Get Updates
Get notified of breaking news, exclusive insights, and must-see stories!

ನಾಗಮಂಗಲ ಗಲಭೆ ಅಖಾಡಕ್ಕೆ ಇಂದು ಬಿಜೆಪಿ ನಾಯಕರ ಎಂಟ್ರಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕೂಡ ಈ ಘಟನೆಯನ್ನು ಖಂಡಿಸಿದ್ದು, ಇದರ ಸತ್ಯಾಸತ್ಯತೆ ತಿಳಿಯಲು ಒಂದು ಸತ್ಯಶೋಧನಾ ಸಮಿತಿಯನ್ನೂ ರಚಿಸಿದೆ. ಇಂದು ಈ ಬಿಜೆಪಿಯ ಸಮಿತಿಯು ಮಂಡ್ಯಕ್ಕೆ ನಾಗಮಂಗಲಕ್ಕೆ ತೆರಳಲಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿಯು ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅಲ್ಲದೆ ಈ ಗಲಭೆಯು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌-ಬಿಜೆಪಿ ನಡುವೆ ಕಿತ್ತಾಟಕ್ಕೂ ಕಾರಣವಾಗಿದೆ.

BJP Leaders Will Visit Nagamangala In Mandya District Today

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯು ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ತಂಡವನ್ನು ರಚಿಸಿ, ಸಮಗ್ರ ವರದಿ ನೀಡಲು ನಿರ್ದೇಶಿಸಿತ್ತು. ಅದರಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸತ್ಯಶೋಧನಾ ತಂಡ ರಚಿಸಿ ಆದೇಶಿಸಿದ್ದು, ಇದರಲ್ಲಿ ಬಿಜೆಪಿ ನಾಯಕರಾದ ಸಿ.ಎನ್‌.ಅಶ್ವತ್ಥ್‌ ನಾರಾಯಣ್‌, ಬೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್ ಇದ್ದಾರೆ.

ನಾಗಮಂಗಲದಲ್ಲಿ ಕಳೆದ ಬುಧವಾರ ರಾತ್ರಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಈ ಘಟನೆ ನಡೆದಿತ್ತು. ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು. ಕೆಲವರು ಅಲ್ಲಿನ

ಮೆರವಣಿಗೆ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್‌ ಬಾಂಬ್‌ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಅಲ್ಲಿದ್ದ ಕೆಲ ವಾಹನಗಳಿಗೂ ಕೂಡ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.

BJP Leaders Will Visit Nagamangala In Mandya District Today

ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಕೈಯಲ್ಲಿ ಕತ್ತಿ, ತಲ್ವಾರ್‌ ಕೂಡ ಹಿಡಿದು ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಲಾಠಿ ಚಾರ್ಜ್‌ ಮೂಲಕ ದುಷ್ಕರ್ಮಿಗಳನ್ನು ಅಲ್ಲಿಂದ ಚದುರಿಸಿ, ಅವರು ತಂದಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು 144 ಸೆಕ್ಷನ್‌ ಜಾರಿ ಮಾಡಲಾಗಿತ್ತು.

ಇನ್ನು ಇಲ್ಲಿನ ಮುಸ್ಲಿಂ ಸಮುದಾಯದ ಕೆಲ ಯುವಕರು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ ಎಂದು ಗಣೇಶೋತ್ಸವದ ಯುವಕರು ಆರೋಪಿಸಿ, ಗಣಪತಿ ಮೂರ್ತಿಯನ್ನು ನೇರವಾಗಿ ನಾಗಮಂಗಲ ಪೊಲೀಸ್‌ ಠಾಣೆಯ ಎದುರು ಕರೆದೊಯ್ದು, ಧಿಕ್ಕಾರ ಕೂಡ ಕೂಗಿದ್ದರು.

ಬಳಿಕ ಈ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ನಾಯಕರು ಇದರ ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ಸಮಿತಿ ರಚಿಸಿ ಆದೇಶಿಸಿತ್ತು. ಅದರಂತೆ ಗಲಭೆ ಸಂಬಂಧ ಸತ್ಯಾಂಶ ತಿಳಿಯಲು ಇಂದು ಬಿಜೆಪಿ ನಾಯಕರು ಮಂಡ್ಯಕ್ಕೆ ತೆರಳಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಿಜೆಪಿ ಶಾಸಕ ಸಿ.ಎನ್‌.ಅಶ್ವತ್ಥ ನಾರಾಯಣ, ನಮ್ಮ ನೇತೃತ್ವದ ಸತ್ಯಶೋಧನಾ ಸಮಿತಿ ನಾಗಮಂಗಲದ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ನಾಗಮಂಗಲದ ಗಲಭೆಗೆ ಅಲ್ಲಿನ ಪೊಲೀಸರ ವೈಫಲ್ಯವೇ ಕಾರಣ ಎಂಬುದು ಗೊತ್ತಾಗಿದೆ. ಈ ಘಟನೆ ನಡೆದಾಗ ರಾಜ್ಯ ಸರ್ಕಾರ ಇದನ್ನು ಹಗುರವಾಗಿ ಪರಿಗಣಿಸಿತ್ತು. ಅದರಂತೆ ಗುಪ್ತಚರ ವಿಭಾಗದ ಮುಖ್ಯಸ್ಥರ ವರ್ಗಾವಣೆ ಮಾಡುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಒಂದು ಧರ್ಮದ ಜನರ ಪರ ಕೆಲಸ ಮಾಡುತ್ತಿದೆ. ಒಂದು ಕೋಮಿನವರ ಪ್ರಚೋದನೆಯೇ ನಾಗಮಂಗಲದಲ್ಲಿ ಗಲಭೆಗೆ ಕಾರಣ ಎಂದೂ ಅಶ್ವತ್ಥನಾರಾಯಣ ದೂರಿದ್ದಾರೆ. ಒಂದು ಬಿಜೆಪಿ ನಾಯಕರು ನಾಗಮಂಗಲದ ಘಟನಾ ಸ್ಥಳಕ್ಕೆ ತೆರಳಿ, ಅಲ್ಲಿನ ಗಲಭೆಗೆ ಕಾರಣ ಏನು? ಎನ್ನುವ ಅಂಶಗಳನ್ನು ಪತ್ತೆ ಹಚ್ಚಲಿದ್ದಾರೆ. ಬಳಿಕ ವರದಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+