲಿಗೆ ತೆರಳಿದ್ದಾರೆ. ಒಕ್ಕಲಿಕರ ಶಕ್ತಿ ಕೇಂದ್ರವಾದ ಆದಿ ಚುಂಚನಗಿರಿ ಮಠದ ಮೈದಾನದಲ್ಲಿ ರಾಹುಲ್ ವಾಸ್ತವ್ಯ ಮಾಡುತ್ತಿದ್ದರೂ ಸಹಾ ಡಿಕೆ ಬ್ರದರ್ಸ್ ಜೊತೆಗಿರಲು ಸಾಧ್ಯವಾಗುತ್ತಿಲ್ಲ.
ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ, ಧ್ರುವನಾರಾಯಣ್, ಶಾಸಕ ಪ್ರಿಯಾಂಕ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲ, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಸಹಸ್ರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications