ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸಲು ಭಾರತೀಯ ಕಿಸಾನ್ ಸಂಘ ಒತ್ತಾಯ
ಮಂಡ್ಯ, ಜೂನ್ 28: ಗೋಹತ್ಯೆ ನಿಷೇಧ ಕಾಯ್ದೆಯನ್ನು ನಿಷ್ಕ್ರಿಯಗೊಳಿಸದೇ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಇನ್ನೂ ಕಠಿಣ ಕ್ರಮ ಕೈಗೊಂಡು ಗೋವುಗಳನ್ನು ಉಳಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕರ್ನಾಟಕದ ಮುಖ್ಯ ಕಸುಬು ಹೈನುಗಾರಿಕೆ ಮತ್ತು ವ್ಯವಸಾಯ. ಶೇ. 70ರಷ್ಟು ಗೋವುಗಳನ್ನೇ ಆಶ್ರಯಿಸಿದ್ದಾರೆ. ಹೈನುಗಾರಿಕೆ ಇಲ್ಲದೆ ವ್ಯವಸಾಯವಿಲ್ಲ, ವ್ಯವಸಾಯಕ್ಕೆ ಮುಖ್ಯವಾದ ಆಧಾರ ಗೋವು. ಆದ್ದರಿಂದ ಹೈನುಗಾರಿಕೆ ವ್ಯವಸಾಯ ಒಂದಕ್ಕೊಂದು ಪೂರಕ. ದೇಶಿ ತಳಿ ಹಸು ಮತ್ತು ಎತ್ತುಗಳು ಇಂದು ಅಳಿವಿನ ಅಂಚಿನಲ್ಲಿವೆ. ಗೋವು ದೇಶದ ಪ್ರಾಣ ಎಂದುಕೊಂಡು ಕಳೆದ 75 ವರ್ಷಗಳಿಂದ ಸರ್ಕಾರಗಳು ಗೋವು ಅಭಿವೃದ್ಧಿಯನ್ನು ಕಡೆಗಣಿಸಿವೆ ಎಂದು ಆರೋಪಿಸಿದರು.
ಕೃಷಿ ಕ್ಷೇತ್ರ ತುಂಬಾ ಸೊರಗಿ ಹೋಗಿದೆ. ನಷ್ಟದ ಹಾದಿಯಲ್ಲಿರುವ ವ್ಯವಸಾಯ ಬದುಕಿನಿಂದ ಇಂದಿನ ಯುವ ಜನತೆ ದಿಕ್ಕು ತೋಚದೆ ಉದ್ಯೋಗ ಅರಸುತ್ತಾ ನಗರಗಳತ್ತ ವಲಸೆ ಹೋಗುತ್ತಿದ್ದಾರೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಗೋಹತ್ಯೆ ನಿಷೇದ ಕಾಯ್ದೆಯನ್ನು ನಿಷ್ಕ್ರಿಯಗೊಳಿಸದೇ ಕಾಯ್ದೆಯನ್ನು ಬಲಪಡಿಸಿ ಇನ್ನೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಳ್ಳಿಗಾಡಿನಲ್ಲಿ ಗೋವು ಪರಪೂಜ್ಯ ದೇವತೆಯಾಗಿದೆ. ಗೋಮಾತೆಯನ್ನು ದೇವರೆಂದೇ ನಂಬಿರುವ ನಮ್ಮ ಸಮಾಜದ ಎಲ್ಲ ವರ್ಗದ ಸ್ವಾಮೀಜಿ, ಮಠಾಧಿಪತಿಗಳು ಬೇರೆ ಎಲ್ಲಾ ವಿಷಯಗಳಲ್ಲಿ ಮೂಗು ತೂರಿಸುವರು. ಆದರೆ, ಗೋವನ್ನು ದೇವರೆಂದು ಪೂಜಿಸುವ ಈ ಮಠಾಧಿಪತಿಗಳು ಈ ವಿಚಾರದಲ್ಲಿ ದಿವ್ಯ ಮೌನಕ್ಕೆ ಶರಣಾಗಿರುವುದು ಅಚ್ಚರಿ ಮೂಡಿಸಿದೆ. ಮೌನವಾಗಿದ್ದುಕೊಂಡೇ ಸಹಕರಿಸುದ್ದಾರೆಂಬ ಅನುಮಾನವೂ ವ್ಯಕ್ತವಾಗುತಿದೆ ಎಂದು ಆರೋಪಿಸಿದರು.

ಗೋವಿನಿಂದ ಸಾವಿರಾರು ಉಪಯೋಗಗಳು ಮಾನವಕುಲಕ್ಕೆ ದೊರೆತಿದೆ. ಅದರಲ್ಲಿ ಬಹುಮುಖ್ಯವಾಗಿ ನಾಟಿ ಹಸುವಿನ ಹಾಲು ಔಷಧೀಯ ಗುಣ ಹೊಂದಿದೆ. ಹಾಲು ಕೊಡದ ಹಸುವು ತನ್ನ ಜೀವಿತಾವಧಿಯಲ್ಲಿ ಪ್ರತಿ ದಿನವೂ ಸಗಣಿ, ಗಂಜಲಗಳನ್ನು ನೀಡುತ್ತದೆ. ನೈಸರ್ಗಿಕ ಕೃಷಿಗೆ ಅತ್ಯಮೂಲ್ಯವಾದ ಅಮೃತವಾಗಿದ್ದು, ಇಂದಿನ ದಿನದಲ್ಲಿ ನಮ್ಮ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಸಾವಿರಾರು ರೈತರುಗಳು ಗೋ ಆಧಾರಿತ ನೈಸರ್ಗಿಕ ಕೃಷಿಯಿಂದ ಸಬಲರಾಗಿ ಸಮಾಜಕ್ಕೆ ವಿಷಮುಕ್ತ ಆಹಾರವನ್ನು ಕೊಡುತ್ತಿದ್ದಾರೆ ಹಾಗೂ ವಿಷಮುಕ್ತ ಭೂಮಿಯನ್ನು ಹೊಂದಿದ್ದಾರೆ ಎಂದು ಆರೋಪಿಸಿದರು.
ಗೋವಿನ ಮರಣದ ನಂತರವೂ ಗೋವಿನ ದೇಹದಿಂದ ಗೋಜಲ ತಯಾರು ಮಾಡುವ ವಿಧಾನವೂ ಕೂಡ ಅಸ್ತಿತ್ವದಲ್ಲಿದೆ. ಈ ಗೋಜಲದಿಂದ 50 ಸಾವಿರಕ್ಕೂ ಹೆಚ್ಚು ರೂಪಾಯಿ ಗೊಬ್ಬರ ತಯಾರಾಗುತ್ತದೆ. ಇಂದಿನ ದಿನಗಳಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಕೃಷಿ ಯಾಂತ್ರೀಕರಣವಾಗಿದ್ದರೂ ಸಹ ಬಹುತೇಕ ಕೆಲಸಗಳಿಗೆ ಎತ್ತುಗಳು ಅನಿವಾರ್ಯ. ಈ ಸಂತತಿ ಅಳಿವಿನ ಅಂಚಿನಲ್ಲಿರುವುದು ಬಹಳ ದುಃಖಕರ ವಿಚಾರ ಎಂದರು.
ಪ್ರತಿಭಟನೆಯಲ್ಲಿ ಕಿಸಾನ್ ಸಂಘದ ಮುಖಂಡರಾದ ಹಾಡ್ಯ ರಮೇಶರಾಜು, ವೆಂಕಟೇಶ, ಪುಟ್ಟಮ್ಮ, ಅಪ್ಪಾಜಿ, ಹರೀಶ್, ಜೋಗೀಗೌಡ, ಮಹದೇವು, ನರಸಿಂಹ, ಸಿದ್ದರಾಜುಗೌಡ, ಶಿವಣ್ಣ, ವಸಂತ, ವಿವೇಕ ಸೇರಿದಂತೆ ಹಲವರು ಭಾಗವಹಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications